Homeಕರ್ನಾಟಕರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಕಾರ್ಮಿಕ ಸಂಘದ ಹೋರಾಟ ಇಂದಿಗೆ 40 ನೇ ದಿನಕ್ಕೆ ಕಾಲಿಟ್ಟಿದೆ

- Advertisement -
- Advertisement -

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಾರ್ಮಿಕ ಸಂಘದ ಹೋರಾಟ 40 ನೇ ದಿನಕ್ಕೆ ಕಾಲಿಟ್ಟಿದ್ದು ಇಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕ ಸಂಘದ 3000 ಕ್ಕೂ ಹೆಚ್ಚು ಕಾರ್ಮಿಕರ ಜೊತೆಗೆ ಇತರ ಹಲವಾರು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರಸನ್ನಕುಮಾರ್ ಚಕ್ಕೆರೆ, “ಶೀಘ್ರವಾಗಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು. ಇದು ಕೇವಲ ನಮ್ಮ ಸಮಸ್ಯೆ ಮಾತ್ರ ಅಲ್ಲ ದೇಶದ ಎಲ್ಲಾ ಬಹುರಾಷ್ಟ್ರೀಯ ಕಂಪನಿಗಳ ಸಮಸ್ಯೆ. ಕಾರ್ಮಿಕರನ್ನು ಯಂತ್ರದಂತೆ ದುಡಿಸಿ ಐದತ್ತು ವರ್ಷಗಳಲ್ಲಿ ಮನೆಗೆ ಕಳುಹಿಸುತ್ತಿದ್ದು, ಈ ಶೋಷಣೆ ನಿಲ್ಲಬೇಕಿದೆ. ಕಂಪನಿಯ ಆಡಳಿತ ವರ್ಗ ಯಾವುದೇ ಕಾನೂನುಗಳಿಗೆ ಬೆಲೆ ಕೊಡದೆ, ಸರ್ಕಾರದ ಮಾತಿಗೂ ಬೆಲೆ ಕೊಡದೆ ಕಾರ್ಮಿಕರನ್ನು ಬೀದಿಗೆ ತಳ್ಳಿವೆ. ಜಿಲ್ಲಾಧಿಕಾರಿಗಳು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಎಐಟಿಯುಸಿ ರಾಜ್ಯಾಧ್ಯಕ್ಷ ಅಪ್ಪಣ್ಣ ಮಾತನಾಡಿ, “ವಿದೇಶಿ ಕಂಪನಿಗಳು ಭಾರತದ ಕಾನೂನುಗಳಿಗೆ ಬೆಲೆಕೊಟ್ಟು ಗೌರವಿಸಬೇಕು ಇಲ್ಲವಾದರೆ ನಮ್ಮ ನೆಲ ಜಲ ವಿದ್ಯುತ್ ವಾಪಸ್ ಪಡೆಯ ಬೇಕಾಗುತ್ತದೆ. ಜೊತೆಗೆ ಕೇಂದ್ರ ಸರ್ಕಾರ 44 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ 4 ಸಂಹಿತೆಗಳಾಗಿ ಮಾಡಿರುವುದು ದುರಾದೃಷ್ಟಕರ, ಈ ಕಾಯ್ದೆಗಳು ಕೂಡಾ ವಾಪಸ್ ಆಗಬೇಕು” ಎಂದು ಒತ್ತಾಯಿಸಿದರು.

ಬಿಎಸ್ಪಿ ರಾಜ್ಯಾಧ್ಯಕ್ಷರಾದ ಕೃಷ್ಣಮೂರ್ತಿ ಮಾತನಾಡಿ, “ರಾಜ್ಯದ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಆದಷ್ಟು ಬೇಗ ಸಮಸ್ಯೆ ಬಗೆ ಹರಿಸದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಇಲ್ಲವೆಂದರೆ ಕಾರ್ಮಿಕರು ’ರಕ್ತ ಪತ್ರ ಚಳುವಳಿ’ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇವೆ. ರಾಜ್ಯ ಸರ್ಕಾರ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವ ಕಾರ್ಮಿಕ ಸಂಘವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ” ಎಂದು ಆರೋಪಿಸಿದರು.

