Homeಚಳವಳಿಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ನಡೆಸುತ್ತಿರುವ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದೆ.

- Advertisement -
- Advertisement -

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶವನ್ನು ಧಿಕ್ಕರಿಸುತ್ತಿದ್ದು, ಕಾರ್ಮಿಕರನ್ನು ಕೆಲಸಕ್ಕೆ ಹೋಗಲು ಬಿಡುತ್ತಿಲ್ಲ ಎಂದು ಕಂಪೆನಿಯ ಕಾರ್ಮಿಕರು ಆರೋಪಿಸಿದ್ದಾರೆ.

ಕಂಪನಿಯ ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ನಡೆಸುತ್ತಿರುವ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್‌ 10 ರಿಂದ ಮುಷ್ಕರದ ಕಾರಣ ಹೇಳಿ ಕಂಪೆನಿಯು ಲಾಕ್‌ಔಟ್‌ ಮಾಡಿದೆ. ಈ ನಡುವೆ ಕಾರ್ಮಿಕರು ಧಿಡೀರ್ ಲಾಕ್ ಔಟ್ ಮಾಡಿದ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಈ ನಡುವೆ ಕಂಪೆನಿ ಹಾಗೂ ಕಾರ್ಮಿಕರ ನಡುವೆ ಸಂಧಾನ ಮಾತುಕತೆ ನಡೆದಿದ್ದರೂ ಅದು ಯಶಸ್ವಿಯಾಗಿರಲಿಲ್ಲ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ಈ ನಡುವೆ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಇದೀಗ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಇಂದು ಬೆಳಿಗ್ಗೆಯಿಂದಲೇ ಕಂಪೆನಿಯ ಹೊರಗಡೆ ಸಾವಿರಾರು ಕಾರ್ಮಿಕರು ನೆರೆದಿದ್ದು, ತಮ್ಮ ಕೆಲಸ ನಿರ್ವಹಿಸಲು ಕಾಯುತ್ತಾ ನಿಂತಿದ್ದರೂ ಕಂಪೆನಿ ಒಳಗಡೆಗೆ ಬಿಟ್ಟಿರಲಿಲ್ಲ. ಬೆಳಿಗ್ಗೆಯಿಂದಲೇ ಸ್ಥಳದಲ್ಲಿ ನೂರಾರು ಸಂಖ್ಯೆಯ ಪೊಲೀಸರು ನೆರೆದಿದ್ದಾರೆ. ಸರ್ಕಾರದ ಆದೇಶದ ಹೊರತಾಗಿಯೂ ಕಂಪೆನಿಯು ಉದ್ಯೋಗಿಗಳನ್ನು ಕೆಲಸ ನಿರ್ವಹಿಸುತ್ತೇವೆ ಎಂದು ಹೊರಟರೂ ಬಿಡದೆ ಇರುವುದಕ್ಕಿ ಸಾವಿರಾರು ಕಾರ್ಮಿಕರು ಮುಖ್ಯದ್ವಾರದ ಮುಂದೆ ಪ್ರತಿಭಟನೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...