Homeಕರ್ನಾಟಕಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ.

- Advertisement -
- Advertisement -

ಕಳೆದ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಟೊಯೊಟಾ ಕಿಲೋಸ್ಕರ್‌ ಕಾರ್ಮಿಕರ ಪ್ರತಿಭಟನೆಗೆ ಕಂಪೆನಿಯು ಮಂಡಿಯೂರುತ್ತಿದ್ದು ತನ್ನ ಲಾಕೌಟ್‌‌ ಅನ್ನು ತೆರವುಗೊಳಿಸುವುದಾಗಿ ಹೇಳಿದೆ. ಆದರೆ ಕೆಲಸಕ್ಕೆ ಬರಲು ಇಚ್ಚಿಸುವ ಕಾರ್ಮಿಕರು ಮುಚ್ಚಳಿಕೆ ನೀಡಿ ಬರಬಹುದು ಎಂದು ಷರತ್ತನ್ನು ವಿಧಿಸಿದೆ. ಇದಕ್ಕೆ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕಾರ್ಮಿಕ ಸಂಘಟನೆ ಪ್ರತಿಕ್ರಿಯೆ ನೀಡಿದ್ದು, “ಕಂಪೆನಿಯು ಪತ್ರಿಕಾ ಹೇಳಿಕೆ ನೀಡುವ ಮೂಲಕ, ಇಷ್ಟು ದಿನ ಕಾರ್ಮಿಕರು ಮುಷ್ಕರ ಮಾಡುತ್ತಿರಲಿಲ್ಲ ತಾವಾಗಿಯೆ ಬೀಗಮುದ್ರೆಯನ್ನು ಘೋಷಿಸಿದ್ದೆವು ಎಂದು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದೆ.

“ಆಡಳಿತ ಮಂಡಳಿಯು ತನ್ನ ಅಗತ್ಯತೆಗಳನ್ನು ಕಾರ್ಮಿಕ ಸಂಘದ ಸಹಕಾರವಿಲ್ಲದೇ ಪೂರೈಸಿಕೊಳ್ಳಬಹುದು ಎಂದು ಭಾವಿಸಿರಬಹುದು. ಅವರಿಗೆ ಬೀಗ ಮುದ್ರೆಯು ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಈಗ ಅರ್ಥವಾಗುತ್ತಿದೆ. ಇಷ್ಟಾದರೂ ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುತ್ತಿರುವುದು, ಕಾನೂನಿನ ಪ್ರಕಾರ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ಜಿಲ್ಲಾಧಿಕಾರಿ,toyota

“ಕಂಪೆನಿಯು ಎರಡನೇ ಬಾರಿಗೆ ದಿನಾಂಕ 23.11.2020 ರಿಂದ ಘೋಷಿಸಿದ್ದ ಬೀಗಮುದ್ರೆ ಕೂಡಾ ಕಾನೂನು ಬಾಹಿರವಾಗಿತ್ತು. ಈ ನಿರ್ಧಾರವು ನಿರರ್ಥಕ ಹಾಗೂ ಸಂಸ್ಥೆಯ ಬೆಳವಣಿಗೆಗೆ ಹಾನಿಕಾರಕ ಎಂದು ಆಡಳಿತ ಮಂಡಳಿ ಅರಿಯುವವರೆಗೂ ಇದು ಹಾಗೆ ಮುಂದುವರೆಯುತ್ತದೆ” ಎಂದು ಕಂಪೆನಿಯ ಕಾರ್ಮಿಕ ಸಂಘಟನೆ ಟಿಕೆಎಇಯು ಎಚ್ಚರಿಸಿದೆ.

“ಕೆಲಸದ ಒತ್ತಡದ ನಿಗದಿಯ ವಿಚಾರವಾಗಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರಗಳೇ ಕಾರ್ಮಿಕರ ಪ್ರತಿಭಟನೆಗೆ ಕಾರಣವಾಗಿತ್ತೇ ವಿನಃ ಕಾರ್ಮಿಕರು ಯಾವುದೇ ಮುಷ್ಕರ ಮಾಡುತ್ತಿರಲಿಲ್ಲ. ಈ ವಿಚಾರವಾಗಿ ಕಾರ್ಮಿಕ ಸಂಘದ ಹಲವಾರು ಪ್ರಯತ್ನಗಳಿಗೆ ಆಡಳಿತ ವರ್ಗವು ಸ್ಪಂದಿಸಲಿಲ್ಲ, ಅದಕ್ಕೆ ಪೂರಕ ದಾಖಲೆಗಳು ನಮ್ಮಲ್ಲಿವೆ. ಆಡಳಿತ ಮಂಡಳಿಯ ನೋಟಿಸಿನ ವಿಷಯಗಳು ನಮಗೆ ಅರ್ಥವಾಗಿದೆ, ಆಡಳಿತ ಮಂಡಳಿಯ ಷರತ್ತುಗಳು ಕಾರ್ಮಿಕ ವಿರೋಧಿಯ ಜೊತೆಗೆ ಸಂಸ್ಥೆಯ ವಿರುದ್ಧವಾಗಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಯು ಕಂಪೆನಿಯ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕೆಲವು ವಿಚಾರವನ್ನು ಸ್ಪಷ್ಟಪಡಿಸಿದೆ.

►ಆಡಳಿತ ಮಂಡಳಿಯು ತನ್ನ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದೆ.
►ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುವುದು, ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ.
►ಕಾರ್ಮಿಕರು ಈ ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳಕ್ಕೆ ಅರ್ಹರಾಗಿರುತ್ತಾರೆ.
►ಕಾರ್ಮಿಕರು ಕಾನೂನು ಬಾಹಿರ ಬೀಗಮುದ್ರೆ ಹಾಗೂ ಮುಚ್ಚಳಿಕೆ ಸಮಯದಲ್ಲಿ ಕೆಲಸಕ್ಕೆ ಹಾಜರಾಗುವುದಿಲ್ಲ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಅಷ್ಟೇ ಅಲ್ಲದೆ ಮಂಗಳವಾರ ನಡೆದ ಕಾರ್ಮಿಕ ಸಂಘದ “ಸರ್ವ ಸದಸ್ಯರ ಸಭೆ” ಯಲ್ಲಿ ಕೆಲವು ನಿರ್ಣಯಗಳನ್ನು ಪ್ರತಿಭಟನಾ ನಿರತ ಕಾರ್ಮಿರಕು ತೆಗೆದುಕೊಂಡಿದ್ದಾರೆ.

►ಆಡಳಿತ ಮಂಡಳಿಯು ಮುಚ್ಚಳಿಕೆ ಕೇಳುವ ಮೂಲಕ ಮುಂದುವರೆದ ಕಾನೂನು ಬಾಹಿರ ಬೀಗಮುದ್ರೆಯನ್ನು ಖಂಡಿಸುತ್ತೇವೆ.
►ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳ ನೀಡಬೇಕು.
►ಆಡಳಿತ ಮಂಡಳಿಯ ಈ ಸಮಯದ ಎಲ್ಲಾ ಅಮಾನತು ಹಾಗೂ ಶಿಕ್ಷೆಯ ಆದೇಶಗಳನ್ನು ಹಿಂಪಡೆಯಬೇಕು.
►ನಾವು ಕಾನೂನು ಬಾಹಿರ ಬೀಗಮುದ್ರೆಯ ವಿರುದ್ಧ ನಮ್ಮ ನ್ಯಾಯಸಮ್ಮತ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ.

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...