Homeಕರ್ನಾಟಕಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ.

- Advertisement -
- Advertisement -

ಕಳೆದ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಟೊಯೊಟಾ ಕಿಲೋಸ್ಕರ್‌ ಕಾರ್ಮಿಕರ ಪ್ರತಿಭಟನೆಗೆ ಕಂಪೆನಿಯು ಮಂಡಿಯೂರುತ್ತಿದ್ದು ತನ್ನ ಲಾಕೌಟ್‌‌ ಅನ್ನು ತೆರವುಗೊಳಿಸುವುದಾಗಿ ಹೇಳಿದೆ. ಆದರೆ ಕೆಲಸಕ್ಕೆ ಬರಲು ಇಚ್ಚಿಸುವ ಕಾರ್ಮಿಕರು ಮುಚ್ಚಳಿಕೆ ನೀಡಿ ಬರಬಹುದು ಎಂದು ಷರತ್ತನ್ನು ವಿಧಿಸಿದೆ. ಇದಕ್ಕೆ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕಾರ್ಮಿಕ ಸಂಘಟನೆ ಪ್ರತಿಕ್ರಿಯೆ ನೀಡಿದ್ದು, “ಕಂಪೆನಿಯು ಪತ್ರಿಕಾ ಹೇಳಿಕೆ ನೀಡುವ ಮೂಲಕ, ಇಷ್ಟು ದಿನ ಕಾರ್ಮಿಕರು ಮುಷ್ಕರ ಮಾಡುತ್ತಿರಲಿಲ್ಲ ತಾವಾಗಿಯೆ ಬೀಗಮುದ್ರೆಯನ್ನು ಘೋಷಿಸಿದ್ದೆವು ಎಂದು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದೆ.

“ಆಡಳಿತ ಮಂಡಳಿಯು ತನ್ನ ಅಗತ್ಯತೆಗಳನ್ನು ಕಾರ್ಮಿಕ ಸಂಘದ ಸಹಕಾರವಿಲ್ಲದೇ ಪೂರೈಸಿಕೊಳ್ಳಬಹುದು ಎಂದು ಭಾವಿಸಿರಬಹುದು. ಅವರಿಗೆ ಬೀಗ ಮುದ್ರೆಯು ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಈಗ ಅರ್ಥವಾಗುತ್ತಿದೆ. ಇಷ್ಟಾದರೂ ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುತ್ತಿರುವುದು, ಕಾನೂನಿನ ಪ್ರಕಾರ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ಜಿಲ್ಲಾಧಿಕಾರಿ,toyota

“ಕಂಪೆನಿಯು ಎರಡನೇ ಬಾರಿಗೆ ದಿನಾಂಕ 23.11.2020 ರಿಂದ ಘೋಷಿಸಿದ್ದ ಬೀಗಮುದ್ರೆ ಕೂಡಾ ಕಾನೂನು ಬಾಹಿರವಾಗಿತ್ತು. ಈ ನಿರ್ಧಾರವು ನಿರರ್ಥಕ ಹಾಗೂ ಸಂಸ್ಥೆಯ ಬೆಳವಣಿಗೆಗೆ ಹಾನಿಕಾರಕ ಎಂದು ಆಡಳಿತ ಮಂಡಳಿ ಅರಿಯುವವರೆಗೂ ಇದು ಹಾಗೆ ಮುಂದುವರೆಯುತ್ತದೆ” ಎಂದು ಕಂಪೆನಿಯ ಕಾರ್ಮಿಕ ಸಂಘಟನೆ ಟಿಕೆಎಇಯು ಎಚ್ಚರಿಸಿದೆ.

“ಕೆಲಸದ ಒತ್ತಡದ ನಿಗದಿಯ ವಿಚಾರವಾಗಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರಗಳೇ ಕಾರ್ಮಿಕರ ಪ್ರತಿಭಟನೆಗೆ ಕಾರಣವಾಗಿತ್ತೇ ವಿನಃ ಕಾರ್ಮಿಕರು ಯಾವುದೇ ಮುಷ್ಕರ ಮಾಡುತ್ತಿರಲಿಲ್ಲ. ಈ ವಿಚಾರವಾಗಿ ಕಾರ್ಮಿಕ ಸಂಘದ ಹಲವಾರು ಪ್ರಯತ್ನಗಳಿಗೆ ಆಡಳಿತ ವರ್ಗವು ಸ್ಪಂದಿಸಲಿಲ್ಲ, ಅದಕ್ಕೆ ಪೂರಕ ದಾಖಲೆಗಳು ನಮ್ಮಲ್ಲಿವೆ. ಆಡಳಿತ ಮಂಡಳಿಯ ನೋಟಿಸಿನ ವಿಷಯಗಳು ನಮಗೆ ಅರ್ಥವಾಗಿದೆ, ಆಡಳಿತ ಮಂಡಳಿಯ ಷರತ್ತುಗಳು ಕಾರ್ಮಿಕ ವಿರೋಧಿಯ ಜೊತೆಗೆ ಸಂಸ್ಥೆಯ ವಿರುದ್ಧವಾಗಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಯು ಕಂಪೆನಿಯ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕೆಲವು ವಿಚಾರವನ್ನು ಸ್ಪಷ್ಟಪಡಿಸಿದೆ.

►ಆಡಳಿತ ಮಂಡಳಿಯು ತನ್ನ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದೆ.
►ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುವುದು, ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ.
►ಕಾರ್ಮಿಕರು ಈ ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳಕ್ಕೆ ಅರ್ಹರಾಗಿರುತ್ತಾರೆ.
►ಕಾರ್ಮಿಕರು ಕಾನೂನು ಬಾಹಿರ ಬೀಗಮುದ್ರೆ ಹಾಗೂ ಮುಚ್ಚಳಿಕೆ ಸಮಯದಲ್ಲಿ ಕೆಲಸಕ್ಕೆ ಹಾಜರಾಗುವುದಿಲ್ಲ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಅಷ್ಟೇ ಅಲ್ಲದೆ ಮಂಗಳವಾರ ನಡೆದ ಕಾರ್ಮಿಕ ಸಂಘದ “ಸರ್ವ ಸದಸ್ಯರ ಸಭೆ” ಯಲ್ಲಿ ಕೆಲವು ನಿರ್ಣಯಗಳನ್ನು ಪ್ರತಿಭಟನಾ ನಿರತ ಕಾರ್ಮಿರಕು ತೆಗೆದುಕೊಂಡಿದ್ದಾರೆ.

►ಆಡಳಿತ ಮಂಡಳಿಯು ಮುಚ್ಚಳಿಕೆ ಕೇಳುವ ಮೂಲಕ ಮುಂದುವರೆದ ಕಾನೂನು ಬಾಹಿರ ಬೀಗಮುದ್ರೆಯನ್ನು ಖಂಡಿಸುತ್ತೇವೆ.
►ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳ ನೀಡಬೇಕು.
►ಆಡಳಿತ ಮಂಡಳಿಯ ಈ ಸಮಯದ ಎಲ್ಲಾ ಅಮಾನತು ಹಾಗೂ ಶಿಕ್ಷೆಯ ಆದೇಶಗಳನ್ನು ಹಿಂಪಡೆಯಬೇಕು.
►ನಾವು ಕಾನೂನು ಬಾಹಿರ ಬೀಗಮುದ್ರೆಯ ವಿರುದ್ಧ ನಮ್ಮ ನ್ಯಾಯಸಮ್ಮತ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ.

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...