Homeಕರ್ನಾಟಕಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

ಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಅನಿಯಂತ್ರಿತ ಮತ್ತು ಏಕಪಕ್ಷೀಯವಾಗಿ ಕೆಲಸದ ಹೊರೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟಿದ್ದನ್ನೇ ನೆಪವಾಗಿಸಿ ಟೊಯೊಟಾ ಆಡಳಿತವು ಕಂಪೆನಿಯನ್ನು ಲಾಕೌಟ್ ಮಾಡಿತ್ತು. ಇದನ್ನು ವಿರೋಧಿಸಿ ಕಾರ್ಮಿರು ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ.

ಹೋರಾಟವನ್ನು ಹತ್ತಿಕ್ಕಲು ತುಂಬಾ ಪ್ರಯತ್ನಪಟ್ಟ ಆಡಳಿತ ಮಂಡಳಿಯು ಮುಚ್ಚಳಿಕೆ ಬರೆದು ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಕಾರ್ಮಿಕರು ಇದಕ್ಕೆ ಜಗ್ಗದೆ ಇದ್ದಾಗ ಇದೀಗ ಮತ್ತೆ ಮುಚ್ಚಳಿಕೆ ಇಲ್ಲದೆ ಕರ್ತವ್ಯಕ್ಕೆ ಬರುವಂತೆ ನೋಟಿಸ್ ನೀಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ನೈತಿಕ ವಿಜಯ ಎಂದು ಕಾರ್ಮಿಕ ಸಂಘವು ಹೇಳಿದೆ. ಆದರೆ ತನ್ನ ಇದನ್ನು ಒಪ್ಪಿಕೊಳ್ಳದೆ ಆಡಳಿತ ಮಂಡಳಿಯು ಸಂಘದ ವಿರುದ್ದ ಅಪಪ್ರಚಾರ ಮಾಡುತ್ತಿದೆ ಎಂದು ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿಮ್ಮ ಪರವಾಗಿ ನಾವಿದ್ದೇವೆ: ಟೊಯೊಟಾ ಕಾರ್ಮಿಕರಿಗೆ ಸಿದ್ದರಾಮಯ್ಯ ಭರವಸೆ; ವೀಡಿಯೊ

ಹೋರಾಟದುದ್ದಕ್ಕೂ ರಾಜ್ಯದ ಬಿಜೆಪಿ ಸರ್ಕಾರವು ಟೊಯೊಟಾ ಕಾರ್ಮಿಕರ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ತನ್ನ ಅಸಹಾಯಕತೆಯನ್ನು ತೋರಿಸುತ್ತಲೆ ಬಂದಿದೆ. “1999 ರಿಂದ 18 ವರ್ಷಗಳವರೆಗೆ ತೆರಿಗೆ ಮುಂದೂಡಿಕೆ ಮತ್ತು 2010 ರಲ್ಲಿ ಎರಡನೇ ಹಂತದ ಉತ್ಪಾದನೆಗೆ ಹೆಚ್ಚಿನ ತೆರಿಗೆ ಮುಂದೂಡುವಿಕೆ ಪ್ರಯೋಜನಗಳು ಸೇರಿದಂತೆ ಕಂಪನಿಗೆ ಹಲವಾರು ಲಾಭಗಳನ್ನು ನೀಡಿದ ರಾಜ್ಯ ಸರ್ಕಾರ ವಿವಾದವನ್ನು ಪರಿಹರಿಸುವಲ್ಲಿ ಅಸಹಾಯಕರಂತೆ ವರ್ತಿಸುತ್ತಿದೆ ಮತ್ತು ರಾಜ್ಯ ಕಾರ್ಮಿಕ ಇಲಾಖೆ ಮೂಕ ಪ್ರೇಕ್ಷಕನಾಗಿದೆ” ಎಂದು ಟೊಯೊಟಾ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಟೊಯೊಟಾ ಆಡಳಿತ ಮಂಡಳಿಯು, ಕಾರ್ಮಿಕ ಸಂಘಟನೆಯ ನಾಯಕರು ಹೆಚ್ಚುವರಿ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ‘ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಲು ಮುಚ್ಚಳಿಕೆ ಬರೆದಿದ್ದು, ಆದ್ದರಿಂದ ಕಾರ್ಮಿಕರು ಯಾವುದೆ ವೈಯಕ್ತಿಕ ಮುಚ್ಚಳಿಕೆ ಪತ್ರ ಬರೆಯದೆ ಕರ್ತವ್ಯಕ್ಕೆ ಹಾಜರಾಗಿ’ ಎಂದು 01.03.2021 ರಂದು ನೋಟಿಸ್ ನೀಡಿದೆ.

