Homeಕರ್ನಾಟಕಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ.

- Advertisement -
- Advertisement -

ಕಳೆದ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಟೊಯೊಟಾ ಕಿಲೋಸ್ಕರ್‌ ಕಾರ್ಮಿಕರ ಪ್ರತಿಭಟನೆಗೆ ಕಂಪೆನಿಯು ಮಂಡಿಯೂರುತ್ತಿದ್ದು ತನ್ನ ಲಾಕೌಟ್‌‌ ಅನ್ನು ತೆರವುಗೊಳಿಸುವುದಾಗಿ ಹೇಳಿದೆ. ಆದರೆ ಕೆಲಸಕ್ಕೆ ಬರಲು ಇಚ್ಚಿಸುವ ಕಾರ್ಮಿಕರು ಮುಚ್ಚಳಿಕೆ ನೀಡಿ ಬರಬಹುದು ಎಂದು ಷರತ್ತನ್ನು ವಿಧಿಸಿದೆ. ಇದಕ್ಕೆ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕಾರ್ಮಿಕ ಸಂಘಟನೆ ಪ್ರತಿಕ್ರಿಯೆ ನೀಡಿದ್ದು, “ಕಂಪೆನಿಯು ಪತ್ರಿಕಾ ಹೇಳಿಕೆ ನೀಡುವ ಮೂಲಕ, ಇಷ್ಟು ದಿನ ಕಾರ್ಮಿಕರು ಮುಷ್ಕರ ಮಾಡುತ್ತಿರಲಿಲ್ಲ ತಾವಾಗಿಯೆ ಬೀಗಮುದ್ರೆಯನ್ನು ಘೋಷಿಸಿದ್ದೆವು ಎಂದು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದೆ.

“ಆಡಳಿತ ಮಂಡಳಿಯು ತನ್ನ ಅಗತ್ಯತೆಗಳನ್ನು ಕಾರ್ಮಿಕ ಸಂಘದ ಸಹಕಾರವಿಲ್ಲದೇ ಪೂರೈಸಿಕೊಳ್ಳಬಹುದು ಎಂದು ಭಾವಿಸಿರಬಹುದು. ಅವರಿಗೆ ಬೀಗ ಮುದ್ರೆಯು ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಈಗ ಅರ್ಥವಾಗುತ್ತಿದೆ. ಇಷ್ಟಾದರೂ ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುತ್ತಿರುವುದು, ಕಾನೂನಿನ ಪ್ರಕಾರ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ಜಿಲ್ಲಾಧಿಕಾರಿ,toyota

“ಕಂಪೆನಿಯು ಎರಡನೇ ಬಾರಿಗೆ ದಿನಾಂಕ 23.11.2020 ರಿಂದ ಘೋಷಿಸಿದ್ದ ಬೀಗಮುದ್ರೆ ಕೂಡಾ ಕಾನೂನು ಬಾಹಿರವಾಗಿತ್ತು. ಈ ನಿರ್ಧಾರವು ನಿರರ್ಥಕ ಹಾಗೂ ಸಂಸ್ಥೆಯ ಬೆಳವಣಿಗೆಗೆ ಹಾನಿಕಾರಕ ಎಂದು ಆಡಳಿತ ಮಂಡಳಿ ಅರಿಯುವವರೆಗೂ ಇದು ಹಾಗೆ ಮುಂದುವರೆಯುತ್ತದೆ” ಎಂದು ಕಂಪೆನಿಯ ಕಾರ್ಮಿಕ ಸಂಘಟನೆ ಟಿಕೆಎಇಯು ಎಚ್ಚರಿಸಿದೆ.

“ಕೆಲಸದ ಒತ್ತಡದ ನಿಗದಿಯ ವಿಚಾರವಾಗಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರಗಳೇ ಕಾರ್ಮಿಕರ ಪ್ರತಿಭಟನೆಗೆ ಕಾರಣವಾಗಿತ್ತೇ ವಿನಃ ಕಾರ್ಮಿಕರು ಯಾವುದೇ ಮುಷ್ಕರ ಮಾಡುತ್ತಿರಲಿಲ್ಲ. ಈ ವಿಚಾರವಾಗಿ ಕಾರ್ಮಿಕ ಸಂಘದ ಹಲವಾರು ಪ್ರಯತ್ನಗಳಿಗೆ ಆಡಳಿತ ವರ್ಗವು ಸ್ಪಂದಿಸಲಿಲ್ಲ, ಅದಕ್ಕೆ ಪೂರಕ ದಾಖಲೆಗಳು ನಮ್ಮಲ್ಲಿವೆ. ಆಡಳಿತ ಮಂಡಳಿಯ ನೋಟಿಸಿನ ವಿಷಯಗಳು ನಮಗೆ ಅರ್ಥವಾಗಿದೆ, ಆಡಳಿತ ಮಂಡಳಿಯ ಷರತ್ತುಗಳು ಕಾರ್ಮಿಕ ವಿರೋಧಿಯ ಜೊತೆಗೆ ಸಂಸ್ಥೆಯ ವಿರುದ್ಧವಾಗಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಯು ಕಂಪೆನಿಯ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕೆಲವು ವಿಚಾರವನ್ನು ಸ್ಪಷ್ಟಪಡಿಸಿದೆ.

►ಆಡಳಿತ ಮಂಡಳಿಯು ತನ್ನ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದೆ.
►ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುವುದು, ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ.
►ಕಾರ್ಮಿಕರು ಈ ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳಕ್ಕೆ ಅರ್ಹರಾಗಿರುತ್ತಾರೆ.
►ಕಾರ್ಮಿಕರು ಕಾನೂನು ಬಾಹಿರ ಬೀಗಮುದ್ರೆ ಹಾಗೂ ಮುಚ್ಚಳಿಕೆ ಸಮಯದಲ್ಲಿ ಕೆಲಸಕ್ಕೆ ಹಾಜರಾಗುವುದಿಲ್ಲ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಅಷ್ಟೇ ಅಲ್ಲದೆ ಮಂಗಳವಾರ ನಡೆದ ಕಾರ್ಮಿಕ ಸಂಘದ “ಸರ್ವ ಸದಸ್ಯರ ಸಭೆ” ಯಲ್ಲಿ ಕೆಲವು ನಿರ್ಣಯಗಳನ್ನು ಪ್ರತಿಭಟನಾ ನಿರತ ಕಾರ್ಮಿರಕು ತೆಗೆದುಕೊಂಡಿದ್ದಾರೆ.

►ಆಡಳಿತ ಮಂಡಳಿಯು ಮುಚ್ಚಳಿಕೆ ಕೇಳುವ ಮೂಲಕ ಮುಂದುವರೆದ ಕಾನೂನು ಬಾಹಿರ ಬೀಗಮುದ್ರೆಯನ್ನು ಖಂಡಿಸುತ್ತೇವೆ.
►ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳ ನೀಡಬೇಕು.
►ಆಡಳಿತ ಮಂಡಳಿಯ ಈ ಸಮಯದ ಎಲ್ಲಾ ಅಮಾನತು ಹಾಗೂ ಶಿಕ್ಷೆಯ ಆದೇಶಗಳನ್ನು ಹಿಂಪಡೆಯಬೇಕು.
►ನಾವು ಕಾನೂನು ಬಾಹಿರ ಬೀಗಮುದ್ರೆಯ ವಿರುದ್ಧ ನಮ್ಮ ನ್ಯಾಯಸಮ್ಮತ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ.

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...