Homeಕರ್ನಾಟಕಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

ಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಅನಿಯಂತ್ರಿತ ಮತ್ತು ಏಕಪಕ್ಷೀಯವಾಗಿ ಕೆಲಸದ ಹೊರೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟಿದ್ದನ್ನೇ ನೆಪವಾಗಿಸಿ ಟೊಯೊಟಾ ಆಡಳಿತವು ಕಂಪೆನಿಯನ್ನು ಲಾಕೌಟ್ ಮಾಡಿತ್ತು. ಇದನ್ನು ವಿರೋಧಿಸಿ ಕಾರ್ಮಿರು ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ.

ಹೋರಾಟವನ್ನು ಹತ್ತಿಕ್ಕಲು ತುಂಬಾ ಪ್ರಯತ್ನಪಟ್ಟ ಆಡಳಿತ ಮಂಡಳಿಯು ಮುಚ್ಚಳಿಕೆ ಬರೆದು ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಕಾರ್ಮಿಕರು ಇದಕ್ಕೆ ಜಗ್ಗದೆ ಇದ್ದಾಗ ಇದೀಗ ಮತ್ತೆ ಮುಚ್ಚಳಿಕೆ ಇಲ್ಲದೆ ಕರ್ತವ್ಯಕ್ಕೆ ಬರುವಂತೆ ನೋಟಿಸ್ ನೀಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ನೈತಿಕ ವಿಜಯ ಎಂದು ಕಾರ್ಮಿಕ ಸಂಘವು ಹೇಳಿದೆ. ಆದರೆ ತನ್ನ ಇದನ್ನು ಒಪ್ಪಿಕೊಳ್ಳದೆ ಆಡಳಿತ ಮಂಡಳಿಯು ಸಂಘದ ವಿರುದ್ದ ಅಪಪ್ರಚಾರ ಮಾಡುತ್ತಿದೆ ಎಂದು ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿಮ್ಮ ಪರವಾಗಿ ನಾವಿದ್ದೇವೆ: ಟೊಯೊಟಾ ಕಾರ್ಮಿಕರಿಗೆ ಸಿದ್ದರಾಮಯ್ಯ ಭರವಸೆ; ವೀಡಿಯೊ

ಹೋರಾಟದುದ್ದಕ್ಕೂ ರಾಜ್ಯದ ಬಿಜೆಪಿ ಸರ್ಕಾರವು ಟೊಯೊಟಾ ಕಾರ್ಮಿಕರ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ತನ್ನ ಅಸಹಾಯಕತೆಯನ್ನು ತೋರಿಸುತ್ತಲೆ ಬಂದಿದೆ. “1999 ರಿಂದ 18 ವರ್ಷಗಳವರೆಗೆ ತೆರಿಗೆ ಮುಂದೂಡಿಕೆ ಮತ್ತು 2010 ರಲ್ಲಿ ಎರಡನೇ ಹಂತದ ಉತ್ಪಾದನೆಗೆ ಹೆಚ್ಚಿನ ತೆರಿಗೆ ಮುಂದೂಡುವಿಕೆ ಪ್ರಯೋಜನಗಳು ಸೇರಿದಂತೆ ಕಂಪನಿಗೆ ಹಲವಾರು ಲಾಭಗಳನ್ನು ನೀಡಿದ ರಾಜ್ಯ ಸರ್ಕಾರ ವಿವಾದವನ್ನು ಪರಿಹರಿಸುವಲ್ಲಿ ಅಸಹಾಯಕರಂತೆ ವರ್ತಿಸುತ್ತಿದೆ ಮತ್ತು ರಾಜ್ಯ ಕಾರ್ಮಿಕ ಇಲಾಖೆ ಮೂಕ ಪ್ರೇಕ್ಷಕನಾಗಿದೆ” ಎಂದು ಟೊಯೊಟಾ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಟೊಯೊಟಾ ಆಡಳಿತ ಮಂಡಳಿಯು, ಕಾರ್ಮಿಕ ಸಂಘಟನೆಯ ನಾಯಕರು ಹೆಚ್ಚುವರಿ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ‘ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಲು ಮುಚ್ಚಳಿಕೆ ಬರೆದಿದ್ದು, ಆದ್ದರಿಂದ ಕಾರ್ಮಿಕರು ಯಾವುದೆ ವೈಯಕ್ತಿಕ ಮುಚ್ಚಳಿಕೆ ಪತ್ರ ಬರೆಯದೆ ಕರ್ತವ್ಯಕ್ಕೆ ಹಾಜರಾಗಿ’ ಎಂದು 01.03.2021 ರಂದು ನೋಟಿಸ್ ನೀಡಿದೆ.

