Homeಕರ್ನಾಟಕಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ ಎನ್ನುತ್ತಾರೆ ಕಾರ್ಮಿಕರು

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಿಮಿಟೆಡ್ ಕಾರ್ಮಿಕರು ನಿನ್ನೆಯಿಂದ ಅಹೋರಾತ್ರಿ ಧರಣಿ ನೆಡೆಸುತ್ತಿದ್ದು, ಧಿಡೀರ್ ಲಾಕ್ ಔಟ್ ಮಾಡುವ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇದೀಗ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಈ ಕುರಿತು ನಾನು ಗೌರಿ.ಕಾಂ ಜೊತೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕ ಯೂನಿಯನ್ ಪದಾಧಿಕಾರಿಯಾದ ಗಂಗಾಧರ್, “ನಮ್ಮಲ್ಲಿ ಹಲವಾರು ಸಮಸ್ಯೆಗಳು ಮೊದಲಿಂದಲೂ ಇವೆ. ಕಂಪನಿ ಲಾಕ್‌ ಔಟ್ ಮಾಡುವುದಾಗಿ ಹೇಳುತ್ತಿರುವುದು ಇದು 3ನೇ ಬಾರಿ. ಆದರೆ ಲಾಕ್‌ಡೌನ್ ನಂತರ ನಮ್ಮ ಸಮಸ್ಯೆಗಳು ಮತ್ತಷ್ಟು ಜಟಿಲವಾಗಿವೆ. ಮೊದಲಿಗೆ ನಾವು ಕೆಲಸ ಮಾಡುವ ಶಿಫ್ಟ್‌ ವ್ಯವಸ್ಥೆಯೇ ಅವೈಜ್ಞಾನಿಕವಾಗಿದ್ದು, ಮೊದಲ ಶಿಫ್ಟ್‌ ಮಧ್ಯರಾತ್ರಿ 2 ಗಂಟೆಗೆ ಮುಗಿಯುತ್ತದೆ. ಎರಡನೇ ಶಿಫ್ಟ್‌ ಬೆಳಗಿನ ಜಾವ 3 ಗಂಟೆಗೆ ಆರಂಭವಾಗುತ್ತದೆ. ಪ್ರತಿ ವಾರವೂ ಈ ಶಿಫ್ಟ್‌ ಬದಲಾಗುತ್ತಲೇ ಇರುತ್ತದೆ. ಹಾಗಾಗಿ ದೈನಂದಿನ ಅವಶ್ಯಕ ಕೆಲಸಗಳಾದ ಊಟ-ನಿದ್ರೆಯಲ್ಲಿ ಏರುಪೇರಾಗಿ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

“ನಮ್ಮದು ಜಪಾನ್ ಮೂಲದ ಕಂಪನಿಯಾಗಿರುವುದರಿಂದ ಅಲ್ಲಿನಂತೆಯೇ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಉದಾಹರಣೆಗೆ, ಇಂದು ದಿನಕ್ಕೆ ನಮ್ಮಲ್ಲಿ 300 ಕಾರುಗಳು ಸಿದ್ಧವಾಗುತ್ತವೆ. ಹಾಗಾಗಿ ಒಬ್ಬ ವ್ಯಕ್ತಿಗೆ ದಿನದಲ್ಲಿ 480 ನಿಮಿಷ ಕೆಲಸ ಮಾಡಬೇಕಾಗುತ್ತದೆ. ಅಂದರೆ 1 ಕಾರಿಗೆ 3 ನಿಮಿಷದಂತೆ ಒಬ್ಬ ಕಾರ್ಮಿಕ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಇದೇ ಸಮಯವನ್ನು ಇಡೀ 300 ಕಾರುಗಳಿಗೂ ಅನ್ವಯಿಸಬೇಕು ಎಂದು ಹೇಳುತ್ತಾರೆ. ಅಂದರೆ ಮೊದಲ ಸೆಕೆಂಡಿನಿಂದ ಯಾವ ಸಾಮರ್ಥ್ಯದಲ್ಲಿ ಕೆಲಸ ಆರಂಭಿಸಿರುತ್ತೇನೋ ಅದನ್ನೇ ಕೊನೆಯ ಸೆಕೆಂಡ್‌ವರೆಗೂ ಉಳಿಸಿಕೊಂಡು ಕೆಲಸ ಮಾಡಬೇಕು”

“ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ವ್ಯವಸ್ಥೆಯೇ ತುಂಬಾ ಕಷ್ಟವಾದುದಾಗಿದ್ದು, ಇದರ ವಿರುದ್ಧ ಹಲವು ವರ್ಷಗಳಿಂದ ಹೋರಾಡುತ್ತಲೇ ಇದ್ದೇವೆ. ಆದರೂ ಯಾವುದೇ ಪೂರಕ ಕ್ರಮ ಕೈಗೊಂಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

“ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದನೆ ಮಾಡಬೇಕು ಎಂದು ಕಂಪನಿಯೇ ಹೇಳುತ್ತದೆ. ಹಾಗಾಗಿ ಕಂಪನಿ ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ. ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತದೆ. ಆದರೆ ಈಗ ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಅದೇ ಕೆಲಸವನ್ನು ಮುಗಿಸಬೇಕು ಎಂದು ಹೇಳುತ್ತದೆ”

“ಇದು ಯಾವ ನ್ಯಾಯ. ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ, ತಾಂತ್ರಿಕ ಸಹಕಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಸಂಬಳದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಆದರೂ ಉತ್ಪಾದನೆ ಮಾತ್ರ ಹೆಚ್ಚಾಗಬೇಕು ಎಂದು ಹೇಳುತ್ತಿದ್ದಾರೆ. ಹಳೆಯ ನಿಯಮವೇ ನಮಗೆ ಹೊರೆಯಾಗಿರುವಾಗ ಈ ಹೊಸ ನಿಯಮ ಬಾಣಲೆಯಿಂದ ಬೆಂಕಿಗೆ ಹಾಕಿದಂತಾಗಿದೆ. ಅಷ್ಟಕ್ಕೂ ಈ ಕಂಪನಿಗೆ ವರ್ಷಕ್ಕೆ 20 ಸಾವಿರ ಕೋಟಿ ವ್ಯವಹಾರವಿದೆ. ಈ ವರ್ಷ 350 ಕೋಟಿ ಲಾಭವಾಗಿದೆ ಎಂದು ಕಂಪನಿಯೇ ಅಧಿಕೃತವಾಗಿ ಹೇಳಿಕೊಂಡಿದೆ” ಎಂದು ಅಳಲು ತೋಡಿಕೊಂಡರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

“ಈಗಾಗಲೇ 40 ವರ್ಷ ದಾಟುತ್ತಿದ್ದಂತೆ ಕೆಲವರಿಗೆ ಮೂಲೆ ಸವೆತ ಸೇರಿದಂತೆ ಹಲವು ಖಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಇನ್ನು ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನಮಗೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ. ಕೆಲಸದ ಮಧ್ಯೆ ನೀರು ಕುಡಿಯಬೇಕಾದರೂ ಮ್ಯಾನೇಜರ್‌ಗೆ ಕರೆ ಮಾಡಿ, ಅವರು ಬಂದು ಪತ್ರ ಬರೆಸಿಕೊಂಡು ಅಪ್ಪಣೆ ಕೊಟ್ಟರೆ ಮಾತ್ರ ಹೋಗಿ ಕುಡಿಯಬೇಕು. ಇದು ನಮ್ಮ ಪರಿಸ್ಥಿತಿ. ಇವರು ಅಕ್ಷರಶಹ ಕಾರ್ಪೋರೇಟ್ ರೌಡಿಗಳಂತೆ ವರ್ತಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೂ ಕಾರ್ಪೋರೇಟ್‌ಗಳ ಪರ ಇರುವಂತೆ ವರ್ತಿಸುತ್ತಿದ್ದಾರೆ. ಆದರು ಯಾವುದೇ ಕ್ರಮ ಕೈಗೊಳ್ಳದಿರುವುದು ನಮ್ಮ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಮೊದಲೂ ಇದನ್ನೆಲ್ಲಾ ಪ್ರಶ್ನಿಸುವ ಅನೇಕರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ, ಅಮಾನತುಗಳಂತಹ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗಾಗಿ ಒಂದು ಸಭೆ ಮಾಡಿಕೊಳ್ಳೋಣ ಎಂದು ಮೊದಲ ಶಿಫ್ಟಿನ ಕಾರ್ಮಿಕರೆಲ್ಲವೂ ಸಭೆ ಸೇರಿದ್ದೆವು. ಈಗ ಅದನ್ನೇ ಕಾನೂನು ಬಾಹಿರ ಹೋರಾಟವೆಂದು ಕಂಪನಿಯನ್ನು ಲಾಕ್‌ ಔಟ್ ಮಾಡಲು ಮುಂದಾಗಿದೆ. ಆದರೆ ನಮಗೆ ನ್ಯಾಯ ಸಿಗುವವರೆಗೂ ನಾವು ಹೋರಾಡುತ್ತೇವೆ” ಎಂದು ಹೇಳಿದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...