Homeಕರ್ನಾಟಕಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

ಕುತಂತ್ರವನ್ನು ಮುಚ್ಚಿಹಾಕಲು ಕಟ್ಟುಕತೆ ಹರಿಯಬಿಟ್ಟ ಟೊಯೊಟಾ: ಕಾರ್ಮಿಕ ಸಂಘ ಆರೋಪ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಅನಿಯಂತ್ರಿತ ಮತ್ತು ಏಕಪಕ್ಷೀಯವಾಗಿ ಕೆಲಸದ ಹೊರೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟಿದ್ದನ್ನೇ ನೆಪವಾಗಿಸಿ ಟೊಯೊಟಾ ಆಡಳಿತವು ಕಂಪೆನಿಯನ್ನು ಲಾಕೌಟ್ ಮಾಡಿತ್ತು. ಇದನ್ನು ವಿರೋಧಿಸಿ ಕಾರ್ಮಿರು ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ.

ಹೋರಾಟವನ್ನು ಹತ್ತಿಕ್ಕಲು ತುಂಬಾ ಪ್ರಯತ್ನಪಟ್ಟ ಆಡಳಿತ ಮಂಡಳಿಯು ಮುಚ್ಚಳಿಕೆ ಬರೆದು ಕರ್ತವ್ಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಕಾರ್ಮಿಕರು ಇದಕ್ಕೆ ಜಗ್ಗದೆ ಇದ್ದಾಗ ಇದೀಗ ಮತ್ತೆ ಮುಚ್ಚಳಿಕೆ ಇಲ್ಲದೆ ಕರ್ತವ್ಯಕ್ಕೆ ಬರುವಂತೆ ನೋಟಿಸ್ ನೀಡಿದೆ. ಇದು ತಮ್ಮ ಹೋರಾಟಕ್ಕೆ ಸಿಕ್ಕ ನೈತಿಕ ವಿಜಯ ಎಂದು ಕಾರ್ಮಿಕ ಸಂಘವು ಹೇಳಿದೆ. ಆದರೆ ತನ್ನ ಇದನ್ನು ಒಪ್ಪಿಕೊಳ್ಳದೆ ಆಡಳಿತ ಮಂಡಳಿಯು ಸಂಘದ ವಿರುದ್ದ ಅಪಪ್ರಚಾರ ಮಾಡುತ್ತಿದೆ ಎಂದು ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಿಮ್ಮ ಪರವಾಗಿ ನಾವಿದ್ದೇವೆ: ಟೊಯೊಟಾ ಕಾರ್ಮಿಕರಿಗೆ ಸಿದ್ದರಾಮಯ್ಯ ಭರವಸೆ; ವೀಡಿಯೊ

ಹೋರಾಟದುದ್ದಕ್ಕೂ ರಾಜ್ಯದ ಬಿಜೆಪಿ ಸರ್ಕಾರವು ಟೊಯೊಟಾ ಕಾರ್ಮಿಕರ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ತನ್ನ ಅಸಹಾಯಕತೆಯನ್ನು ತೋರಿಸುತ್ತಲೆ ಬಂದಿದೆ. “1999 ರಿಂದ 18 ವರ್ಷಗಳವರೆಗೆ ತೆರಿಗೆ ಮುಂದೂಡಿಕೆ ಮತ್ತು 2010 ರಲ್ಲಿ ಎರಡನೇ ಹಂತದ ಉತ್ಪಾದನೆಗೆ ಹೆಚ್ಚಿನ ತೆರಿಗೆ ಮುಂದೂಡುವಿಕೆ ಪ್ರಯೋಜನಗಳು ಸೇರಿದಂತೆ ಕಂಪನಿಗೆ ಹಲವಾರು ಲಾಭಗಳನ್ನು ನೀಡಿದ ರಾಜ್ಯ ಸರ್ಕಾರ ವಿವಾದವನ್ನು ಪರಿಹರಿಸುವಲ್ಲಿ ಅಸಹಾಯಕರಂತೆ ವರ್ತಿಸುತ್ತಿದೆ ಮತ್ತು ರಾಜ್ಯ ಕಾರ್ಮಿಕ ಇಲಾಖೆ ಮೂಕ ಪ್ರೇಕ್ಷಕನಾಗಿದೆ” ಎಂದು ಟೊಯೊಟಾ ಕಾರ್ಮಿಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಟೊಯೊಟಾ ಆಡಳಿತ ಮಂಡಳಿಯು, ಕಾರ್ಮಿಕ ಸಂಘಟನೆಯ ನಾಯಕರು ಹೆಚ್ಚುವರಿ ಕಾರ್ಮಿಕ ಆಯುಕ್ತರನ್ನು ಭೇಟಿ ಮಾಡಿ ‘ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಲು ಮುಚ್ಚಳಿಕೆ ಬರೆದಿದ್ದು, ಆದ್ದರಿಂದ ಕಾರ್ಮಿಕರು ಯಾವುದೆ ವೈಯಕ್ತಿಕ ಮುಚ್ಚಳಿಕೆ ಪತ್ರ ಬರೆಯದೆ ಕರ್ತವ್ಯಕ್ಕೆ ಹಾಜರಾಗಿ’ ಎಂದು 01.03.2021 ರಂದು ನೋಟಿಸ್ ನೀಡಿದೆ.

