Homeಚಳವಳಿರಕ್ತ ಕೊಟ್ಟೇವು-ಸ್ವಾಭಿಮಾನ ಬಿಡೆವು: 50 ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಾರ್ಮಿಕರ ಹೋರಾಟ!

ರಕ್ತ ಕೊಟ್ಟೇವು-ಸ್ವಾಭಿಮಾನ ಬಿಡೆವು: 50 ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಾರ್ಮಿಕರ ಹೋರಾಟ!

ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಸಹೋದ್ಯೋಗಿಗಳ ನೆನಪಿನಾರ್ಥವಾಗಿ, ಪ್ರತಿವರ್ಷದಂತೆ ಈ ವರ್ಷವೂ ಡಿಸಂಬರ್ 28 ರಂದು "ಬೃಹತ್ ರಕ್ತದಾನ ಚಳುವಳಿ" ಯ ಮೂಲಕ ಹೋರಾಟ ಮುಂದುವರೆಸಲಿದ್ದೇವೆ- ಕಾರ್ಮಿಕರು

- Advertisement -
- Advertisement -

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಕಾರ್ಮಿಕರು, ಆಡಳಿತ ಮಂಡಳಿಯ ಅವೈಜ್ಞಾನಿಕ ಕೆಲಸದ ಒತ್ತಡ ಹಾಗೂ ಅಮಾನವೀಯ ನಡೆಯ ವಿರುದ್ಧ ಕಳೆದ 50 ದಿನಗಳಿಂದ ಹೋರಾಟ ನಡೆಸುತ್ತಿದ್ದು, ಕಂಪನಿಯ ಆಡಳಿತವಾಗಲೀ, ಸರ್ಕಾರವಾಗಲೀ ಇದುವರೆಗೂ ಯಾವುದೇ ದಿಟ್ಟ ಕ್ರಮ ಕೈಗೊಂಡಿಲ್ಲ.

ಈ ಶಾಂತಿಯುತ, ನ್ಯಾಯಸಮ್ಮತ ಹೋರಾಟದ 50ನೇ ದಿನದ ಮುಂದುವರಿದ ಭಾಗವಾಗಿ, “2016 ರಲ್ಲಿ ಜನವರಿ 9 ರಂದು ನಡೆದ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಕಾರ್ಮಿಕರ ನೆನಪಿನಾರ್ಥವಾಗಿ ರಕ್ತದಾನ ಚಳುವಳಿ” ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ. “ರಕ್ತ ಕೊಟ್ಟೇವು ಸ್ವಾಭಿಮಾನ ಬಿಡೆವು” ಎನ್ನುವುದು ಪ್ರತಿಭಟನಾ ನಿರತ ಕಾರ್ಮಿಕರ ಒಕ್ಕೊರಲ ದನಿಯಾಗಿದೆ.

ಕಂಪನಿಯ ಕಾರ್ಮಿಕ ಸಂಘವು ವಿಧಾನಸೌಧ ಚಲೋ, ರಾಜಭವನ ಚಲೋ, ಛತ್ರಿ ಚಳುವಳಿ, ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಹಾಗೂ ಬೆಂಗಳೂರು – ಮೈಸೂರು ರಸ್ತೆಯಲ್ಲಿ ಬೃಹತ್ ಮಾನವ ಸರಪಳಿ ಸೇರಿದಂತೆ ಅನೇಕ ವಿಭಿನ್ನ ಹೋರಾಟಗಳನ್ನು ಮಾಡಿಕೊಂಡು ಬಂದಿದೆ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಈಗ ತಮ್ಮ ಹೋರಾಟದ 50ನೇ ದಿನದ ಭಾಗವಾಗಿ, ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಸಹೋದ್ಯೋಗಿಗಳ ನೆನಪಿನಾರ್ಥವಾಗಿ, ಪ್ರತಿವರ್ಷದಂತೆ ಈ ವರ್ಷವು ಡಿಸಂಬರ್ 28 ರಂದು “ಬೃಹತ್ ರಕ್ತದಾನ ಚಳುವಳಿ”ಯ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದ್ದಾರೆ.

ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 50 ನೇ ದಿನಕ್ಕೆ ಕಾಲಿಟ್ಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಇದುವರೆಗೆ ಆಡಳಿತ ಮಂಡಳಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೋರಾಟನಿರತ ಕಾರ್ಮಿಕರು ಹೇಳುತ್ತಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವೈಜ್ಞಾನಿಕ ಕೆಲಸದ ಸಮಯ ಮತ್ತು ಕೆಲಸದ ಶಿಫ್ಟ್‌, ಪ್ರಶ್ನೆ ಮಾಡುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರ ಅಮಾನತು, ಬಂಡವಾಳಶಾಹಿಗಳ ದರ್ಪ, ದಿಢೀರ್ ಲಾಕೌಟ್ ಸೇರಿದಂತೆ ಹತ್ತಾರು ಸಮಸ್ಯೆಗಳನ್ನಿಟ್ಟುಕೊಂಡು ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....