Homeಕರ್ನಾಟಕಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

ಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಅನಿಯಂತ್ರಿತ ಮತ್ತು ಏಕಪಕ್ಷೀಯವಾಗಿ ಕೆಲಸದ ಹೊರೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟಿದ್ದನ್ನೇ ನೆಪವಾಗಿಸಿ ಟೊಯೊಟಾ ಆಡಳಿತವು ಕಂಪೆನಿಯನ್ನು ಲಾಕೌಟ್ ಮಾಡಿತ್ತು. ಇದನ್ನು ವಿರೋಧಿಸಿ ಕಾರ್ಮಿರು ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ.

ಹೋರಾಟವನ್ನು ಹತ್ತಿಕ್ಕಲು ತುಂಬಾ ಪ್ರಯತ್ನಪಟ್ಟ ಆಡಳಿತ ಮಂಡಳಿಯು ಮುಚ್ಚಳಿಕೆ ಬರೆದು ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಕಾರ್ಮಿಕರು ಇದಕ್ಕೆ ಜಗ್ಗದೆ ಇದ್ದಾಗ ಇದೀಗ ಮತ್ತೆ ಮುಚ್ಚಳಿಕೆ ಇಲ್ಲದೆ ಕರ್ತವ್ಯಕ್ಕೆ ಬರುವಂತೆ ನೋಟಿಸ್ ನೀಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ನೈತಿಕ ವಿಜಯ ಎಂದು ಕಾರ್ಮಿಕ ಸಂಘವು ಹೇಳಿದೆ. ಆದರೆ ತನ್ನ ಇದನ್ನು ಒಪ್ಪಿಕೊಳ್ಳದೆ ಆಡಳಿತ ಮಂಡಳಿಯು ಸಂಘದ ವಿರುದ್ದ ಅಪಪ್ರಚಾರ ಮಾಡುತ್ತಿದೆ ಎಂದು ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿಮ್ಮ ಪರವಾಗಿ ನಾವಿದ್ದೇವೆ: ಟೊಯೊಟಾ ಕಾರ್ಮಿಕರಿಗೆ ಸಿದ್ದರಾಮಯ್ಯ ಭರವಸೆ; ವೀಡಿಯೊ

ಹೋರಾಟದುದ್ದಕ್ಕೂ ರಾಜ್ಯದ ಬಿಜೆಪಿ ಸರ್ಕಾರವು ಟೊಯೊಟಾ ಕಾರ್ಮಿಕರ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ತನ್ನ ಅಸಹಾಯಕತೆಯನ್ನು ತೋರಿಸುತ್ತಲೆ ಬಂದಿದೆ. “1999 ರಿಂದ 18 ವರ್ಷಗಳವರೆಗೆ ತೆರಿಗೆ ಮುಂದೂಡಿಕೆ ಮತ್ತು 2010 ರಲ್ಲಿ ಎರಡನೇ ಹಂತದ ಉತ್ಪಾದನೆಗೆ ಹೆಚ್ಚಿನ ತೆರಿಗೆ ಮುಂದೂಡುವಿಕೆ ಪ್ರಯೋಜನಗಳು ಸೇರಿದಂತೆ ಕಂಪನಿಗೆ ಹಲವಾರು ಲಾಭಗಳನ್ನು ನೀಡಿದ ರಾಜ್ಯ ಸರ್ಕಾರ ವಿವಾದವನ್ನು ಪರಿಹರಿಸುವಲ್ಲಿ ಅಸಹಾಯಕರಂತೆ ವರ್ತಿಸುತ್ತಿದೆ ಮತ್ತು ರಾಜ್ಯ ಕಾರ್ಮಿಕ ಇಲಾಖೆ ಮೂಕ ಪ್ರೇಕ್ಷಕನಾಗಿದೆ” ಎಂದು ಟೊಯೊಟಾ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಟೊಯೊಟಾ ಆಡಳಿತ ಮಂಡಳಿಯು, ಕಾರ್ಮಿಕ ಸಂಘಟನೆಯ ನಾಯಕರು ಹೆಚ್ಚುವರಿ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ‘ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಲು ಮುಚ್ಚಳಿಕೆ ಬರೆದಿದ್ದು, ಆದ್ದರಿಂದ ಕಾರ್ಮಿಕರು ಯಾವುದೆ ವೈಯಕ್ತಿಕ ಮುಚ್ಚಳಿಕೆ ಪತ್ರ ಬರೆಯದೆ ಕರ್ತವ್ಯಕ್ಕೆ ಹಾಜರಾಗಿ’ ಎಂದು 01.03.2021 ರಂದು ನೋಟಿಸ್ ನೀಡಿದೆ.