ಆದರೆ ಇದನ್ನು ಕಾರ್ಮಿಕ ಸಂಘಟನೆಗಳು ನಿರಾಕರಿಸಿದ್ದು, ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿಯು ಯಾವುದೆ ಮುಚ್ಚಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದು ಟೊಯೊಟಾ ಆಡಳಿತ ಮಂಡಳಿಯು ತನ್ನ ಕುತಂತ್ರವನ್ನು ಮುಚ್ಚಿಹಾಕಲು ಮಾಡಿರುವ ಕಟ್ಟುಕತೆ ಕತೆ ಎಂದು ಕಾರ್ಮಿಕ ಸಂಘ ಹೇಳಿದೆ.

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ಯಾವುದೆ ಮುಚ್ಚಳಿಕೆ ನೀಡದೆ ಕರ್ತವ್ಯಕ್ಕೆ ಹಾಜರಾಗಬಹುದು ಎಂದು ಕಂಪೆನಿಯು ನೋಟಿಸ್ ನೀಡಿದ್ದರಿಂದ ಕಾರ್ಮಿಕ ಸಂಘವು ತಮ್ಮ ಸದಸ್ಯರಿಗೆ ಕರ್ತವ್ಯಕ್ಕೆ ಹಾಜರಾಗಲು ಸಲಹೆ ನೀಡಿದೆ. ಅದಾಗ್ಯೂ ಕಾರ್ಮಿಕ ಸಂಘದ ಹೋರಾಟವು ಕಂಪೆನಿಯ ಒಳಗೆ ಮತ್ತು ಹೊರಗೆ ಮುಂದುವರೆಯುತ್ತದೆ ಎಂದು ಸಂಘವು ಹೇಳಿದೆ. ಜೊತೆಗೆ ಹಲವು ಬೇಡಿಕೆಗಳನ್ನು ಕೂಡಾ ಮುಂದಿಟ್ಟಿದೆ.

  • 10.11.2020 ರಿಂದ 01.03 2021 ರವರೆಗಿನ ಲಾಕ್‌ಔಟ್‌‌ ಅವಧಿಯ ಪೂರ್ಣ ವೇತನ ನೀಡಬೇಕು.
  • ಕಾರ್ಮಿಕ ಸಂಘಟದ ಜೊತೆ ಕೆಲಸದ ಹೊರೆ ಬಗ್ಗೆ ಮಾತುಕತೆ ಮಾಡಿ ಒಪ್ಪಂದ ಮಾಡಬೇಕು.
  • ಹೋರಾಟದ ಸಮಯದಲ್ಲಿ ಮಾಡಲಾಗಿರುವ ವಜಾ, ಅಮಾನತು ಆದೇಶ, ಚಾರ್ಜ್‌ಶೀಟ್‌ಗಳನ್ನು ಹಿಂತೆಗೆದುಕೊಳ್ಳಬೇಕು.
  • ವಾರದಲ್ಲಿ 5 ದಿನಗಳ ಕೆಲಸ ಮರುಸ್ಥಾಪನೆ.
  • ಉತ್ಪಾದನೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ಬಳಸುವುದು ನಿಲ್ಲಿಸಬೇಕು.

