Homeಕರ್ನಾಟಕಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ.

- Advertisement -
- Advertisement -

ಕಳೆದ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಟೊಯೊಟಾ ಕಿಲೋಸ್ಕರ್‌ ಕಾರ್ಮಿಕರ ಪ್ರತಿಭಟನೆಗೆ ಕಂಪೆನಿಯು ಮಂಡಿಯೂರುತ್ತಿದ್ದು ತನ್ನ ಲಾಕೌಟ್‌‌ ಅನ್ನು ತೆರವುಗೊಳಿಸುವುದಾಗಿ ಹೇಳಿದೆ. ಆದರೆ ಕೆಲಸಕ್ಕೆ ಬರಲು ಇಚ್ಚಿಸುವ ಕಾರ್ಮಿಕರು ಮುಚ್ಚಳಿಕೆ ನೀಡಿ ಬರಬಹುದು ಎಂದು ಷರತ್ತನ್ನು ವಿಧಿಸಿದೆ. ಇದಕ್ಕೆ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕಾರ್ಮಿಕ ಸಂಘಟನೆ ಪ್ರತಿಕ್ರಿಯೆ ನೀಡಿದ್ದು, “ಕಂಪೆನಿಯು ಪತ್ರಿಕಾ ಹೇಳಿಕೆ ನೀಡುವ ಮೂಲಕ, ಇಷ್ಟು ದಿನ ಕಾರ್ಮಿಕರು ಮುಷ್ಕರ ಮಾಡುತ್ತಿರಲಿಲ್ಲ ತಾವಾಗಿಯೆ ಬೀಗಮುದ್ರೆಯನ್ನು ಘೋಷಿಸಿದ್ದೆವು ಎಂದು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದೆ.

“ಆಡಳಿತ ಮಂಡಳಿಯು ತನ್ನ ಅಗತ್ಯತೆಗಳನ್ನು ಕಾರ್ಮಿಕ ಸಂಘದ ಸಹಕಾರವಿಲ್ಲದೇ ಪೂರೈಸಿಕೊಳ್ಳಬಹುದು ಎಂದು ಭಾವಿಸಿರಬಹುದು. ಅವರಿಗೆ ಬೀಗ ಮುದ್ರೆಯು ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಈಗ ಅರ್ಥವಾಗುತ್ತಿದೆ. ಇಷ್ಟಾದರೂ ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುತ್ತಿರುವುದು, ಕಾನೂನಿನ ಪ್ರಕಾರ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ಜಿಲ್ಲಾಧಿಕಾರಿ,toyota

“ಕಂಪೆನಿಯು ಎರಡನೇ ಬಾರಿಗೆ ದಿನಾಂಕ 23.11.2020 ರಿಂದ ಘೋಷಿಸಿದ್ದ ಬೀಗಮುದ್ರೆ ಕೂಡಾ ಕಾನೂನು ಬಾಹಿರವಾಗಿತ್ತು. ಈ ನಿರ್ಧಾರವು ನಿರರ್ಥಕ ಹಾಗೂ ಸಂಸ್ಥೆಯ ಬೆಳವಣಿಗೆಗೆ ಹಾನಿಕಾರಕ ಎಂದು ಆಡಳಿತ ಮಂಡಳಿ ಅರಿಯುವವರೆಗೂ ಇದು ಹಾಗೆ ಮುಂದುವರೆಯುತ್ತದೆ” ಎಂದು ಕಂಪೆನಿಯ ಕಾರ್ಮಿಕ ಸಂಘಟನೆ ಟಿಕೆಎಇಯು ಎಚ್ಚರಿಸಿದೆ.

“ಕೆಲಸದ ಒತ್ತಡದ ನಿಗದಿಯ ವಿಚಾರವಾಗಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರಗಳೇ ಕಾರ್ಮಿಕರ ಪ್ರತಿಭಟನೆಗೆ ಕಾರಣವಾಗಿತ್ತೇ ವಿನಃ ಕಾರ್ಮಿಕರು ಯಾವುದೇ ಮುಷ್ಕರ ಮಾಡುತ್ತಿರಲಿಲ್ಲ. ಈ ವಿಚಾರವಾಗಿ ಕಾರ್ಮಿಕ ಸಂಘದ ಹಲವಾರು ಪ್ರಯತ್ನಗಳಿಗೆ ಆಡಳಿತ ವರ್ಗವು ಸ್ಪಂದಿಸಲಿಲ್ಲ, ಅದಕ್ಕೆ ಪೂರಕ ದಾಖಲೆಗಳು ನಮ್ಮಲ್ಲಿವೆ. ಆಡಳಿತ ಮಂಡಳಿಯ ನೋಟಿಸಿನ ವಿಷಯಗಳು ನಮಗೆ ಅರ್ಥವಾಗಿದೆ, ಆಡಳಿತ ಮಂಡಳಿಯ ಷರತ್ತುಗಳು ಕಾರ್ಮಿಕ ವಿರೋಧಿಯ ಜೊತೆಗೆ ಸಂಸ್ಥೆಯ ವಿರುದ್ಧವಾಗಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಯು ಕಂಪೆನಿಯ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕೆಲವು ವಿಚಾರವನ್ನು ಸ್ಪಷ್ಟಪಡಿಸಿದೆ.

►ಆಡಳಿತ ಮಂಡಳಿಯು ತನ್ನ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದೆ.
►ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುವುದು, ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ.
►ಕಾರ್ಮಿಕರು ಈ ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳಕ್ಕೆ ಅರ್ಹರಾಗಿರುತ್ತಾರೆ.
►ಕಾರ್ಮಿಕರು ಕಾನೂನು ಬಾಹಿರ ಬೀಗಮುದ್ರೆ ಹಾಗೂ ಮುಚ್ಚಳಿಕೆ ಸಮಯದಲ್ಲಿ ಕೆಲಸಕ್ಕೆ ಹಾಜರಾಗುವುದಿಲ್ಲ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಅಷ್ಟೇ ಅಲ್ಲದೆ ಮಂಗಳವಾರ ನಡೆದ ಕಾರ್ಮಿಕ ಸಂಘದ “ಸರ್ವ ಸದಸ್ಯರ ಸಭೆ” ಯಲ್ಲಿ ಕೆಲವು ನಿರ್ಣಯಗಳನ್ನು ಪ್ರತಿಭಟನಾ ನಿರತ ಕಾರ್ಮಿರಕು ತೆಗೆದುಕೊಂಡಿದ್ದಾರೆ.

►ಆಡಳಿತ ಮಂಡಳಿಯು ಮುಚ್ಚಳಿಕೆ ಕೇಳುವ ಮೂಲಕ ಮುಂದುವರೆದ ಕಾನೂನು ಬಾಹಿರ ಬೀಗಮುದ್ರೆಯನ್ನು ಖಂಡಿಸುತ್ತೇವೆ.
►ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳ ನೀಡಬೇಕು.
►ಆಡಳಿತ ಮಂಡಳಿಯ ಈ ಸಮಯದ ಎಲ್ಲಾ ಅಮಾನತು ಹಾಗೂ ಶಿಕ್ಷೆಯ ಆದೇಶಗಳನ್ನು ಹಿಂಪಡೆಯಬೇಕು.
►ನಾವು ಕಾನೂನು ಬಾಹಿರ ಬೀಗಮುದ್ರೆಯ ವಿರುದ್ಧ ನಮ್ಮ ನ್ಯಾಯಸಮ್ಮತ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ.

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...