Homeಕರ್ನಾಟಕಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ ಎನ್ನುತ್ತಾರೆ ಕಾರ್ಮಿಕರು

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಿಮಿಟೆಡ್ ಕಾರ್ಮಿಕರು ನಿನ್ನೆಯಿಂದ ಅಹೋರಾತ್ರಿ ಧರಣಿ ನೆಡೆಸುತ್ತಿದ್ದು, ಧಿಡೀರ್ ಲಾಕ್ ಔಟ್ ಮಾಡುವ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಇದೀಗ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಟೊಯೊಟಾ ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಕಂಪನಿಯ ಲಾಕ್‌ ಔಟ್ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಅಧಿಕಾರಿಗಳು, “ಕಾರ್ಮಿಕರು ಕಾನೂನು ಬಾಹಿರ ಹೋರಾಟವನ್ನು ಮಾಡಿದ್ದಕ್ಕಾಗಿ ಈ ಕಂಪನಿಯನ್ನು ಲಾಕ್‌ ಔಟ್ ಮಾಡಲಾಗುತ್ತಿದೆ” ಎಂದಿದ್ದಾರೆ.

ಈ ಕುರಿತು ನಾನು ಗೌರಿ.ಕಾಂ ಜೊತೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕ ಯೂನಿಯನ್ ಪದಾಧಿಕಾರಿಯಾದ ಗಂಗಾಧರ್, “ನಮ್ಮಲ್ಲಿ ಹಲವಾರು ಸಮಸ್ಯೆಗಳು ಮೊದಲಿಂದಲೂ ಇವೆ. ಕಂಪನಿ ಲಾಕ್‌ ಔಟ್ ಮಾಡುವುದಾಗಿ ಹೇಳುತ್ತಿರುವುದು ಇದು 3ನೇ ಬಾರಿ. ಆದರೆ ಲಾಕ್‌ಡೌನ್ ನಂತರ ನಮ್ಮ ಸಮಸ್ಯೆಗಳು ಮತ್ತಷ್ಟು ಜಟಿಲವಾಗಿವೆ. ಮೊದಲಿಗೆ ನಾವು ಕೆಲಸ ಮಾಡುವ ಶಿಫ್ಟ್‌ ವ್ಯವಸ್ಥೆಯೇ ಅವೈಜ್ಞಾನಿಕವಾಗಿದ್ದು, ಮೊದಲ ಶಿಫ್ಟ್‌ ಮಧ್ಯರಾತ್ರಿ 2 ಗಂಟೆಗೆ ಮುಗಿಯುತ್ತದೆ. ಎರಡನೇ ಶಿಫ್ಟ್‌ ಬೆಳಗಿನ ಜಾವ 3 ಗಂಟೆಗೆ ಆರಂಭವಾಗುತ್ತದೆ. ಪ್ರತಿ ವಾರವೂ ಈ ಶಿಫ್ಟ್‌ ಬದಲಾಗುತ್ತಲೇ ಇರುತ್ತದೆ. ಹಾಗಾಗಿ ದೈನಂದಿನ ಅವಶ್ಯಕ ಕೆಲಸಗಳಾದ ಊಟ-ನಿದ್ರೆಯಲ್ಲಿ ಏರುಪೇರಾಗಿ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

“ನಮ್ಮದು ಜಪಾನ್ ಮೂಲದ ಕಂಪನಿಯಾಗಿರುವುದರಿಂದ ಅಲ್ಲಿನಂತೆಯೇ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಉದಾಹರಣೆಗೆ, ಇಂದು ದಿನಕ್ಕೆ ನಮ್ಮಲ್ಲಿ 300 ಕಾರುಗಳು ಸಿದ್ಧವಾಗುತ್ತವೆ. ಹಾಗಾಗಿ ಒಬ್ಬ ವ್ಯಕ್ತಿಗೆ ದಿನದಲ್ಲಿ 480 ನಿಮಿಷ ಕೆಲಸ ಮಾಡಬೇಕಾಗುತ್ತದೆ. ಅಂದರೆ 1 ಕಾರಿಗೆ 3 ನಿಮಿಷದಂತೆ ಒಬ್ಬ ಕಾರ್ಮಿಕ ಕೆಲಸ ಮಾಡಬೇಕು ಎಂದು ಆಡಳಿತ ಹೇಳುತ್ತದೆ. ಇದೇ ಸಮಯವನ್ನು ಇಡೀ 300 ಕಾರುಗಳಿಗೂ ಅನ್ವಯಿಸಬೇಕು ಎಂದು ಹೇಳುತ್ತಾರೆ. ಅಂದರೆ ಮೊದಲ ಸೆಕೆಂಡಿನಿಂದ ಯಾವ ಸಾಮರ್ಥ್ಯದಲ್ಲಿ ಕೆಲಸ ಆರಂಭಿಸಿರುತ್ತೇನೋ ಅದನ್ನೇ ಕೊನೆಯ ಸೆಕೆಂಡ್‌ವರೆಗೂ ಉಳಿಸಿಕೊಂಡು ಕೆಲಸ ಮಾಡಬೇಕು”