ಇದನ್ನೂ ಓದಿ: ಟೊಯೊಟಾ ಆಡಳಿತ ಮಂಡಳಿಯ ವಿರುದ್ದ‌‌ ಕಾರ್ಮಿಕರ ಬೃಹತ್‌ ಪಾದಯಾತ್ರೆ

ಈ ಹಿಂದೆಯೆ ಕಾರ್ಮಿಕರು ಮತ್ತು ಕಂಪೆನಿಯ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಸರ್ಕಾರ ಲಾಕೌಟನ್ನು ಮತ್ತು ಮುಷ್ಕರವನ್ನು ನಿಷೇಧಿಸಿತ್ತು. ಈ ಸಮಯದಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ತಯಾರಾಗಿದ್ದರೂ, ಕಂಪೆನಿ ಮಾತ್ರ ಲಾಕೌಟ್ ತೆರವುಗೊಳಿಸದೆ ಸರ್ಕಾರಿ ಆದೇಶವನ್ನು ಬಹಿರಂಗವಾಗಿ ತಿರಸ್ಕರಿಸಿತ್ತು. ಇದರ ವಿರುದ್ದ ಆಕ್ರೋಶಗೊಂಡ ಕಾರ್ಮಿಕರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು.

ನಿರಂತರವಾಗಿ ಹೋರಾಟ ನಡೆಸುತ್ತಿದ್ದ ಕಾರ್ಮಿಕರಿಗೆ ರಾಜಕೀಯ ನಾಯಕರು ಬೆಂಬಲ ನೀಡುತ್ತಿದ್ದಂತೆ ಲಾಕೌಟನ್ನು ತೆರವುಗೊಳಿಸಿ ಮುಚ್ಚಳಿಕೆ ಬರೆದು ಕೆಲಸಕ್ಕೆ ಹಾಜರಾಗುವಂತೆ ಆಡಳಿತ ಮಂಡಳಿ ಷರತ್ತನ್ನು ವಿಧಿಸಿತ್ತು. ಆದರೆ ಕಾರ್ಮಿಕರು ಮಾತ್ರ ಮುಚ್ಚಳಿಕೆ ಬರೆಯುವ ಯಾವುದೆ ಷರತ್ತಿಗೆ ಒಪ್ಪಿಕೊಳ್ಳದೆ ತಮ್ಮ ನ್ಯಾಯಯುತ ಹೋರಾಟವನ್ನು ಮುಂದುವರೆಸಿದರು.

ಈ ನಡುವೆ ಟೊಯೊಟಾ ಆಡಳಿತ ಮಂಡಳಿಯು ಸುಮಾರು 100 ಕಾರ್ಮಿಕರನ್ನು ವಜಾಗೊಳಿಸುವುದು, ಅಮಾನತುಗೊಳಿಸುವುದು ಸೇರಿಂದತೆ ಕಾರ್ಮಿಕರ ವಿರುದ್ದ ಚಾರ್ಜ್‌ಶೀಟ್‌ಗಳು, ಮೆಮೋ ಕಳುಹಿಸುವುದನ್ನು ಮಾಡುತ್ತಲೆ ಬಂದಿತ್ತು. ಕಾರ್ಮಿಕರಿಗೆ ಬಲವಂತವಾಗಿ ವಿ.ಎಸ್.ಎಸ್‌. ಪಡೆಯಲು ಹಾಗೂ ಕಂಪೆನಿಯ ಕೆಲಸವನ್ನು ಬಿಡಲು ಒತ್ತಾಯಿಸುತ್ತಲೆ ಬಂದಿದೆ.

ಇದನ್ನೂ ಓದಿ: ಹೋರಾಟಕ್ಕೆ ಮಣಿಯುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....