Homeಕರ್ನಾಟಕ3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

3 ನೇ ತಿಂಗಳಿಗೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ದೌರ್ಜನ್ಯಕ್ಕೆ ತಲೆಬಾಗುವುದಿಲ್ಲ ಎಂದ ಕಾರ್ಮಿಕರು

- Advertisement -
- Advertisement -

ಬೆಂಗಳೂರು ಬುಧವಾರ ಮಳೆಯಿಂದ ತೋಯ್ದುಕೊಳ್ಳುತ್ತಿರುವಾಗ ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕರು ನಡೆಸುತ್ತಿರುವ ಹೋರಾಟ ಎರಡನೇ ತಿಂಗಳು ಪೂರೈಸಿತು. ಮಳೆಯ ನಡುವೆಯೂ ತಮ್ಮ ಹೋರಾಟವನ್ನು ಮುಂದುವರಿಸಿರುವ ಕಾರ್ಮಿಕರು ಟೊಯೋಟಾ ಕಿರ್ಲೋಸ್ಕರ್ ಆಡಳಿತ ಮಂಡಳಿಯ ದೌರ್ಜನ್ಯಕ್ಕೆ ತಲೆ ಬಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸಾರಿದರು.

ನಿರಂತರ 60 ದಿನಗಳಿಂದ ಹೋರಾಟ ನಡೆಸುತ್ತಿರುವ ಕಾರ್ಮಿಕರ ಪರವಾಗಿ ಹೆಚ್ಚಿನ ಎಲ್ಲಾ ರಾಜಕೀಯ, ಕಾರ್ಮಿಕರ ಸಂಘಟನೆಗಳು ಬೆಂಬಲಿಸಿದೆ. ಆದರೆ ಸರ್ಕಾರ ಮತ್ತು ಟೊಯೊಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿ ಮಾತ್ರ ತಮ್ಮ ಕಾರ್ಮಿಕ ವಿರೋಧಿ ಧೋರಣೆಯನ್ನು ಮುಂದುವರೆಸಿದೆ.

ಜಿಲ್ಲಾಧಿಕಾರಿ,toyota

ಇದನ್ನೂ ಓದಿ: ರಕ್ತ ಕೊಟ್ಟೇವು-ಸ್ವಾಭಿಮಾನ ಬಿಡೆವು: 50 ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಾರ್ಮಿಕರ ಹೋರಾಟ!

ಟೊಯೋಟಾ ಇದುವರೆಗೂ ವಿಧಾನ ಸೌಧ ಚಲೋ, ರಾಜಭವನ ಚಲೋ, ಜಿಲ್ಲಾಧಿಕಾರಿ ಮುತ್ತಿಗೆ, ಛತ್ರಿ ಚಳುವಳಿ, ರಕ್ತದಾನ ಚಳುವಳಿ ಸೇರಿದಂತೆ ಹಲವಾರು ನವೀನ ಹೋರಾಟವನ್ನು ಮಾಡುತ್ತಾ ಸರ್ಕಾರದ ಗಮನ ಸೆಳೆಯುತ್ತಿದೆ. ಬುಧವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸಂಚಾಲಕರಾದ ರವಿಕೃಷ್ಣ ರೆಡ್ಡಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, “ಕನಾರ್ಟಕ ಸರ್ಕಾರ ಕಾರ್ಮಿಕರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ ಮಧ್ಯಸ್ಥಿಕೆವಹಿಸಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಬೇಕಿದೆ. ಇದು ಕೇವಲ ಟೊಯೋಟಾ ಕಾರ್ಮಿಕರ ಸಮಸ್ಯೆ ಅಲ್ಲ. ಇದು ಇಡೀ ದೇಶದ ಕಾರ್ಮಿಕರ ಸಮಸ್ಯೆ. ಸರ್ಕಾರಗಳು ಬಹುರಾಷ್ಟ್ರೀಯ ಕಂಪನಿಗಳ ಈ ಧೋರಣೆಯನ್ನು ತಡೆಯಲು ಸೂಕ್ತ ಕಾನೂನನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕರ ಹೋರಾಟಕ್ಕೆ ದೇಶದ ಇತರ ಭಾಗದಲ್ಲೂ ಬೆಂಬಲ ವ್ಯಕ್ತವಾಗಿದೆ. ಜನವರಿ 5 ರಂದು ತಮಿಳುನಾಡಿನ ಪೆರಂಬದೂರ್ ಕೈಗಾರಿಕಾ ಪ್ರದೇಶದಲ್ಲಿ ಟೊಯೊಟಾ ಕಾರ್ಮಿಕರ ಪರವಾಗಿ ಪ್ರತಿಭಟನೆ ನಡೆದಿದೆ. ಹ್ಯುಂಡಾಯಿ, ಫೋರ್ಡ್, ನಿಸ್ಸಾನ್, ಬಿಎಂಡಬ್ಲೂ, ಅಪೋಲೋ ಟೈರ್‍ಸ್, ಜೆ.ಕೆ. ಟೈರ್ಸ್, ವಲಿಯೋ, ಯಮಹಾ, ಬ್ರೇ ಕಂಟೋಲ್, ಅಸಹಿ ಇಂಡಿಯಾ ಗ್ಲಾಸ್ ವರ್ಕಸ್ ಯುನಿಯನ್ ಸೇರಿದಂತೆ ಹಲವು ಕಂಪೆನಿಗಳ ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ದಕ್ಷಿಣ ಭಾರತದ ಆಟೋಮೊಬೈಲ್ ಇಂಡಸ್ಟ್ರಿ ಒಕ್ಕೂಟ ರಚಿಸಿ ಮುಂದಿನ ದಿನದಲ್ಲಿ ಟೊಯೊಟಾ ಕಾರ್ಮಿಕರ ಪರವಾಗಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಕಾರ್ಮಿಕ ಸಂಘಟನೆಗಳು ತೀರ್ಮಾನಿಸಿವೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...