Homeಕರ್ನಾಟಕಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ.

- Advertisement -
- Advertisement -

ಕಳೆದ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಟೊಯೊಟಾ ಕಿಲೋಸ್ಕರ್‌ ಕಾರ್ಮಿಕರ ಪ್ರತಿಭಟನೆಗೆ ಕಂಪೆನಿಯು ಮಂಡಿಯೂರುತ್ತಿದ್ದು ತನ್ನ ಲಾಕೌಟ್‌‌ ಅನ್ನು ತೆರವುಗೊಳಿಸುವುದಾಗಿ ಹೇಳಿದೆ. ಆದರೆ ಕೆಲಸಕ್ಕೆ ಬರಲು ಇಚ್ಚಿಸುವ ಕಾರ್ಮಿಕರು ಮುಚ್ಚಳಿಕೆ ನೀಡಿ ಬರಬಹುದು ಎಂದು ಷರತ್ತನ್ನು ವಿಧಿಸಿದೆ. ಇದಕ್ಕೆ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕಾರ್ಮಿಕ ಸಂಘಟನೆ ಪ್ರತಿಕ್ರಿಯೆ ನೀಡಿದ್ದು, “ಕಂಪೆನಿಯು ಪತ್ರಿಕಾ ಹೇಳಿಕೆ ನೀಡುವ ಮೂಲಕ, ಇಷ್ಟು ದಿನ ಕಾರ್ಮಿಕರು ಮುಷ್ಕರ ಮಾಡುತ್ತಿರಲಿಲ್ಲ ತಾವಾಗಿಯೆ ಬೀಗಮುದ್ರೆಯನ್ನು ಘೋಷಿಸಿದ್ದೆವು ಎಂದು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದೆ.

“ಆಡಳಿತ ಮಂಡಳಿಯು ತನ್ನ ಅಗತ್ಯತೆಗಳನ್ನು ಕಾರ್ಮಿಕ ಸಂಘದ ಸಹಕಾರವಿಲ್ಲದೇ ಪೂರೈಸಿಕೊಳ್ಳಬಹುದು ಎಂದು ಭಾವಿಸಿರಬಹುದು. ಅವರಿಗೆ ಬೀಗ ಮುದ್ರೆಯು ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಈಗ ಅರ್ಥವಾಗುತ್ತಿದೆ. ಇಷ್ಟಾದರೂ ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುತ್ತಿರುವುದು, ಕಾನೂನಿನ ಪ್ರಕಾರ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: 3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

ಜಿಲ್ಲಾಧಿಕಾರಿ,toyota

“ಕಂಪೆನಿಯು ಎರಡನೇ ಬಾರಿಗೆ ದಿನಾಂಕ 23.11.2020 ರಿಂದ ಘೋಷಿಸಿದ್ದ ಬೀಗಮುದ್ರೆ ಕೂಡಾ ಕಾನೂನು ಬಾಹಿರವಾಗಿತ್ತು. ಈ ನಿರ್ಧಾರವು ನಿರರ್ಥಕ ಹಾಗೂ ಸಂಸ್ಥೆಯ ಬೆಳವಣಿಗೆಗೆ ಹಾನಿಕಾರಕ ಎಂದು ಆಡಳಿತ ಮಂಡಳಿ ಅರಿಯುವವರೆಗೂ ಇದು ಹಾಗೆ ಮುಂದುವರೆಯುತ್ತದೆ” ಎಂದು ಕಂಪೆನಿಯ ಕಾರ್ಮಿಕ ಸಂಘಟನೆ ಟಿಕೆಎಇಯು ಎಚ್ಚರಿಸಿದೆ.

