Homeಕರ್ನಾಟಕಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ.

- Advertisement -
- Advertisement -

ಕಳೆದ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಟೊಯೊಟಾ ಕಿಲೋಸ್ಕರ್‌ ಕಾರ್ಮಿಕರ ಪ್ರತಿಭಟನೆಗೆ ಕಂಪೆನಿಯು ಮಂಡಿಯೂರುತ್ತಿದ್ದು ತನ್ನ ಲಾಕೌಟ್‌‌ ಅನ್ನು ತೆರವುಗೊಳಿಸುವುದಾಗಿ ಹೇಳಿದೆ. ಆದರೆ ಕೆಲಸಕ್ಕೆ ಬರಲು ಇಚ್ಚಿಸುವ ಕಾರ್ಮಿಕರು ಮುಚ್ಚಳಿಕೆ ನೀಡಿ ಬರಬಹುದು ಎಂದು ಷರತ್ತನ್ನು ವಿಧಿಸಿದೆ. ಇದಕ್ಕೆ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕಾರ್ಮಿಕ ಸಂಘಟನೆ ಪ್ರತಿಕ್ರಿಯೆ ನೀಡಿದ್ದು, “ಕಂಪೆನಿಯು ಪತ್ರಿಕಾ ಹೇಳಿಕೆ ನೀಡುವ ಮೂಲಕ, ಇಷ್ಟು ದಿನ ಕಾರ್ಮಿಕರು ಮುಷ್ಕರ ಮಾಡುತ್ತಿರಲಿಲ್ಲ ತಾವಾಗಿಯೆ ಬೀಗಮುದ್ರೆಯನ್ನು ಘೋಷಿಸಿದ್ದೆವು ಎಂದು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದೆ.

“ಆಡಳಿತ ಮಂಡಳಿಯು ತನ್ನ ಅಗತ್ಯತೆಗಳನ್ನು ಕಾರ್ಮಿಕ ಸಂಘದ ಸಹಕಾರವಿಲ್ಲದೇ ಪೂರೈಸಿಕೊಳ್ಳಬಹುದು ಎಂದು ಭಾವಿಸಿರಬಹುದು. ಅವರಿಗೆ ಬೀಗ ಮುದ್ರೆಯು ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಈಗ ಅರ್ಥವಾಗುತ್ತಿದೆ. ಇಷ್ಟಾದರೂ ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುತ್ತಿರುವುದು, ಕಾನೂನಿನ ಪ್ರಕಾರ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ಜಿಲ್ಲಾಧಿಕಾರಿ,toyota

“ಕಂಪೆನಿಯು ಎರಡನೇ ಬಾರಿಗೆ ದಿನಾಂಕ 23.11.2020 ರಿಂದ ಘೋಷಿಸಿದ್ದ ಬೀಗಮುದ್ರೆ ಕೂಡಾ ಕಾನೂನು ಬಾಹಿರವಾಗಿತ್ತು. ಈ ನಿರ್ಧಾರವು ನಿರರ್ಥಕ ಹಾಗೂ ಸಂಸ್ಥೆಯ ಬೆಳವಣಿಗೆಗೆ ಹಾನಿಕಾರಕ ಎಂದು ಆಡಳಿತ ಮಂಡಳಿ ಅರಿಯುವವರೆಗೂ ಇದು ಹಾಗೆ ಮುಂದುವರೆಯುತ್ತದೆ” ಎಂದು ಕಂಪೆನಿಯ ಕಾರ್ಮಿಕ ಸಂಘಟನೆ ಟಿಕೆಎಇಯು ಎಚ್ಚರಿಸಿದೆ.

“ಕೆಲಸದ ಒತ್ತಡದ ನಿಗದಿಯ ವಿಚಾರವಾಗಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರಗಳೇ ಕಾರ್ಮಿಕರ ಪ್ರತಿಭಟನೆಗೆ ಕಾರಣವಾಗಿತ್ತೇ ವಿನಃ ಕಾರ್ಮಿಕರು ಯಾವುದೇ ಮುಷ್ಕರ ಮಾಡುತ್ತಿರಲಿಲ್ಲ. ಈ ವಿಚಾರವಾಗಿ ಕಾರ್ಮಿಕ ಸಂಘದ ಹಲವಾರು ಪ್ರಯತ್ನಗಳಿಗೆ ಆಡಳಿತ ವರ್ಗವು ಸ್ಪಂದಿಸಲಿಲ್ಲ, ಅದಕ್ಕೆ ಪೂರಕ ದಾಖಲೆಗಳು ನಮ್ಮಲ್ಲಿವೆ. ಆಡಳಿತ ಮಂಡಳಿಯ ನೋಟಿಸಿನ ವಿಷಯಗಳು ನಮಗೆ ಅರ್ಥವಾಗಿದೆ, ಆಡಳಿತ ಮಂಡಳಿಯ ಷರತ್ತುಗಳು ಕಾರ್ಮಿಕ ವಿರೋಧಿಯ ಜೊತೆಗೆ ಸಂಸ್ಥೆಯ ವಿರುದ್ಧವಾಗಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಯು ಕಂಪೆನಿಯ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕೆಲವು ವಿಚಾರವನ್ನು ಸ್ಪಷ್ಟಪಡಿಸಿದೆ.

►ಆಡಳಿತ ಮಂಡಳಿಯು ತನ್ನ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದೆ.
►ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುವುದು, ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ.
►ಕಾರ್ಮಿಕರು ಈ ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳಕ್ಕೆ ಅರ್ಹರಾಗಿರುತ್ತಾರೆ.
►ಕಾರ್ಮಿಕರು ಕಾನೂನು ಬಾಹಿರ ಬೀಗಮುದ್ರೆ ಹಾಗೂ ಮುಚ್ಚಳಿಕೆ ಸಮಯದಲ್ಲಿ ಕೆಲಸಕ್ಕೆ ಹಾಜರಾಗುವುದಿಲ್ಲ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಅಷ್ಟೇ ಅಲ್ಲದೆ ಮಂಗಳವಾರ ನಡೆದ ಕಾರ್ಮಿಕ ಸಂಘದ “ಸರ್ವ ಸದಸ್ಯರ ಸಭೆ” ಯಲ್ಲಿ ಕೆಲವು ನಿರ್ಣಯಗಳನ್ನು ಪ್ರತಿಭಟನಾ ನಿರತ ಕಾರ್ಮಿರಕು ತೆಗೆದುಕೊಂಡಿದ್ದಾರೆ.

►ಆಡಳಿತ ಮಂಡಳಿಯು ಮುಚ್ಚಳಿಕೆ ಕೇಳುವ ಮೂಲಕ ಮುಂದುವರೆದ ಕಾನೂನು ಬಾಹಿರ ಬೀಗಮುದ್ರೆಯನ್ನು ಖಂಡಿಸುತ್ತೇವೆ.
►ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳ ನೀಡಬೇಕು.
►ಆಡಳಿತ ಮಂಡಳಿಯ ಈ ಸಮಯದ ಎಲ್ಲಾ ಅಮಾನತು ಹಾಗೂ ಶಿಕ್ಷೆಯ ಆದೇಶಗಳನ್ನು ಹಿಂಪಡೆಯಬೇಕು.
►ನಾವು ಕಾನೂನು ಬಾಹಿರ ಬೀಗಮುದ್ರೆಯ ವಿರುದ್ಧ ನಮ್ಮ ನ್ಯಾಯಸಮ್ಮತ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ.

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...