ಆದರೆ ಇದನ್ನು ಕಾರ್ಮಿಕ ಸಂಘಟನೆಗಳು ನಿರಾಕರಿಸಿದ್ದು, ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿಯು ಯಾವುದೆ ಮುಚ್ಚಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಟೊಯೊಟಾ ಆಡಳಿತ ಮಂಡಳಿಯು ತನ್ನ ಕುತಂತ್ರವನ್ನು ಮುಚ್ಚಿಹಾಕಲು ಮಾಡಿರುವ ಕಟ್ಟುಕತೆ ಕತೆ ಎಂದು ಕಾರ್ಮಿಕ ಸಂಘ ಹೇಳಿದೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಯಾವುದೆ ಮುಚ್ಚಳಿಕೆ ನೀಡದೆ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಕಂಪೆನಿಯು ನೋಟಿಸ್ ನೀಡಿದ್ದರಿಂದ ಕಾರ್ಮಿಕ ಸಂಘವು ತಮ್ಮ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗಲು ಸಲಹೆ ನೀಡಿದೆ. ಅದಾಗ್ಯೂ ಕಾರ್ಮಿಕ ಸಂಘದ ಹೋರಾಟವು ಕಂಪೆನಿಯ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಸಂಘವು ಹೇಳಿದೆ. ಜೊತೆಗೆ ಹಲವು ಬೇಡಿಕೆಗಳನ್ನು ಕೂಡಾ ಮುಂದಿಟ್ಟಿದೆ.

  • 10.11.2020 ರಿಂದ 01.03 2021 ರವರೆಗಿನ ಲಾಕ್‌ಔಟ್‌‌ ಅವಧಿಯ ಪೂರ್ಣ ವೇತನ ನೀಡಬೇಕು.
  • ಕಾರ್ಮಿಕ ಸಂಘಟದ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು.
  • ಹೋರಾಟದ ಸಮಯದಲ್ಲಿ ಮಾಡಲಾಗಿರುವ ವಜಾ, ಅಮಾನತು ಆದೇಶ, ಚಾರ್ಜ್‌ಶೀಟ್‌ಗಳನ್ನು ಹಿಂತೆಗೆದುಕೊಳ್ಳಬೇಕು.
  • ವಾರದಲ್ಲಿ 5 ದಿನಗಳ ಕೆಲಸ ಮರುಸ್ಥಾಪನೆ.
  • ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.

ಇದನ್ನೂ ಓದಿ: ಟೊಯೊಟಾ ಆಡಳಿತ ಮಂಡಳಿಯ ವಿರುದ್ದ‌‌ ಕಾರ್ಮಿಕರ ಬೃಹತ್‌ ಪಾದಯಾತ್ರೆ

ಈ ಹಿಂದೆಯೆ ಕಾರ್ಮಿಕರು ಮತ್ತು ಕಂಪೆನಿಯ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಸರ್ಕಾರ ಲಾಕೌಟನ್ನು ಮತ್ತು ಮುಷ್ಕರವನ್ನು ನಿಷೇಧಿಸಿತ್ತು. ಈ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ತಯಾರಾಗಿದ್ದರೂ, ಕಂಪೆನಿ ಮಾತ್ರ ಲಾಕೌಟ್ ತೆರವುಗೊಳಿಸದೆ ಸರ್ಕಾರಿ ಆದೇಶವನ್ನು ಬಹಿರಂಗವಾಗಿ ತಿರಸ್ಕರಿಸಿತ್ತು. ಇದರ ವಿರುದ್ದ ಆಕ್ರೋಶಗೊಂಡ ಕಾರ್ಮಿಕರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು.

ನಿರಂತರವಾಗಿ ಹೋರಾಟ ನಡೆಸುತ್ತಿದ್ದ ಕಾರ್ಮಿಕರಿಗೆ ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಂತೆ ಲಾಕೌಟನ್ನು ತೆರವುಗೊಳಿಸಿ ಮುಚ್ಚಳಿಕೆ ಬರೆದು ಕೆಲಸಕ್ಕೆ ಹಾಜರಾಗುವಂತೆ ಆಡಳಿತ ಮಂಡಳಿ ಷರತ್ತನ್ನು ವಿಧಿಸಿತ್ತು. ಆದರೆ ಕಾರ್ಮಿಕರು ಮಾತ್ರ ಮುಚ್ಚಳಿಕೆ ಬರೆಯುವ ಯಾವುದೆ ಷರತ್ತಿಗೆ ಒಪ್ಪಿಕೊಳ್ಳದೆ ತಮ್ಮ ನ್ಯಾಯಯುತ ಹೋರಾಟವನ್ನು ಮುಂದುವರೆಸಿದರು.

ಈ ನಡುವೆ ಟೊಯೊಟಾ ಆಡಳಿತ ಮಂಡಳಿಯು ಸುಮಾರು 100 ಕಾರ್ಮಿಕರನ್ನು ವಜಾಗೊಳಿಸುವುದು, ಅಮಾನತುಗೊಳಿಸುವುದು ಸೇರಿಂದತೆ ಕಾರ್ಮಿಕರ ವಿರುದ್ದ ಚಾರ್ಜ್‌ಶೀಟ್‌ಗಳು, ಮೆಮೋ ಕಳುಹಿಸುವುದನ್ನು ಮಾಡುತ್ತಲೆ ಬಂದಿತ್ತು. ಕಾರ್ಮಿಕರಿಗೆ ಬಲವಂತವಾಗಿ ವಿ.ಎಸ್.ಎಸ್‌. ಪಡೆಯಲು ಹಾಗೂ ಕಂಪೆನಿಯ ಕೆಲಸವನ್ನು ಬಿಡಲು ಒತ್ತಾಯಿಸುತ್ತಲೆ ಬಂದಿದೆ.

ಇದನ್ನೂ ಓದಿ: ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...