ಆದರೆ ಇದನ್ನು ಕಾರ್ಮಿಕ ಸಂಘಟನೆಗಳು ನಿರಾಕರಿಸಿದ್ದು, ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿಯು ಯಾವುದೆ ಮುಚ್ಚಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಟೊಯೊಟಾ ಆಡಳಿತ ಮಂಡಳಿಯು ತನ್ನ ಕುತಂತ್ರವನ್ನು ಮುಚ್ಚಿಹಾಕಲು ಮಾಡಿರುವ ಕಟ್ಟುಕತೆ ಕತೆ ಎಂದು ಕಾರ್ಮಿಕ ಸಂಘ ಹೇಳಿದೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಯಾವುದೆ ಮುಚ್ಚಳಿಕೆ ನೀಡದೆ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಕಂಪೆನಿಯು ನೋಟಿಸ್ ನೀಡಿದ್ದರಿಂದ ಕಾರ್ಮಿಕ ಸಂಘವು ತಮ್ಮ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗಲು ಸಲಹೆ ನೀಡಿದೆ. ಅದಾಗ್ಯೂ ಕಾರ್ಮಿಕ ಸಂಘದ ಹೋರಾಟವು ಕಂಪೆನಿಯ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಸಂಘವು ಹೇಳಿದೆ. ಜೊತೆಗೆ ಹಲವು ಬೇಡಿಕೆಗಳನ್ನು ಕೂಡಾ ಮುಂದಿಟ್ಟಿದೆ.

  • 10.11.2020 ರಿಂದ 01.03 2021 ರವರೆಗಿನ ಲಾಕ್‌ಔಟ್‌‌ ಅವಧಿಯ ಪೂರ್ಣ ವೇತನ ನೀಡಬೇಕು.
  • ಕಾರ್ಮಿಕ ಸಂಘಟದ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು.
  • ಹೋರಾಟದ ಸಮಯದಲ್ಲಿ ಮಾಡಲಾಗಿರುವ ವಜಾ, ಅಮಾನತು ಆದೇಶ, ಚಾರ್ಜ್‌ಶೀಟ್‌ಗಳನ್ನು ಹಿಂತೆಗೆದುಕೊಳ್ಳಬೇಕು.
  • ವಾರದಲ್ಲಿ 5 ದಿನಗಳ ಕೆಲಸ ಮರುಸ್ಥಾಪನೆ.
  • ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.

ಇದನ್ನೂ ಓದಿ: ಟೊಯೊಟಾ ಆಡಳಿತ ಮಂಡಳಿಯ ವಿರುದ್ದ‌‌ ಕಾರ್ಮಿಕರ ಬೃಹತ್‌ ಪಾದಯಾತ್ರೆ

ಈ ಹಿಂದೆಯೆ ಕಾರ್ಮಿಕರು ಮತ್ತು ಕಂಪೆನಿಯ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಸರ್ಕಾರ ಲಾಕೌಟನ್ನು ಮತ್ತು ಮುಷ್ಕರವನ್ನು ನಿಷೇಧಿಸಿತ್ತು. ಈ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ತಯಾರಾಗಿದ್ದರೂ, ಕಂಪೆನಿ ಮಾತ್ರ ಲಾಕೌಟ್ ತೆರವುಗೊಳಿಸದೆ ಸರ್ಕಾರಿ ಆದೇಶವನ್ನು ಬಹಿರಂಗವಾಗಿ ತಿರಸ್ಕರಿಸಿತ್ತು. ಇದರ ವಿರುದ್ದ ಆಕ್ರೋಶಗೊಂಡ ಕಾರ್ಮಿಕರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು.

ನಿರಂತರವಾಗಿ ಹೋರಾಟ ನಡೆಸುತ್ತಿದ್ದ ಕಾರ್ಮಿಕರಿಗೆ ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಂತೆ ಲಾಕೌಟನ್ನು ತೆರವುಗೊಳಿಸಿ ಮುಚ್ಚಳಿಕೆ ಬರೆದು ಕೆಲಸಕ್ಕೆ ಹಾಜರಾಗುವಂತೆ ಆಡಳಿತ ಮಂಡಳಿ ಷರತ್ತನ್ನು ವಿಧಿಸಿತ್ತು. ಆದರೆ ಕಾರ್ಮಿಕರು ಮಾತ್ರ ಮುಚ್ಚಳಿಕೆ ಬರೆಯುವ ಯಾವುದೆ ಷರತ್ತಿಗೆ ಒಪ್ಪಿಕೊಳ್ಳದೆ ತಮ್ಮ ನ್ಯಾಯಯುತ ಹೋರಾಟವನ್ನು ಮುಂದುವರೆಸಿದರು.

ಈ ನಡುವೆ ಟೊಯೊಟಾ ಆಡಳಿತ ಮಂಡಳಿಯು ಸುಮಾರು 100 ಕಾರ್ಮಿಕರನ್ನು ವಜಾಗೊಳಿಸುವುದು, ಅಮಾನತುಗೊಳಿಸುವುದು ಸೇರಿಂದತೆ ಕಾರ್ಮಿಕರ ವಿರುದ್ದ ಚಾರ್ಜ್‌ಶೀಟ್‌ಗಳು, ಮೆಮೋ ಕಳುಹಿಸುವುದನ್ನು ಮಾಡುತ್ತಲೆ ಬಂದಿತ್ತು. ಕಾರ್ಮಿಕರಿಗೆ ಬಲವಂತವಾಗಿ ವಿ.ಎಸ್.ಎಸ್‌. ಪಡೆಯಲು ಹಾಗೂ ಕಂಪೆನಿಯ ಕೆಲಸವನ್ನು ಬಿಡಲು ಒತ್ತಾಯಿಸುತ್ತಲೆ ಬಂದಿದೆ.

ಇದನ್ನೂ ಓದಿ: ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...