ಮಾರಸಂದ್ರ ಮುನಿಯಪ್ಪ ಮಾತನಾಡಿ, “80 ಪರ್ಸೆಂಟ್ ರಾಜಕಾರಣಿಗಳು ಮತಪಡೆದು ಈಗ ನಿದ್ರಿಸುತ್ತಿದ್ದಾರೆ. ಎಚ್ಚೆತ್ತು ರೈತ-ದಲಿತ-ಕಾರ್ಮಿಕರ ಸಮಸ್ಯೆ ಬಗೆಹರಿಸದಿದ್ದರೆ ಯಾವುದೇ ಸರ್ಕಾರಕ್ಕೆ ಉಳಿಗಾಲವಿಲ್ಲ. ಕೇಂದ್ರ ಸರ್ಕಾರದ ಖಾಸಗೀಕರಣವೇ ಇದಕ್ಕೆ ಕಾರಣ. ಸರ್ಕಾರ ಖಾಸಗೀಕರಣವನ್ನು ಕೈಬಿಡಬೇಕು. ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಬಾರದು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

 

ರಾಮನಗರ ರೈತ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ ಮಾತನಾಡಿ, “ದುಡಿಯುವ ಕೈಗಳು ದೇಶಕ್ಕೆ ಆಧಾರ. ರೈತ-ಕಾರ್ಮಿಕರಿಂದ ದೇಶ ನಡೆಯುತ್ತಿದೆ. ಅವರಿಗೆ ಅನ್ಯಾಯವಾದರೆ ರೈತ ಸಂಘ ಸದಾ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಶೀಘ್ರವಾಗಿ ಸಮಸ್ಯೆ ಬಗೆಹರಿಯದಿದ್ದರೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ” ಎಚ್ಚರಿಸಿದರು.

ಪ್ರತಿಭಟನೆಗೆ ಜಿಗಣೆ ಕಾರ್ಮಿಕ ಸಂಘದ ಒಕ್ಕೂಟ ಮತ್ತು ಫೆಡೆರಲ್ ಮೊಗುಲ್ ಕಾರ್ಮಿಕ ಸಂಘಟನೆ ತನ್ನ ಸಂಪೂರ್ಣ ಬೆಂಬಲ ನೀಡಿತು.

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಆಡಳಿತ ಮಂಡಳಿ ತಮ್ಮ ಮೇಲೆ ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿದ ಕಾರಣಕ್ಕಾಗಿ, ಕಂಪೆನಿಯು ಕಾರ್ಮಿಕರು ಮುಷ್ಕರ ಹೂಡಿದ್ದಾರೆ ಎಂದು ಆರೋಪಿಸಿ ಲಾಕೌಟ್ ಘೋಷಿಸಿತ್ತು. ಈ ನಡುವೆ ರಾಜ್ಯ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬೈರೇಗೌಡ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಉಪಾಧ್ಯಕ್ಷರಾದ ಅನುಸೂಯ, ಜಿಲ್ಲಾಧ್ಯಕ್ಷರಾದ ಬೈರೇಗೌಡ, ಬಿಎಸ್ಪಿ ರಾಜ್ಯಾಧ್ಯಕ್ಷರಾದ ಕೃಷ್ಣಮೂರ್ತಿ, ಬಿಎಸ್ಪಿ ರಾಜ್ಯ ಸಂಯೋಜಕರಾದ ಮಾರಸಂದ್ರ ಮುನಿಯಪ್ಪ, ಅನ್ನದಾತ ರಕ್ಷಣಾ ವೇದಿಕೆ ಮುತ್ತುರಾಜ್, ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಅಪ್ಪಣ್ಣ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಉಮೇಶ್ ಸೇರಿದಂತೆ ಇನ್ನೂ ಹಲವಾರು ನಾಯಕರು ಪ್ರತಿಭಟನೆಗೆ ನೇತೃತ್ವ ನೀಡಿದ್ದರು.

ಇದನ್ನೂ ಓದಿ:ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...