Homeಚಳವಳಿಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ನಡೆಸುತ್ತಿರುವ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದೆ.

- Advertisement -
- Advertisement -

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶವನ್ನು ಧಿಕ್ಕರಿಸುತ್ತಿದ್ದು, ಕಾರ್ಮಿಕರನ್ನು ಕೆಲಸಕ್ಕೆ ಹೋಗಲು ಬಿಡುತ್ತಿಲ್ಲ ಎಂದು ಕಂಪೆನಿಯ ಕಾರ್ಮಿಕರು ಆರೋಪಿಸಿದ್ದಾರೆ.

ಕಂಪನಿಯ ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ನಡೆಸುತ್ತಿರುವ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್‌ 10 ರಿಂದ ಮುಷ್ಕರದ ಕಾರಣ ಹೇಳಿ ಕಂಪೆನಿಯು ಲಾಕ್‌ಔಟ್‌ ಮಾಡಿದೆ. ಈ ನಡುವೆ ಕಾರ್ಮಿಕರು ಧಿಡೀರ್ ಲಾಕ್ ಔಟ್ ಮಾಡಿದ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಈ ನಡುವೆ ಕಂಪೆನಿ ಹಾಗೂ ಕಾರ್ಮಿಕರ ನಡುವೆ ಸಂಧಾನ ಮಾತುಕತೆ ನಡೆದಿದ್ದರೂ ಅದು ಯಶಸ್ವಿಯಾಗಿರಲಿಲ್ಲ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ಈ ನಡುವೆ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಇದೀಗ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಇಂದು ಬೆಳಿಗ್ಗೆಯಿಂದಲೇ ಕಂಪೆನಿಯ ಹೊರಗಡೆ ಸಾವಿರಾರು ಕಾರ್ಮಿಕರು ನೆರೆದಿದ್ದು, ತಮ್ಮ ಕೆಲಸ ನಿರ್ವಹಿಸಲು ಕಾಯುತ್ತಾ ನಿಂತಿದ್ದರೂ ಕಂಪೆನಿ ಒಳಗಡೆಗೆ ಬಿಟ್ಟಿರಲಿಲ್ಲ. ಬೆಳಿಗ್ಗೆಯಿಂದಲೇ ಸ್ಥಳದಲ್ಲಿ ನೂರಾರು ಸಂಖ್ಯೆಯ ಪೊಲೀಸರು ನೆರೆದಿದ್ದಾರೆ. ಸರ್ಕಾರದ ಆದೇಶದ ಹೊರತಾಗಿಯೂ ಕಂಪೆನಿಯು ಉದ್ಯೋಗಿಗಳನ್ನು ಕೆಲಸ ನಿರ್ವಹಿಸುತ್ತೇವೆ ಎಂದು ಹೊರಟರೂ ಬಿಡದೆ ಇರುವುದಕ್ಕಿ ಸಾವಿರಾರು ಕಾರ್ಮಿಕರು ಮುಖ್ಯದ್ವಾರದ ಮುಂದೆ ಪ್ರತಿಭಟನೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...