Homeಚಳವಳಿಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶ ಧಿಕ್ಕರಿಸುತ್ತಿರುವ ಟೊಯೋಟಾ ಕಂಪನಿ: ಕಾರ್ಮಿಕರ ಆರೋಪ

ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ನಡೆಸುತ್ತಿರುವ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದೆ.

- Advertisement -
- Advertisement -

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ಲಾಕೌಟ್‌ ತೆರೆವುಗೊಳಿಸಬೇಕೆಂಬ ಸರ್ಕಾರದ ಆದೇಶವನ್ನು ಧಿಕ್ಕರಿಸುತ್ತಿದ್ದು, ಕಾರ್ಮಿಕರನ್ನು ಕೆಲಸಕ್ಕೆ ಹೋಗಲು ಬಿಡುತ್ತಿಲ್ಲ ಎಂದು ಕಂಪೆನಿಯ ಕಾರ್ಮಿಕರು ಆರೋಪಿಸಿದ್ದಾರೆ.

ಕಂಪನಿಯ ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ನಡೆಸುತ್ತಿರುವ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್‌ 10 ರಿಂದ ಮುಷ್ಕರದ ಕಾರಣ ಹೇಳಿ ಕಂಪೆನಿಯು ಲಾಕ್‌ಔಟ್‌ ಮಾಡಿದೆ. ಈ ನಡುವೆ ಕಾರ್ಮಿಕರು ಧಿಡೀರ್ ಲಾಕ್ ಔಟ್ ಮಾಡಿದ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ ಸೇರಿದಂತೆ ಇನ್ನೂ ಹತ್ತಾರು ಬೇಡಿಕೆಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಈ ನಡುವೆ ಕಂಪೆನಿ ಹಾಗೂ ಕಾರ್ಮಿಕರ ನಡುವೆ ಸಂಧಾನ ಮಾತುಕತೆ ನಡೆದಿದ್ದರೂ ಅದು ಯಶಸ್ವಿಯಾಗಿರಲಿಲ್ಲ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ಈ ನಡುವೆ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಇದೀಗ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಇಂದು ಬೆಳಿಗ್ಗೆಯಿಂದಲೇ ಕಂಪೆನಿಯ ಹೊರಗಡೆ ಸಾವಿರಾರು ಕಾರ್ಮಿಕರು ನೆರೆದಿದ್ದು, ತಮ್ಮ ಕೆಲಸ ನಿರ್ವಹಿಸಲು ಕಾಯುತ್ತಾ ನಿಂತಿದ್ದರೂ ಕಂಪೆನಿ ಒಳಗಡೆಗೆ ಬಿಟ್ಟಿರಲಿಲ್ಲ. ಬೆಳಿಗ್ಗೆಯಿಂದಲೇ ಸ್ಥಳದಲ್ಲಿ ನೂರಾರು ಸಂಖ್ಯೆಯ ಪೊಲೀಸರು ನೆರೆದಿದ್ದಾರೆ. ಸರ್ಕಾರದ ಆದೇಶದ ಹೊರತಾಗಿಯೂ ಕಂಪೆನಿಯು ಉದ್ಯೋಗಿಗಳನ್ನು ಕೆಲಸ ನಿರ್ವಹಿಸುತ್ತೇವೆ ಎಂದು ಹೊರಟರೂ ಬಿಡದೆ ಇರುವುದಕ್ಕಿ ಸಾವಿರಾರು ಕಾರ್ಮಿಕರು ಮುಖ್ಯದ್ವಾರದ ಮುಂದೆ ಪ್ರತಿಭಟನೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...