Homeಚಳವಳಿರಕ್ತ ಕೊಟ್ಟೇವು-ಸ್ವಾಭಿಮಾನ ಬಿಡೆವು: 50 ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಾರ್ಮಿಕರ ಹೋರಾಟ!

ರಕ್ತ ಕೊಟ್ಟೇವು-ಸ್ವಾಭಿಮಾನ ಬಿಡೆವು: 50 ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಾರ್ಮಿಕರ ಹೋರಾಟ!

ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಸಹೋದ್ಯೋಗಿಗಳ ನೆನಪಿನಾರ್ಥವಾಗಿ, ಪ್ರತಿವರ್ಷದಂತೆ ಈ ವರ್ಷವೂ ಡಿಸಂಬರ್ 28 ರಂದು "ಬೃಹತ್ ರಕ್ತದಾನ ಚಳುವಳಿ" ಯ ಮೂಲಕ ಹೋರಾಟ ಮುಂದುವರೆಸಲಿದ್ದೇವೆ- ಕಾರ್ಮಿಕರು

- Advertisement -
- Advertisement -

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಕಾರ್ಮಿಕರು, ಆಡಳಿತ ಮಂಡಳಿಯ ಅವೈಜ್ಞಾನಿಕ ಕೆಲಸದ ಒತ್ತಡ ಹಾಗೂ ಅಮಾನವೀಯ ನಡೆಯ ವಿರುದ್ಧ ಕಳೆದ 50 ದಿನಗಳಿಂದ ಹೋರಾಟ ನಡೆಸುತ್ತಿದ್ದು, ಕಂಪನಿಯ ಆಡಳಿತವಾಗಲೀ, ಸರ್ಕಾರವಾಗಲೀ ಇದುವರೆಗೂ ಯಾವುದೇ ದಿಟ್ಟ ಕ್ರಮ ಕೈಗೊಂಡಿಲ್ಲ.

ಈ ಶಾಂತಿಯುತ, ನ್ಯಾಯಸಮ್ಮತ ಹೋರಾಟದ 50ನೇ ದಿನದ ಮುಂದುವರಿದ ಭಾಗವಾಗಿ, “2016 ರಲ್ಲಿ ಜನವರಿ 9 ರಂದು ನಡೆದ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಕಾರ್ಮಿಕರ ನೆನಪಿನಾರ್ಥವಾಗಿ ರಕ್ತದಾನ ಚಳುವಳಿ” ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ. “ರಕ್ತ ಕೊಟ್ಟೇವು ಸ್ವಾಭಿಮಾನ ಬಿಡೆವು” ಎನ್ನುವುದು ಪ್ರತಿಭಟನಾ ನಿರತ ಕಾರ್ಮಿಕರ ಒಕ್ಕೊರಲ ದನಿಯಾಗಿದೆ.

ಕಂಪನಿಯ ಕಾರ್ಮಿಕ ಸಂಘವು ವಿಧಾನಸೌಧ ಚಲೋ, ರಾಜಭವನ ಚಲೋ, ಛತ್ರಿ ಚಳುವಳಿ, ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಹಾಗೂ ಬೆಂಗಳೂರು – ಮೈಸೂರು ರಸ್ತೆಯಲ್ಲಿ ಬೃಹತ್ ಮಾನವ ಸರಪಳಿ ಸೇರಿದಂತೆ ಅನೇಕ ವಿಭಿನ್ನ ಹೋರಾಟಗಳನ್ನು ಮಾಡಿಕೊಂಡು ಬಂದಿದೆ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಈಗ ತಮ್ಮ ಹೋರಾಟದ 50ನೇ ದಿನದ ಭಾಗವಾಗಿ, ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಸಹೋದ್ಯೋಗಿಗಳ ನೆನಪಿನಾರ್ಥವಾಗಿ, ಪ್ರತಿವರ್ಷದಂತೆ ಈ ವರ್ಷವು ಡಿಸಂಬರ್ 28 ರಂದು “ಬೃಹತ್ ರಕ್ತದಾನ ಚಳುವಳಿ”ಯ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದ್ದಾರೆ.

ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 50 ನೇ ದಿನಕ್ಕೆ ಕಾಲಿಟ್ಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಇದುವರೆಗೆ ಆಡಳಿತ ಮಂಡಳಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೋರಾಟನಿರತ ಕಾರ್ಮಿಕರು ಹೇಳುತ್ತಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವೈಜ್ಞಾನಿಕ ಕೆಲಸದ ಸಮಯ ಮತ್ತು ಕೆಲಸದ ಶಿಫ್ಟ್‌, ಪ್ರಶ್ನೆ ಮಾಡುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರ ಅಮಾನತು, ಬಂಡವಾಳಶಾಹಿಗಳ ದರ್ಪ, ದಿಢೀರ್ ಲಾಕೌಟ್ ಸೇರಿದಂತೆ ಹತ್ತಾರು ಸಮಸ್ಯೆಗಳನ್ನಿಟ್ಟುಕೊಂಡು ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....