“ಕೆಲಸದ ಒತ್ತಡದ ನಿಗದಿಯ ವಿಚಾರವಾಗಿ ಆಡಳಿತ ಮಂಡಳಿಯ ಏಕಪಕ್ಷೀಯ ನಿರ್ಧಾರಗಳೇ ಕಾರ್ಮಿಕರ ಪ್ರತಿಭಟನೆಗೆ ಕಾರಣವಾಗಿತ್ತೇ ವಿನಃ ಕಾರ್ಮಿಕರು ಯಾವುದೇ ಮುಷ್ಕರ ಮಾಡುತ್ತಿರಲಿಲ್ಲ. ಈ ವಿಚಾರವಾಗಿ ಕಾರ್ಮಿಕ ಸಂಘದ ಹಲವಾರು ಪ್ರಯತ್ನಗಳಿಗೆ ಆಡಳಿತ ವರ್ಗವು ಸ್ಪಂದಿಸಲಿಲ್ಲ, ಅದಕ್ಕೆ ಪೂರಕ ದಾಖಲೆಗಳು ನಮ್ಮಲ್ಲಿವೆ. ಆಡಳಿತ ಮಂಡಳಿಯ ನೋಟಿಸಿನ ವಿಷಯಗಳು ನಮಗೆ ಅರ್ಥವಾಗಿದೆ, ಆಡಳಿತ ಮಂಡಳಿಯ ಷರತ್ತುಗಳು ಕಾರ್ಮಿಕ ವಿರೋಧಿಯ ಜೊತೆಗೆ ಸಂಸ್ಥೆಯ ವಿರುದ್ಧವಾಗಿದೆ” ಎಂದು ಕಾರ್ಮಿಕ ಸಂಘಟನೆ ಹೇಳಿದೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಟನೆಯು ಕಂಪೆನಿಯ ಆಡಳಿತ ಮಂಡಳಿಯ ಪತ್ರಿಕಾ ಹೇಳಿಕೆಗೆ ಕೆಲವು ವಿಚಾರವನ್ನು ಸ್ಪಷ್ಟಪಡಿಸಿದೆ.

►ಆಡಳಿತ ಮಂಡಳಿಯು ತನ್ನ ಕಾನೂನು ಬಾಹಿರ ಬೀಗಮುದ್ರೆಯನ್ನು ಮುಂದುವರೆಸಿದೆ.
►ಬೀಗಮುದ್ರೆ ತೆರವಿನ ನಂತರ ಮುಚ್ಚಳಿಕೆ ಕೇಳುವುದು, ಬೀಗಮುದ್ರೆಯನ್ನು ಮುಂದುವರೆಸಿದಂತೆ ಆಗುತ್ತದೆ.
►ಕಾರ್ಮಿಕರು ಈ ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳಕ್ಕೆ ಅರ್ಹರಾಗಿರುತ್ತಾರೆ.
►ಕಾರ್ಮಿಕರು ಕಾನೂನು ಬಾಹಿರ ಬೀಗಮುದ್ರೆ ಹಾಗೂ ಮುಚ್ಚಳಿಕೆ ಸಮಯದಲ್ಲಿ ಕೆಲಸಕ್ಕೆ ಹಾಜರಾಗುವುದಿಲ್ಲ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಅಷ್ಟೇ ಅಲ್ಲದೆ ಮಂಗಳವಾರ ನಡೆದ ಕಾರ್ಮಿಕ ಸಂಘದ “ಸರ್ವ ಸದಸ್ಯರ ಸಭೆ” ಯಲ್ಲಿ ಕೆಲವು ನಿರ್ಣಯಗಳನ್ನು ಪ್ರತಿಭಟನಾ ನಿರತ ಕಾರ್ಮಿರಕು ತೆಗೆದುಕೊಂಡಿದ್ದಾರೆ.

►ಆಡಳಿತ ಮಂಡಳಿಯು ಮುಚ್ಚಳಿಕೆ ಕೇಳುವ ಮೂಲಕ ಮುಂದುವರೆದ ಕಾನೂನು ಬಾಹಿರ ಬೀಗಮುದ್ರೆಯನ್ನು ಖಂಡಿಸುತ್ತೇವೆ.
►ಕಾನೂನು ಬಾಹಿರ ಬೀಗಮುದ್ರೆಯ ಸಮಯದ ಸಂಪೂರ್ಣ ಸಂಬಳ ನೀಡಬೇಕು.
►ಆಡಳಿತ ಮಂಡಳಿಯ ಈ ಸಮಯದ ಎಲ್ಲಾ ಅಮಾನತು ಹಾಗೂ ಶಿಕ್ಷೆಯ ಆದೇಶಗಳನ್ನು ಹಿಂಪಡೆಯಬೇಕು.
►ನಾವು ಕಾನೂನು ಬಾಹಿರ ಬೀಗಮುದ್ರೆಯ ವಿರುದ್ಧ ನಮ್ಮ ನ್ಯಾಯಸಮ್ಮತ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ.

ಆಡಳಿತ ಮಂಡಳಿಯ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 65 ನೇ ದಿನ ದಾಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...