“ಇದು ಒಂದು ರೀತಿಯಲ್ಲಿ ಉಸಿರು ಬಿಗಿಹಿಡಿದು ಕೆಲಸ ಮಾಡುವಂತೆ. ಇದರಲ್ಲಿ ಒಂದು ಕ್ಷಣ ಹೆಚ್ಚು-ಕಡಿಮೆಯಾದರೂ ಇಡೀ ಉತ್ಪಾದನೆಯನ್ನು ನಿಲ್ಲಿಸಿ ನಮ್ಮ ಮೇಲೆ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ವ್ಯವಸ್ಥೆಯೇ ತುಂಬಾ ಕಷ್ಟವಾದುದಾಗಿದ್ದು, ಇದರ ವಿರುದ್ಧ ಹಲವು ವರ್ಷಗಳಿಂದ ಹೋರಾಡುತ್ತಲೇ ಇದ್ದೇವೆ. ಆದರೂ ಯಾವುದೇ ಪೂರಕ ಕ್ರಮ ಕೈಗೊಂಡಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

“ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದನೆ ಮಾಡಬೇಕು ಎಂದು ಕಂಪನಿಯೇ ಹೇಳುತ್ತದೆ. ಹಾಗಾಗಿ ಕಂಪನಿ ಪ್ರತಿ ವರ್ಷವೂ ಕೆಲವರನ್ನು ಕೆಲಸದಿಂದ ತೆಗೆಯುತ್ತದೆ. ಆದರೆ ಉತ್ಪಾದನೆ ಮಾತ್ರ ಅಷ್ಟೇ ಇರಬೇಕು ಎಂದು ಹೇಳುತ್ತದೆ. ಆದರೆ ಈಗ ಲಾಕ್‌ಡೌನ್‌ಗಿಂತ ಮೊದಲು ಒಂದು ಕಾರು ತಯಾರಿಸಲು ಒಬ್ಬ ಕಾರ್ಮಿಕ 3 ನಿಮಿಷ ದುಡಿಯಬೇಕಾಗಿತ್ತು. ಆದರೆ ಈಗ ಹೊಸ ನಿಯಮದ ಪ್ರಕಾರ ಲಾಕ್‌ಡೌನ್‌ ನಂತರದಲ್ಲಿ 2.5 ನಿಮಿಷದಲ್ಲಿ ಅದೇ ಕೆಲಸವನ್ನು ಮುಗಿಸಬೇಕು ಎಂದು ಹೇಳುತ್ತದೆ”

“ಇದು ಯಾವ ನ್ಯಾಯ. ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ, ತಾಂತ್ರಿಕ ಸಹಕಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಸಂಬಳದಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಆದರೂ ಉತ್ಪಾದನೆ ಮಾತ್ರ ಹೆಚ್ಚಾಗಬೇಕು ಎಂದು ಹೇಳುತ್ತಿದ್ದಾರೆ. ಹಳೆಯ ನಿಯಮವೇ ನಮಗೆ ಹೊರೆಯಾಗಿರುವಾಗ ಈ ಹೊಸ ನಿಯಮ ಬಾಣಲೆಯಿಂದ ಬೆಂಕಿಗೆ ಹಾಕಿದಂತಾಗಿದೆ. ಅಷ್ಟಕ್ಕೂ ಈ ಕಂಪನಿಗೆ ವರ್ಷಕ್ಕೆ 20 ಸಾವಿರ ಕೋಟಿ ವ್ಯವಹಾರವಿದೆ. ಈ ವರ್ಷ 350 ಕೋಟಿ ಲಾಭವಾಗಿದೆ ಎಂದು ಕಂಪನಿಯೇ ಅಧಿಕೃತವಾಗಿ ಹೇಳಿಕೊಂಡಿದೆ” ಎಂದು ಅಳಲು ತೋಡಿಕೊಂಡರು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

