Homeಚಳವಳಿರಕ್ತ ಕೊಟ್ಟೇವು-ಸ್ವಾಭಿಮಾನ ಬಿಡೆವು: 50 ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಾರ್ಮಿಕರ ಹೋರಾಟ!

ರಕ್ತ ಕೊಟ್ಟೇವು-ಸ್ವಾಭಿಮಾನ ಬಿಡೆವು: 50 ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಾರ್ಮಿಕರ ಹೋರಾಟ!

ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಸಹೋದ್ಯೋಗಿಗಳ ನೆನಪಿನಾರ್ಥವಾಗಿ, ಪ್ರತಿವರ್ಷದಂತೆ ಈ ವರ್ಷವೂ ಡಿಸಂಬರ್ 28 ರಂದು "ಬೃಹತ್ ರಕ್ತದಾನ ಚಳುವಳಿ" ಯ ಮೂಲಕ ಹೋರಾಟ ಮುಂದುವರೆಸಲಿದ್ದೇವೆ- ಕಾರ್ಮಿಕರು

- Advertisement -
- Advertisement -

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಕಾರ್ಮಿಕರು, ಆಡಳಿತ ಮಂಡಳಿಯ ಅವೈಜ್ಞಾನಿಕ ಕೆಲಸದ ಒತ್ತಡ ಹಾಗೂ ಅಮಾನವೀಯ ನಡೆಯ ವಿರುದ್ಧ ಕಳೆದ 50 ದಿನಗಳಿಂದ ಹೋರಾಟ ನಡೆಸುತ್ತಿದ್ದು, ಕಂಪನಿಯ ಆಡಳಿತವಾಗಲೀ, ಸರ್ಕಾರವಾಗಲೀ ಇದುವರೆಗೂ ಯಾವುದೇ ದಿಟ್ಟ ಕ್ರಮ ಕೈಗೊಂಡಿಲ್ಲ.

ಈ ಶಾಂತಿಯುತ, ನ್ಯಾಯಸಮ್ಮತ ಹೋರಾಟದ 50ನೇ ದಿನದ ಮುಂದುವರಿದ ಭಾಗವಾಗಿ, “2016 ರಲ್ಲಿ ಜನವರಿ 9 ರಂದು ನಡೆದ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಕಾರ್ಮಿಕರ ನೆನಪಿನಾರ್ಥವಾಗಿ ರಕ್ತದಾನ ಚಳುವಳಿ” ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ. “ರಕ್ತ ಕೊಟ್ಟೇವು ಸ್ವಾಭಿಮಾನ ಬಿಡೆವು” ಎನ್ನುವುದು ಪ್ರತಿಭಟನಾ ನಿರತ ಕಾರ್ಮಿಕರ ಒಕ್ಕೊರಲ ದನಿಯಾಗಿದೆ.

ಕಂಪನಿಯ ಕಾರ್ಮಿಕ ಸಂಘವು ವಿಧಾನಸೌಧ ಚಲೋ, ರಾಜಭವನ ಚಲೋ, ಛತ್ರಿ ಚಳುವಳಿ, ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಹಾಗೂ ಬೆಂಗಳೂರು – ಮೈಸೂರು ರಸ್ತೆಯಲ್ಲಿ ಬೃಹತ್ ಮಾನವ ಸರಪಳಿ ಸೇರಿದಂತೆ ಅನೇಕ ವಿಭಿನ್ನ ಹೋರಾಟಗಳನ್ನು ಮಾಡಿಕೊಂಡು ಬಂದಿದೆ.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಈಗ ತಮ್ಮ ಹೋರಾಟದ 50ನೇ ದಿನದ ಭಾಗವಾಗಿ, ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ನಮ್ಮ7 ಜನ ಸಹೋದ್ಯೋಗಿಗಳ ನೆನಪಿನಾರ್ಥವಾಗಿ, ಪ್ರತಿವರ್ಷದಂತೆ ಈ ವರ್ಷವು ಡಿಸಂಬರ್ 28 ರಂದು “ಬೃಹತ್ ರಕ್ತದಾನ ಚಳುವಳಿ”ಯ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದ್ದಾರೆ.

ಆಡಳಿತ ಮಂಡಳಿಯ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಲವು ಕಾರ್ಮಿರನ್ನು ವಜಾ ಮಾಡಿದ್ದ ಕಂಪೆನಿಯ ವಿರುದ್ಧ 3500 ಕಾರ್ಮಿಕರು ಪ್ರಾರಂಭಿಸಿದ್ದ ಹೋರಾಟ 50 ನೇ ದಿನಕ್ಕೆ ಕಾಲಿಟ್ಟಿದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಲಾಕೌಟ್‌ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18 ರಂದು ಆದೇಶ ನೀಡಿದ್ದರೂ ಕಂಪೆನಿ ಮಾತ್ರ ಕಾರ್ಮಿಕರನ್ನು ಕಾರ್ಖಾನೆ ಒಳಗಡೆ ಹೋಗಲು ಅನುಮತಿ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಇದುವರೆಗೆ ಆಡಳಿತ ಮಂಡಳಿಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೋರಾಟನಿರತ ಕಾರ್ಮಿಕರು ಹೇಳುತ್ತಾರೆ.

ಜಪಾನ್ ಮೂಲದ ಕಂಪನಿಯು 1999 ರಿಂದಲೂ ಬಿಡದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾವಿರಾರು ಕಾರ್ಮಿಕರು ಕಳೆದ 20 ವರ್ಷದಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವೈಜ್ಞಾನಿಕ ಕೆಲಸದ ಸಮಯ ಮತ್ತು ಕೆಲಸದ ಶಿಫ್ಟ್‌, ಪ್ರಶ್ನೆ ಮಾಡುವ ಕಾರ್ಮಿಕರು ಮತ್ತು ಕಾರ್ಮಿಕ ಮುಖಂಡರ ಅಮಾನತು, ಬಂಡವಾಳಶಾಹಿಗಳ ದರ್ಪ, ದಿಢೀರ್ ಲಾಕೌಟ್ ಸೇರಿದಂತೆ ಹತ್ತಾರು ಸಮಸ್ಯೆಗಳನ್ನಿಟ್ಟುಕೊಂಡು ಕಂಪನಿಯ ಸುಮಾರು 3500 ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...