Homeಕರ್ನಾಟಕಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ ಎನ್ನುತ್ತಾರೆ ಕಾರ್ಮಿಕರು

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಿಮಿಟೆಡ್ ಕಾರ್ಮಿಕರು ನಿನ್ನೆಯಿಂದ ಅಹೋರಾತ್ರಿ ಧರಣಿ ನೆಡೆಸುತ್ತಿದ್ದು, ಧಿಡೀರ್ ಲಾಕ್ ಔಟ್ ಮಾಡುವ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇದೀಗ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಈ ಕುರಿತು ನಾನು ಗೌರಿ.ಕಾಂ ಜೊತೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕ ಯೂನಿಯನ್ ಪದಾಧಿಕಾರಿಯಾದ ಗಂಗಾಧರ್, “ನಮ್ಮಲ್ಲಿ ಹಲವಾರು ಸಮಸ್ಯೆಗಳು ಮೊದಲಿಂದಲೂ ಇವೆ. ಕಂಪನಿ ಲಾಕ್‌ ಔಟ್ ಮಾಡುವುದಾಗಿ ಹೇಳುತ್ತಿರುವುದು ಇದು 3ನೇ ಬಾರಿ. ಆದರೆ ಲಾಕ್‌ಡೌನ್ ನಂತರ ನಮ್ಮ ಸಮಸ್ಯೆಗಳು ಮತ್ತಷ್ಟು ಜಟಿಲವಾಗಿವೆ. ಮೊದಲಿಗೆ ನಾವು ಕೆಲಸ ಮಾಡುವ ಶಿಫ್ಟ್‌ ವ್ಯವಸ್ಥೆಯೇ ಅವೈಜ್ಞಾನಿಕವಾಗಿದ್ದು, ಮೊದಲ ಶಿಫ್ಟ್‌ ಮಧ್ಯರಾತ್ರಿ 2 ಗಂಟೆಗೆ ಮುಗಿಯುತ್ತದೆ. ಎರಡನೇ ಶಿಫ್ಟ್‌ ಬೆಳಗಿನ ಜಾವ 3 ಗಂಟೆಗೆ ಆರಂಭವಾಗುತ್ತದೆ. ಪ್ರತಿ ವಾರವೂ ಈ ಶಿಫ್ಟ್‌ ಬದಲಾಗುತ್ತಲೇ ಇರುತ್ತದೆ. ಹಾಗಾಗಿ ದೈನಂದಿನ ಅವಶ್ಯಕ ಕೆಲಸಗಳಾದ ಊಟ-ನಿದ್ರೆಯಲ್ಲಿ ಏರುಪೇರಾಗಿ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

“ನಮ್ಮದು ಜಪಾನ್ ಮೂಲದ ಕಂಪನಿಯಾಗಿರುವುದರಿಂದ ಅಲ್ಲಿನಂತೆಯೇ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಉದಾಹರಣೆಗೆ, ಇಂದು ದಿನಕ್ಕೆ ನಮ್ಮಲ್ಲಿ 300 ಕಾರುಗಳು ಸಿದ್ಧವಾಗುತ್ತವೆ. ಹಾಗಾಗಿ ಒಬ್ಬ ವ್ಯಕ್ತಿಗೆ ದಿನದಲ್ಲಿ 480 ನಿಮಿಷ ಕೆಲಸ ಮಾಡಬೇಕಾಗುತ್ತದೆ. ಅಂದರೆ 1 ಕಾರಿಗೆ 3 ನಿಮಿಷದಂತೆ ಒಬ್ಬ ಕಾರ್ಮಿಕ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಇದೇ ಸಮಯವನ್ನು ಇಡೀ 300 ಕಾರುಗಳಿಗೂ ಅನ್ವಯಿಸಬೇಕು ಎಂದು ಹೇಳುತ್ತಾರೆ. ಅಂದರೆ ಮೊದಲ ಸೆಕೆಂಡಿನಿಂದ ಯಾವ ಸಾಮರ್ಥ್ಯದಲ್ಲಿ ಕೆಲಸ ಆರಂಭಿಸಿರುತ್ತೇನೋ ಅದನ್ನೇ ಕೊನೆಯ ಸೆಕೆಂಡ್‌ವರೆಗೂ ಉಳಿಸಿಕೊಂಡು ಕೆಲಸ ಮಾಡಬೇಕು”

“ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ವ್ಯವಸ್ಥೆಯೇ ತುಂಬಾ ಕಷ್ಟವಾದುದಾಗಿದ್ದು, ಇದರ ವಿರುದ್ಧ ಹಲವು ವರ್ಷಗಳಿಂದ ಹೋರಾಡುತ್ತಲೇ ಇದ್ದೇವೆ. ಆದರೂ ಯಾವುದೇ ಪೂರಕ ಕ್ರಮ ಕೈಗೊಂಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

“ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದನೆ ಮಾಡಬೇಕು ಎಂದು ಕಂಪನಿಯೇ ಹೇಳುತ್ತದೆ. ಹಾಗಾಗಿ ಕಂಪನಿ ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ. ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತದೆ. ಆದರೆ ಈಗ ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಅದೇ ಕೆಲಸವನ್ನು ಮುಗಿಸಬೇಕು ಎಂದು ಹೇಳುತ್ತದೆ”

“ಇದು ಯಾವ ನ್ಯಾಯ. ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ, ತಾಂತ್ರಿಕ ಸಹಕಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಸಂಬಳದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಆದರೂ ಉತ್ಪಾದನೆ ಮಾತ್ರ ಹೆಚ್ಚಾಗಬೇಕು ಎಂದು ಹೇಳುತ್ತಿದ್ದಾರೆ. ಹಳೆಯ ನಿಯಮವೇ ನಮಗೆ ಹೊರೆಯಾಗಿರುವಾಗ ಈ ಹೊಸ ನಿಯಮ ಬಾಣಲೆಯಿಂದ ಬೆಂಕಿಗೆ ಹಾಕಿದಂತಾಗಿದೆ. ಅಷ್ಟಕ್ಕೂ ಈ ಕಂಪನಿಗೆ ವರ್ಷಕ್ಕೆ 20 ಸಾವಿರ ಕೋಟಿ ವ್ಯವಹಾರವಿದೆ. ಈ ವರ್ಷ 350 ಕೋಟಿ ಲಾಭವಾಗಿದೆ ಎಂದು ಕಂಪನಿಯೇ ಅಧಿಕೃತವಾಗಿ ಹೇಳಿಕೊಂಡಿದೆ” ಎಂದು ಅಳಲು ತೋಡಿಕೊಂಡರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

“ಈಗಾಗಲೇ 40 ವರ್ಷ ದಾಟುತ್ತಿದ್ದಂತೆ ಕೆಲವರಿಗೆ ಮೂಲೆ ಸವೆತ ಸೇರಿದಂತೆ ಹಲವು ಖಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಇನ್ನು ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನಮಗೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ. ಕೆಲಸದ ಮಧ್ಯೆ ನೀರು ಕುಡಿಯಬೇಕಾದರೂ ಮ್ಯಾನೇಜರ್‌ಗೆ ಕರೆ ಮಾಡಿ, ಅವರು ಬಂದು ಪತ್ರ ಬರೆಸಿಕೊಂಡು ಅಪ್ಪಣೆ ಕೊಟ್ಟರೆ ಮಾತ್ರ ಹೋಗಿ ಕುಡಿಯಬೇಕು. ಇದು ನಮ್ಮ ಪರಿಸ್ಥಿತಿ. ಇವರು ಅಕ್ಷರಶಹ ಕಾರ್ಪೋರೇಟ್ ರೌಡಿಗಳಂತೆ ವರ್ತಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೂ ಕಾರ್ಪೋರೇಟ್‌ಗಳ ಪರ ಇರುವಂತೆ ವರ್ತಿಸುತ್ತಿದ್ದಾರೆ. ಆದರು ಯಾವುದೇ ಕ್ರಮ ಕೈಗೊಳ್ಳದಿರುವುದು ನಮ್ಮ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಮೊದಲೂ ಇದನ್ನೆಲ್ಲಾ ಪ್ರಶ್ನಿಸುವ ಅನೇಕರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ, ಅಮಾನತುಗಳಂತಹ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗಾಗಿ ಒಂದು ಸಭೆ ಮಾಡಿಕೊಳ್ಳೋಣ ಎಂದು ಮೊದಲ ಶಿಫ್ಟಿನ ಕಾರ್ಮಿಕರೆಲ್ಲವೂ ಸಭೆ ಸೇರಿದ್ದೆವು. ಈಗ ಅದನ್ನೇ ಕಾನೂನು ಬಾಹಿರ ಹೋರಾಟವೆಂದು ಕಂಪನಿಯನ್ನು ಲಾಕ್‌ ಔಟ್ ಮಾಡಲು ಮುಂದಾಗಿದೆ. ಆದರೆ ನಮಗೆ ನ್ಯಾಯ ಸಿಗುವವರೆಗೂ ನಾವು ಹೋರಾಡುತ್ತೇವೆ” ಎಂದು ಹೇಳಿದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...