“ಈಗಾಗಲೇ 40 ವರ್ಷ ದಾಟುತ್ತಿದ್ದಂತೆ ಕೆಲವರಿಗೆ ಮೂಲೆ ಸವೆತ ಸೇರಿದಂತೆ ಹಲವು ಖಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಇನ್ನು ಕೆಲಸದ ನಡುವೆ ಪ್ರತಿ 2 ಗಂಟೆಗೊಮ್ಮೆ ನಮಗೆ ನೀಡುವ 10 ನಿಮಿಷ ವಿಶ್ರಾಂತಿ ಸಮಯದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ವಿಶ್ರಾಂತಿ ಕೊಠಡಿಗೆ ಹೋಗಿ ಬರುವುದಕ್ಕೆ 5-6 ನಿಮಿಷ ಬೇಕು. ಹೀಗಿರುವಾಗ ನೀರು ಕುಡಿಯಲು, ಮೂತ್ರ ವಿಸರ್ಜಿಸಲೂ ಸಮಯವಿಲ್ಲ. ಇದರಲ್ಲಿ ವಿಶ್ರಾಂತಿಯ ಮಾತೇ ಇಲ್ಲ. ಕೆಲಸದ ಮಧ್ಯೆ ನೀರು ಕುಡಿಯಬೇಕಾದರೂ ಮ್ಯಾನೇಜರ್‌ಗೆ ಕರೆ ಮಾಡಿ, ಅವರು ಬಂದು ಪತ್ರ ಬರೆಸಿಕೊಂಡು ಅಪ್ಪಣೆ ಕೊಟ್ಟರೆ ಮಾತ್ರ ಹೋಗಿ ಕುಡಿಯಬೇಕು. ಇದು ನಮ್ಮ ಪರಿಸ್ಥಿತಿ. ಇವರು ಅಕ್ಷರಶಹ ಕಾರ್ಪೋರೇಟ್ ರೌಡಿಗಳಂತೆ ವರ್ತಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾವು ಹೇಳಿಕೊಳ್ಳುವುದಕ್ಕಷ್ಟೇ ಕಾರ್ಪೋರೇಟ್ ಉದ್ಯೋಗಿಗಳು. ಆದರೆ ವಾಸ್ತವದಲ್ಲಿ ಮೂತ್ರ ವಿಸರ್ಜನೆ ಮಾಡಬೇಕಾದರೂ ಇವರ ಬಳಿ ಅಪ್ಪಣೆ ಕೇಳುವ ಕಾರ್ಪೋರೇಟ್ ಗುಲಾಮರಾಗಿದ್ದೇವೆ. ಈ ಕಂಪನಿ, ಭಾರತದ ಮತ್ತು ರಾಜ್ಯದ ಯಾವುದೇ ಕಾನೂನುಗಳನ್ನೂ ಗೌರವಿಸದೇ ತನ್ನಿಷ್ಟದಂತೆ ನಮ್ಮನ್ನು ದುಡಿಸಿಕೊಳ್ಳುತ್ತಿದೆ. ಇದರ ವಿರುದ್ಧ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಸಭೆಗಳನ್ನು ನಡೆಸಿದ್ದೇವೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೂ ಕಾರ್ಪೋರೇಟ್‌ಗಳ ಪರ ಇರುವಂತೆ ವರ್ತಿಸುತ್ತಿದ್ದಾರೆ. ಆದರು ಯಾವುದೇ ಕ್ರಮ ಕೈಗೊಳ್ಳದಿರುವುದು ನಮ್ಮ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಮೊದಲೂ ಇದನ್ನೆಲ್ಲಾ ಪ್ರಶ್ನಿಸುವ ಅನೇಕರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ, ಅಮಾನತುಗಳಂತಹ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗಾಗಿ ಒಂದು ಸಭೆ ಮಾಡಿಕೊಳ್ಳೋಣ ಎಂದು ಮೊದಲ ಶಿಫ್ಟಿನ ಕಾರ್ಮಿಕರೆಲ್ಲವೂ ಸಭೆ ಸೇರಿದ್ದೆವು. ಈಗ ಅದನ್ನೇ ಕಾನೂನು ಬಾಹಿರ ಹೋರಾಟವೆಂದು ಕಂಪನಿಯನ್ನು ಲಾಕ್‌ ಔಟ್ ಮಾಡಲು ಮುಂದಾಗಿದೆ. ಆದರೆ ನಮಗೆ ನ್ಯಾಯ ಸಿಗುವವರೆಗೂ ನಾವು ಹೋರಾಡುತ್ತೇವೆ” ಎಂದು ಹೇಳಿದರು.


ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....