ಆದರೆ ಇದನ್ನು ಕಾರ್ಮಿಕ ಸಂಘಟನೆಗಳು ನಿರಾಕರಿಸಿದ್ದು, ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿಯು ಯಾವುದೆ ಮುಚ್ಚಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಟೊಯೊಟಾ ಆಡಳಿತ ಮಂಡಳಿಯು ತನ್ನ ಕುತಂತ್ರವನ್ನು ಮುಚ್ಚಿಹಾಕಲು ಮಾಡಿರುವ ಕಟ್ಟುಕತೆ ಕತೆ ಎಂದು ಕಾರ್ಮಿಕ ಸಂಘ ಹೇಳಿದೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಯಾವುದೆ ಮುಚ್ಚಳಿಕೆ ನೀಡದೆ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಕಂಪೆನಿಯು ನೋಟಿಸ್ ನೀಡಿದ್ದರಿಂದ ಕಾರ್ಮಿಕ ಸಂಘವು ತಮ್ಮ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗಲು ಸಲಹೆ ನೀಡಿದೆ. ಅದಾಗ್ಯೂ ಕಾರ್ಮಿಕ ಸಂಘದ ಹೋರಾಟವು ಕಂಪೆನಿಯ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಸಂಘವು ಹೇಳಿದೆ. ಜೊತೆಗೆ ಹಲವು ಬೇಡಿಕೆಗಳನ್ನು ಕೂಡಾ ಮುಂದಿಟ್ಟಿದೆ.

  • 10.11.2020 ರಿಂದ 01.03 2021 ರವರೆಗಿನ ಲಾಕ್‌ಔಟ್‌‌ ಅವಧಿಯ ಪೂರ್ಣ ವೇತನ ನೀಡಬೇಕು.
  • ಕಾರ್ಮಿಕ ಸಂಘಟದ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು.
  • ಹೋರಾಟದ ಸಮಯದಲ್ಲಿ ಮಾಡಲಾಗಿರುವ ವಜಾ, ಅಮಾನತು ಆದೇಶ, ಚಾರ್ಜ್‌ಶೀಟ್‌ಗಳನ್ನು ಹಿಂತೆಗೆದುಕೊಳ್ಳಬೇಕು.
  • ವಾರದಲ್ಲಿ 5 ದಿನಗಳ ಕೆಲಸ ಮರುಸ್ಥಾಪನೆ.
  • ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.

ಇದನ್ನೂ ಓದಿ: ಟೊಯೊಟಾ ಆಡಳಿತ ಮಂಡಳಿಯ ವಿರುದ್ದ‌‌ ಕಾರ್ಮಿಕರ ಬೃಹತ್‌ ಪಾದಯಾತ್ರೆ

ಈ ಹಿಂದೆಯೆ ಕಾರ್ಮಿಕರು ಮತ್ತು ಕಂಪೆನಿಯ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಸರ್ಕಾರ ಲಾಕೌಟನ್ನು ಮತ್ತು ಮುಷ್ಕರವನ್ನು ನಿಷೇಧಿಸಿತ್ತು. ಈ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ತಯಾರಾಗಿದ್ದರೂ, ಕಂಪೆನಿ ಮಾತ್ರ ಲಾಕೌಟ್ ತೆರವುಗೊಳಿಸದೆ ಸರ್ಕಾರಿ ಆದೇಶವನ್ನು ಬಹಿರಂಗವಾಗಿ ತಿರಸ್ಕರಿಸಿತ್ತು. ಇದರ ವಿರುದ್ದ ಆಕ್ರೋಶಗೊಂಡ ಕಾರ್ಮಿಕರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು.

ನಿರಂತರವಾಗಿ ಹೋರಾಟ ನಡೆಸುತ್ತಿದ್ದ ಕಾರ್ಮಿಕರಿಗೆ ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಂತೆ ಲಾಕೌಟನ್ನು ತೆರವುಗೊಳಿಸಿ ಮುಚ್ಚಳಿಕೆ ಬರೆದು ಕೆಲಸಕ್ಕೆ ಹಾಜರಾಗುವಂತೆ ಆಡಳಿತ ಮಂಡಳಿ ಷರತ್ತನ್ನು ವಿಧಿಸಿತ್ತು. ಆದರೆ ಕಾರ್ಮಿಕರು ಮಾತ್ರ ಮುಚ್ಚಳಿಕೆ ಬರೆಯುವ ಯಾವುದೆ ಷರತ್ತಿಗೆ ಒಪ್ಪಿಕೊಳ್ಳದೆ ತಮ್ಮ ನ್ಯಾಯಯುತ ಹೋರಾಟವನ್ನು ಮುಂದುವರೆಸಿದರು.

ಈ ನಡುವೆ ಟೊಯೊಟಾ ಆಡಳಿತ ಮಂಡಳಿಯು ಸುಮಾರು 100 ಕಾರ್ಮಿಕರನ್ನು ವಜಾಗೊಳಿಸುವುದು, ಅಮಾನತುಗೊಳಿಸುವುದು ಸೇರಿಂದತೆ ಕಾರ್ಮಿಕರ ವಿರುದ್ದ ಚಾರ್ಜ್‌ಶೀಟ್‌ಗಳು, ಮೆಮೋ ಕಳುಹಿಸುವುದನ್ನು ಮಾಡುತ್ತಲೆ ಬಂದಿತ್ತು. ಕಾರ್ಮಿಕರಿಗೆ ಬಲವಂತವಾಗಿ ವಿ.ಎಸ್.ಎಸ್‌. ಪಡೆಯಲು ಹಾಗೂ ಕಂಪೆನಿಯ ಕೆಲಸವನ್ನು ಬಿಡಲು ಒತ್ತಾಯಿಸುತ್ತಲೆ ಬಂದಿದೆ.

ಇದನ್ನೂ ಓದಿ: ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...