Homeಕರ್ನಾಟಕಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಪ್ರತಿಭಟನೆ 17 ನೇ ದಿನಕ್ಕೆ; ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಪ್ರತಿಭಟನೆ 17 ನೇ ದಿನಕ್ಕೆ; ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

- Advertisement -
- Advertisement -

ಟೊಯೋಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ದೌರ್ಜನ್ಯದ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದು 17 ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡಾ ಕಾರ್ಮಿಕರು ಕಂಪೆನಿಯ ಒಳಗೆ ಪ್ರವೇಶ ಕೋರಿ ಸರತಿ ಸಾಲಿನಲ್ಲಿ ನಿಂತರು ಕಂಪೆನಿಯು ಅವರನ್ನು ಪ್ರವೇಶಿಸಲು ಬಿಡಲಿಲ್ಲ. ಸರ್ಕಾರವು ನವೆಂಬರ್‌ 18 ರಂದು ಲಾಕೌಟ್ ನಿಷೇಧಿಸಿ ಆದೇಶ ಹೊರಡಿಸಿದ್ದರೂ ಕಂಪೆನಿಯು ಕಾರ್ಮಿಕರನ್ನು ಒಳಕ್ಕೆ ಬಿಟ್ಟಿರಲಿಲ್ಲ.

ಕೆಳೆದ ಕೆಲವು ದಿನದಿಂದ ಕೆಲಸ ನಿರ್ವಹಿಸುವುದಾಗಿ ಕಾರ್ಮಿಕರು ಹೇಳುತ್ತಾ ಬಂದಿದ್ದರೂ ಕಂಪನಿಯು ಶಿಫ್ಟ್ ನೆಪ ಹೇಳುತ್ತಾ ಕಾರ್ಮಿಕರ ಪ್ರವೇಶವನ್ನು ತಡೆದಿತ್ತು. ಆದರೆ ನಿನ್ನೆಯಿಂದ ಕಾರ್ಮಿಕರು ಕೆಲಸಕ್ಕೆ ಬರುತ್ತಿಲ್ಲ ಎಂದು ಎರಡನೆ ಬಾರಿಗೆ ಲಾಕ್‌ಔಟ್ ಘೋಷಿಸಿದೆ. ಇದನ್ನು ವಿರೋಧಿಸಿ ಕಾರ್ಮಿಕರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: 16 ನೇ ದಿನಕ್ಕೆ ಟೊಯೊಟಾ ಕಿರ್ಲೊಸ್ಕರ್‌ ಕಾರ್ಮಿಕರ ಪ್ರತಿಭಟನೆ: ಸಿಐಟಿಯು ಬೆಂಬಲ

ಕಾರ್ಮಿಕರು ಕಂಪೆನಿಯೊಳಗಡೆ ಅನುಭವಿಸುವ ಸಂಕಷ್ಟ, ಶೋಷಣೆಗಳ ಬಗ್ಗೆ ಮಾಧ್ಯಮಕ್ಕೆ ವಿವರಿಸಿದ ಕಂಪನಿಯ ಕಾರ್ಮಿಕರ ಸಂಘಟನೆಯ ಅಧ್ಯಕ್ಷ ಪ್ರಸನ್ನ ಕುಮಾರ್‌ ಚಕ್ಕೆರೆ, ಪ್ರತಿಭಟನೆಯ ಬೇಡಿಕೆಗಳನ್ನು ತಿಳಿಸಿದರು.

ನಂತರ ಕಾರ್ಮಿಕ ಸಂಘಟನೆಯ ಕಾನೂನು ಸಲಹೆಗಾರ ಮುರುಳಿಧರ್ ಮಾತನಾಡಿ ಕಾರ್ಮಿಕ ಸಂಘಟನೆ ಕಾನೂನಿನ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಅಷ್ಟೆ ಅಲ್ಲದೆ ನಾಳೆ ನಡೆಯುವ ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ ನೀಡಿದ ಕಾರ್ಮಿಕ ಸಂಘಟನೆಯು, ಬೈಕ್ ರ್‍ಯಾಲಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವುದಾಗಿ ಹೇಳಿದೆ.

ಆಡಳಿತ ಮಂಡಳಿಯ ದುರ್ವತನೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿರುವ ಕಂಪೆನಿಯು ನವೆಂಬರ್‌ 10 ರಿಂದ ಮುಷ್ಕರದ ನೆಪ ಹೇಳಿ ಲಾಕ್‌ಔಟ್ ಘೋಷಿಸಿತ್ತು. ಆದರೆ ಕಾರ್ಮಿಕ ಸಂಘಟನೆ ವಜಾ ಗೊಳಿಸಿರುವ ಉದ್ಯೋಗಿಗಳನ್ನು ವಾಪಾಸು ಕೆಲಸಕ್ಕೆ ನೇಮಿಸಿ, ಕಾರ್ಮಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕೆಂದು ಬೇಡಿಕೆಯಿಟ್ಟಿದೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...