Homeಕರ್ನಾಟಕಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ.

- Advertisement -
- Advertisement -

ಕಳೆದ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಟೊಯೊಟಾ ಕಿಲೋಸ್ಕರ್‌ ಕಾರ್ಮಿಕರ ಪ್ರತಿಭಟನೆಗೆ ಕಂಪೆನಿಯು ಮಂಡಿಯೂರುತ್ತಿದ್ದು ತನ್ನ ಲಾಕೌಟ್‌‌ ಅನ್ನು ತೆರವುಗೊಳಿಸುವುದಾಗಿ ಹೇಳಿದೆ. ಆದರೆ ಕೆಲಸಕ್ಕೆ ಬರಲು ಇಚ್ಚಿಸುವ ಕಾರ್ಮಿಕರು ಮುಚ್ಚಳಿಕೆ ನೀಡಿ ಬರಬಹುದು ಎಂದು ಷರತ್ತನ್ನು ವಿಧಿಸಿದೆ. ಇದಕ್ಕೆ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕಾರ್ಮಿಕ ಸಂಘಟನೆ ಪ್ರತಿಕ್ರಿಯೆ ನೀಡಿದ್ದು, “ಕಂಪೆನಿಯು ಪತ್ರಿಕಾ ಹೇಳಿಕೆ ನೀಡುವ ಮೂಲಕ, ಇಷ್ಟು ದಿನ ಕಾರ್ಮಿಕರು ಮುಷ್ಕರ ಮಾಡುತ್ತಿರಲಿಲ್ಲ ತಾವಾಗಿಯೆ ಬೀಗಮುದ್ರೆಯನ್ನು ಘೋಷಿಸಿದ್ದೆವು ಎಂದು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದೆ.

“ಆಡಳಿತ ಮಂಡಳಿಯು ತನ್ನ ಅಗತ್ಯತೆಗಳನ್ನು ಕಾರ್ಮಿಕ ಸಂಘದ ಸಹಕಾರವಿಲ್ಲದೇ ಪೂರೈಸಿಕೊಳ್ಳಬಹುದು ಎಂದು ಭಾವಿಸಿರಬಹುದು. ಅವರಿಗೆ ಬೀಗ ಮುದ್ರೆಯು ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಈಗ ಅರ್ಥವಾಗುತ್ತಿದೆ. ಇಷ್ಟಾದರೂ ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುತ್ತಿರುವುದು, ಕಾನೂನಿನ ಪ್ರಕಾರ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ಜಿಲ್ಲಾಧಿಕಾರಿ,toyota

“ಕಂಪೆನಿಯು ಎರಡನೇ ಬಾರಿಗೆ ದಿನಾಂಕ 23.11.2020 ರಿಂದ ಘೋಷಿಸಿದ್ದ ಬೀಗಮುದ್ರೆ ಕೂಡಾ ಕಾನೂನು ಬಾಹಿರವಾಗಿತ್ತು. ಈ ನಿರ್ಧಾರವು ನಿರರ್ಥಕ ಹಾಗೂ ಸಂಸ್ಥೆಯ ಬೆಳವಣಿಗೆಗೆ ಹಾನಿಕಾರಕ ಎಂದು ಆಡಳಿತ ಮಂಡಳಿ ಅರಿಯುವವರೆಗೂ ಇದು ಹಾಗೆ ಮುಂದುವರೆಯುತ್ತದೆ” ಎಂದು ಕಂಪೆನಿಯ ಕಾರ್ಮಿಕ ಸಂಘಟನೆ ಟಿಕೆಎಇಯು ಎಚ್ಚರಿಸಿದೆ.

“ಕೆಲಸದ ಒತ್ತಡದ ನಿಗದಿಯ ವಿಚಾರವಾಗಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರಗಳೇ ಕಾರ್ಮಿಕರ ಪ್ರತಿಭಟನೆಗೆ ಕಾರಣವಾಗಿತ್ತೇ ವಿನಃ ಕಾರ್ಮಿಕರು ಯಾವುದೇ ಮುಷ್ಕರ ಮಾಡುತ್ತಿರಲಿಲ್ಲ. ಈ ವಿಚಾರವಾಗಿ ಕಾರ್ಮಿಕ ಸಂಘದ ಹಲವಾರು ಪ್ರಯತ್ನಗಳಿಗೆ ಆಡಳಿತ ವರ್ಗವು ಸ್ಪಂದಿಸಲಿಲ್ಲ, ಅದಕ್ಕೆ ಪೂರಕ ದಾಖಲೆಗಳು ನಮ್ಮಲ್ಲಿವೆ. ಆಡಳಿತ ಮಂಡಳಿಯ ನೋಟಿಸಿನ ವಿಷಯಗಳು ನಮಗೆ ಅರ್ಥವಾಗಿದೆ, ಆಡಳಿತ ಮಂಡಳಿಯ ಷರತ್ತುಗಳು ಕಾರ್ಮಿಕ ವಿರೋಧಿಯ ಜೊತೆಗೆ ಸಂಸ್ಥೆಯ ವಿರುದ್ಧವಾಗಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಯು ಕಂಪೆನಿಯ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕೆಲವು ವಿಚಾರವನ್ನು ಸ್ಪಷ್ಟಪಡಿಸಿದೆ.

►ಆಡಳಿತ ಮಂಡಳಿಯು ತನ್ನ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದೆ.
►ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುವುದು, ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ.
►ಕಾರ್ಮಿಕರು ಈ ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳಕ್ಕೆ ಅರ್ಹರಾಗಿರುತ್ತಾರೆ.
►ಕಾರ್ಮಿಕರು ಕಾನೂನು ಬಾಹಿರ ಬೀಗಮುದ್ರೆ ಹಾಗೂ ಮುಚ್ಚಳಿಕೆ ಸಮಯದಲ್ಲಿ ಕೆಲಸಕ್ಕೆ ಹಾಜರಾಗುವುದಿಲ್ಲ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಅಷ್ಟೇ ಅಲ್ಲದೆ ಮಂಗಳವಾರ ನಡೆದ ಕಾರ್ಮಿಕ ಸಂಘದ “ಸರ್ವ ಸದಸ್ಯರ ಸಭೆ” ಯಲ್ಲಿ ಕೆಲವು ನಿರ್ಣಯಗಳನ್ನು ಪ್ರತಿಭಟನಾ ನಿರತ ಕಾರ್ಮಿರಕು ತೆಗೆದುಕೊಂಡಿದ್ದಾರೆ.

►ಆಡಳಿತ ಮಂಡಳಿಯು ಮುಚ್ಚಳಿಕೆ ಕೇಳುವ ಮೂಲಕ ಮುಂದುವರೆದ ಕಾನೂನು ಬಾಹಿರ ಬೀಗಮುದ್ರೆಯನ್ನು ಖಂಡಿಸುತ್ತೇವೆ.
►ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳ ನೀಡಬೇಕು.
►ಆಡಳಿತ ಮಂಡಳಿಯ ಈ ಸಮಯದ ಎಲ್ಲಾ ಅಮಾನತು ಹಾಗೂ ಶಿಕ್ಷೆಯ ಆದೇಶಗಳನ್ನು ಹಿಂಪಡೆಯಬೇಕು.
►ನಾವು ಕಾನೂನು ಬಾಹಿರ ಬೀಗಮುದ್ರೆಯ ವಿರುದ್ಧ ನಮ್ಮ ನ್ಯಾಯಸಮ್ಮತ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ.

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...