Homeಕರ್ನಾಟಕಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಪ್ರತಿಭಟನಾ ನಿರತ ಕಾರ್ಮಿಕರು ಹಾಕಿದ್ದ ಪೆಂಡಾಲನ್ನು ಕಂಪೆನಿಯೂ ಕುತಂತ್ರದಿಂದ ತೆರವುಗೊಳಿಸಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ದೌರ್ಜನ್ಯದ ವಿರುದ್ದ ಕಂಪೆನಿಯ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 33 ನೇ ದಿನಕ್ಕೆ ಕಾಲಿಟ್ಟಿದೆ. ಕಂಪೆನಿಯ ಗೇಟ್ ಮುಂಬಾಗ ಪ್ರತಿಭಟನಾ ನಿರತ ಕಾರ್ಮಿಕರು ಹಾಕಿದ್ದ ಪೆಂಡಾಲನ್ನು ಕಂಪೆನಿಯೂ ಕುತಂತ್ರದಿಂದ ತೆರವುಗೊಳಿಸಿದೆ ಎಂದು ಆರೋಪಿಸಿ ಕಾರ್ಮಿಕರು ವಿನೂತನ “ಛತ್ರಿ ಚಳುವಳಿ” ಆರಂಭಿಸಿದ್ದಾರೆ.

ಕಾರ್ಮಿಕರು ಇಷ್ಟು ದಿನ ಪ್ರತಿಭಟನೆ ನಡೆಸುತ್ತಿದ್ದ ಪೆಂಡಾಲನ್ನು ಪೊಲೀಸರು ತೆರವುಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ಆದರೆ ಕಾರ್ಮಿಕರು ಏನೇ ಆದರೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅದೇ ಸ್ಥಳದಲ್ಲಿ ಛತ್ರಿಗಳನ್ನು ಹಿಡಿದು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆಯ ಮುಖಂಡ ಗಂಗಾಧರ್‌‌, “ದಿನೇ ದಿನೇ ತೀವ್ರತೆ ಪಡೆಯುತ್ತಿರುವ ನಮ್ಮ ಹೋರಾಟವನ್ನು ಸಹಿಸದ ಕಂಪೆನಿಯ ಆಡಳಿತ ಮಂಡಳಿಯು ವಾಮಮಾರ್ಗದ ಮೂಲಕ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ನಾವು ಸತ್ಯಾಗ್ರಹ ಮಾಡುತ್ತಿರುವ ಜಾಗದ ಮಾಲೀಕರಿಗೆ KIADB ಕಡೆಯಿಂದ ನೋಟೀಸ್ ಕಳುಹಿಸಿ, ’KIADB ನೀಡಿರುವ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿದ್ದು ನೀಡಿರುವ ಜಾಗವನ್ನು ರದ್ದು ಪಡಿಸುತ್ತೇವ’ ಎಂದು ಹೆದರಿಸಿದ್ದಾರೆ, ಅದಕ್ಕಾಗಿ ಮಾಲೀಕರು ಒತ್ತಡದಿಂದ ಪೆಂಡಾಲ್ ತೆಗೆಸಿದ್ದಾರೆ. ಆದರೆ ಕಾರ್ಮಿಕ ಸಂಘವು KIADB ಜೊತೆಗೆ ಮಾತನಾಡಿ ವ್ಯವಸ್ಥೆ ಮಾಡುವ ಪ್ರಯತ್ನ ನಡಸುತ್ತಿದೆ” ಎಂದರು.

ಕಂಪೆನಿಯು ಇದುವರೆಗೂ ಒಟ್ಟು 60 ಕಾರ್ಮಿಕರನ್ನು ಅಮಾನತ್ತು ಮಾಡಿದೆ. ಅಮಾನತ್ತು ರದ್ದು ಮಾಡಿ ಕಾರ್ಮಿಕರ ಬೇಡಿಕೆ ಈಡೇರಿಸದೇ ಇದ್ದರೆ ಹೋರಾಟದ ರೂಪರೇಷೆಗಳನ್ನು ಇನ್ನಷ್ಟೂ ಚುರುಕು ಮಾಡಲಾಗುವುದು ಎಂದು ಕಾರ್ಮಿಕ ಸಂಘವು ಕಂಪೆನಿಯ ಆಡಳಿತ ಮಂಡಳಿಗೆ ಎಚ್ಚರಿಸಿದೆ.

ಈ ನಡುವೆ  ಕೇಂದ್ರದ ಹಾಗೂ ರಾಜ್ಯ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಟೊಯೊಟಾ ಕಾರ್ಮಿಕರು ಸಂಪೂರ್ಣ ಬೆಂಬಲ ನೀಡಿದ್ದು, ಕಳೆದ ಎರಡು ದಿನಗಳಿಂದ ರೈತರೊಂದಿಗೆ ವಿಧಾನ ಸೌದ ಮುತ್ತಿಗೆ ಹಾಗೂ ರಾಜಭವನ ಮುತ್ತಿಗೆ ಹೋರಾಟದಲ್ಲಿ ಕೈಜೋಡಿಸಿದ್ದರು.

ಇದನ್ನೂ ಓದಿ: ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಆಡಳಿತ ಮಂಡಳಿ ತಮ್ಮ ಮೇಲೆ ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿದ ಕಾರಣಕ್ಕಾಗಿ, ಕಂಪೆನಿಯು ಕಾರ್ಮಿಕರು ಮುಷ್ಕರ ಹೂಡಿದ್ದಾರೆ ಎಂದು ಆರೋಪಿಸಿ ಲಾಕೌಟ್ ಘೋಷಿಸಿತ್ತು.

ಈ ನಡುವೆ ರಾಜ್ಯ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...