Homeಕರ್ನಾಟಕಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ ಎನ್ನುತ್ತಾರೆ ಕಾರ್ಮಿಕರು

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಿಮಿಟೆಡ್ ಕಾರ್ಮಿಕರು ನಿನ್ನೆಯಿಂದ ಅಹೋರಾತ್ರಿ ಧರಣಿ ನೆಡೆಸುತ್ತಿದ್ದು, ಧಿಡೀರ್ ಲಾಕ್ ಔಟ್ ಮಾಡುವ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇದೀಗ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಈ ಕುರಿತು ನಾನು ಗೌರಿ.ಕಾಂ ಜೊತೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕ ಯೂನಿಯನ್ ಪದಾಧಿಕಾರಿಯಾದ ಗಂಗಾಧರ್, “ನಮ್ಮಲ್ಲಿ ಹಲವಾರು ಸಮಸ್ಯೆಗಳು ಮೊದಲಿಂದಲೂ ಇವೆ. ಕಂಪನಿ ಲಾಕ್‌ ಔಟ್ ಮಾಡುವುದಾಗಿ ಹೇಳುತ್ತಿರುವುದು ಇದು 3ನೇ ಬಾರಿ. ಆದರೆ ಲಾಕ್‌ಡೌನ್ ನಂತರ ನಮ್ಮ ಸಮಸ್ಯೆಗಳು ಮತ್ತಷ್ಟು ಜಟಿಲವಾಗಿವೆ. ಮೊದಲಿಗೆ ನಾವು ಕೆಲಸ ಮಾಡುವ ಶಿಫ್ಟ್‌ ವ್ಯವಸ್ಥೆಯೇ ಅವೈಜ್ಞಾನಿಕವಾಗಿದ್ದು, ಮೊದಲ ಶಿಫ್ಟ್‌ ಮಧ್ಯರಾತ್ರಿ 2 ಗಂಟೆಗೆ ಮುಗಿಯುತ್ತದೆ. ಎರಡನೇ ಶಿಫ್ಟ್‌ ಬೆಳಗಿನ ಜಾವ 3 ಗಂಟೆಗೆ ಆರಂಭವಾಗುತ್ತದೆ. ಪ್ರತಿ ವಾರವೂ ಈ ಶಿಫ್ಟ್‌ ಬದಲಾಗುತ್ತಲೇ ಇರುತ್ತದೆ. ಹಾಗಾಗಿ ದೈನಂದಿನ ಅವಶ್ಯಕ ಕೆಲಸಗಳಾದ ಊಟ-ನಿದ್ರೆಯಲ್ಲಿ ಏರುಪೇರಾಗಿ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

“ನಮ್ಮದು ಜಪಾನ್ ಮೂಲದ ಕಂಪನಿಯಾಗಿರುವುದರಿಂದ ಅಲ್ಲಿನಂತೆಯೇ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಉದಾಹರಣೆಗೆ, ಇಂದು ದಿನಕ್ಕೆ ನಮ್ಮಲ್ಲಿ 300 ಕಾರುಗಳು ಸಿದ್ಧವಾಗುತ್ತವೆ. ಹಾಗಾಗಿ ಒಬ್ಬ ವ್ಯಕ್ತಿಗೆ ದಿನದಲ್ಲಿ 480 ನಿಮಿಷ ಕೆಲಸ ಮಾಡಬೇಕಾಗುತ್ತದೆ. ಅಂದರೆ 1 ಕಾರಿಗೆ 3 ನಿಮಿಷದಂತೆ ಒಬ್ಬ ಕಾರ್ಮಿಕ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಇದೇ ಸಮಯವನ್ನು ಇಡೀ 300 ಕಾರುಗಳಿಗೂ ಅನ್ವಯಿಸಬೇಕು ಎಂದು ಹೇಳುತ್ತಾರೆ. ಅಂದರೆ ಮೊದಲ ಸೆಕೆಂಡಿನಿಂದ ಯಾವ ಸಾಮರ್ಥ್ಯದಲ್ಲಿ ಕೆಲಸ ಆರಂಭಿಸಿರುತ್ತೇನೋ ಅದನ್ನೇ ಕೊನೆಯ ಸೆಕೆಂಡ್‌ವರೆಗೂ ಉಳಿಸಿಕೊಂಡು ಕೆಲಸ ಮಾಡಬೇಕು”

“ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ವ್ಯವಸ್ಥೆಯೇ ತುಂಬಾ ಕಷ್ಟವಾದುದಾಗಿದ್ದು, ಇದರ ವಿರುದ್ಧ ಹಲವು ವರ್ಷಗಳಿಂದ ಹೋರಾಡುತ್ತಲೇ ಇದ್ದೇವೆ. ಆದರೂ ಯಾವುದೇ ಪೂರಕ ಕ್ರಮ ಕೈಗೊಂಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

“ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದನೆ ಮಾಡಬೇಕು ಎಂದು ಕಂಪನಿಯೇ ಹೇಳುತ್ತದೆ. ಹಾಗಾಗಿ ಕಂಪನಿ ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ. ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತದೆ. ಆದರೆ ಈಗ ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಅದೇ ಕೆಲಸವನ್ನು ಮುಗಿಸಬೇಕು ಎಂದು ಹೇಳುತ್ತದೆ”

“ಇದು ಯಾವ ನ್ಯಾಯ. ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ, ತಾಂತ್ರಿಕ ಸಹಕಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಸಂಬಳದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಆದರೂ ಉತ್ಪಾದನೆ ಮಾತ್ರ ಹೆಚ್ಚಾಗಬೇಕು ಎಂದು ಹೇಳುತ್ತಿದ್ದಾರೆ. ಹಳೆಯ ನಿಯಮವೇ ನಮಗೆ ಹೊರೆಯಾಗಿರುವಾಗ ಈ ಹೊಸ ನಿಯಮ ಬಾಣಲೆಯಿಂದ ಬೆಂಕಿಗೆ ಹಾಕಿದಂತಾಗಿದೆ. ಅಷ್ಟಕ್ಕೂ ಈ ಕಂಪನಿಗೆ ವರ್ಷಕ್ಕೆ 20 ಸಾವಿರ ಕೋಟಿ ವ್ಯವಹಾರವಿದೆ. ಈ ವರ್ಷ 350 ಕೋಟಿ ಲಾಭವಾಗಿದೆ ಎಂದು ಕಂಪನಿಯೇ ಅಧಿಕೃತವಾಗಿ ಹೇಳಿಕೊಂಡಿದೆ” ಎಂದು ಅಳಲು ತೋಡಿಕೊಂಡರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

“ಈಗಾಗಲೇ 40 ವರ್ಷ ದಾಟುತ್ತಿದ್ದಂತೆ ಕೆಲವರಿಗೆ ಮೂಲೆ ಸವೆತ ಸೇರಿದಂತೆ ಹಲವು ಖಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಇನ್ನು ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನಮಗೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ. ಕೆಲಸದ ಮಧ್ಯೆ ನೀರು ಕುಡಿಯಬೇಕಾದರೂ ಮ್ಯಾನೇಜರ್‌ಗೆ ಕರೆ ಮಾಡಿ, ಅವರು ಬಂದು ಪತ್ರ ಬರೆಸಿಕೊಂಡು ಅಪ್ಪಣೆ ಕೊಟ್ಟರೆ ಮಾತ್ರ ಹೋಗಿ ಕುಡಿಯಬೇಕು. ಇದು ನಮ್ಮ ಪರಿಸ್ಥಿತಿ. ಇವರು ಅಕ್ಷರಶಹ ಕಾರ್ಪೋರೇಟ್ ರೌಡಿಗಳಂತೆ ವರ್ತಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೂ ಕಾರ್ಪೋರೇಟ್‌ಗಳ ಪರ ಇರುವಂತೆ ವರ್ತಿಸುತ್ತಿದ್ದಾರೆ. ಆದರು ಯಾವುದೇ ಕ್ರಮ ಕೈಗೊಳ್ಳದಿರುವುದು ನಮ್ಮ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಮೊದಲೂ ಇದನ್ನೆಲ್ಲಾ ಪ್ರಶ್ನಿಸುವ ಅನೇಕರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ, ಅಮಾನತುಗಳಂತಹ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗಾಗಿ ಒಂದು ಸಭೆ ಮಾಡಿಕೊಳ್ಳೋಣ ಎಂದು ಮೊದಲ ಶಿಫ್ಟಿನ ಕಾರ್ಮಿಕರೆಲ್ಲವೂ ಸಭೆ ಸೇರಿದ್ದೆವು. ಈಗ ಅದನ್ನೇ ಕಾನೂನು ಬಾಹಿರ ಹೋರಾಟವೆಂದು ಕಂಪನಿಯನ್ನು ಲಾಕ್‌ ಔಟ್ ಮಾಡಲು ಮುಂದಾಗಿದೆ. ಆದರೆ ನಮಗೆ ನ್ಯಾಯ ಸಿಗುವವರೆಗೂ ನಾವು ಹೋರಾಡುತ್ತೇವೆ” ಎಂದು ಹೇಳಿದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...