Homeಮುಖಪುಟಟ್ರ್ಯಾಕ್ಟರ್ ಮೆರವಣಿಗೆ: ದೆಹಲಿ ಸಂಪರ್ಕಿಸುವ ಹೆದ್ದಾರಿ ತಡೆದ ರೈತರು, ನೋಯ್ಡಾ ಗಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ಟ್ರ್ಯಾಕ್ಟರ್ ಮೆರವಣಿಗೆ: ದೆಹಲಿ ಸಂಪರ್ಕಿಸುವ ಹೆದ್ದಾರಿ ತಡೆದ ರೈತರು, ನೋಯ್ಡಾ ಗಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್

- Advertisement -
- Advertisement -

ಮೀರತ್, ಮುಜಾಫರ್‌ನಗರ, ಸಹರಾನ್‌ಪುರ, ಬಾಗ್‌ಪತ್, ಹಾಪುರ್ ಮತ್ತು ಅಮ್ರೋಹಾದಲ್ಲಿ ರೈತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಿ, ಹೆದ್ದಾರಿಗೆ ಅಡ್ಡಲಾಗಿ ತಮ್ಮ ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸುವ ಮೂಲಕ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಯಿತು.

ಮೀರತ್‌ನಲ್ಲಿ, ರೈತರು ಮತ್ತು ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ಕಾರ್ಯಕರ್ತರು ಮೊಹಿಯುದ್ದೀನ್‌ಪುರದಲ್ಲಿ ಎನ್‌ಎಚ್ 58 ಅನ್ನು ತಡೆದರು. ತಮ್ಮ ಬೇಡಿಕೆಗಳಿಗಾಗಿ ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಲು ಬಿಕೆಯು ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಲು ಕರೆ ನೀಡಿದೆ.

‘ನರೇಂದ್ರ ಮೋದಿ ಸರ್ಕಾರ ರೈತರ ಮಾತನ್ನು ಆಲಿಸಲು ಮತ್ತು ರೈತರನ್ನು ಮರೆಯದಂತೆ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲಾಗುತ್ತಿದೆ’ ಎಂದು ಟಿಕಾಯತ್ ಸೋಮವಾರ ಹೇಳಿದ್ದಾರೆ.

‘ನಮ್ಮ ಟ್ರಾಕ್ಟರ್ ಚೈನ್ ಅನ್ನು ಹೊರತೆಗೆಯುವ ಕಾರ್ಯಕ್ರಮವನ್ನು ನಿರ್ಧರಿಸಲಾಗಿದೆ. ದೆಹಲಿಗೆ ಹೋಗುವ ಹೆದ್ದಾರಿಯಲ್ಲಿ ಟ್ರಾಕ್ಟರ್‌ಗಳನ್ನು ನಿಲ್ಲಿಸಲಾಗುತ್ತದೆ, ವಿಶೇಷವಾಗಿ ಹೆದ್ದಾರಿಯ ಡಿವೈಡರ್‌ಗಳಲ್ಲಿ… ಸರ್ಕಾರವು ನಮ್ಮ ಮಾತನ್ನು ಕೇಳುತ್ತದೆ ಮತ್ತು ರೈತರನ್ನು ಮರೆಯಬಾರದು ಎಂದು ವಿಭಿನ್ನ ರೀತಿಯ ಪ್ರತಿಭಟನೆಯನ್ನು ದಾಖಲಿಸಲು ನಿರ್ಧರಿಸಲಾಯಿತು’ ಎಂದು ಟಿಕಾಯತ್ ಹೇಳಿದರು.

‘ನಾವು ಸಂಯುಕ್ತ ಮೋರ್ಚಾದ ಸಭೆಗಾಗಿ ಚಂಡೀಗಢಕ್ಕೆ ಹೋಗಿದ್ದೆವು; 6 ಸದಸ್ಯರ ಸಮಿತಿ ರಚಿಸಿದ್ದೇವೆ. ಸಂಯುಕ್ತ ಮೋರ್ಚಾದಿಂದ ಪ್ರತ್ಯೇಕವಾಗಿರುವ ಎಲ್ಲ ರೈತ ಸಂಘಟನೆಗಳೊಂದಿಗೆ ಸಂವಾದ ನಡೆಸಲು ಇದನ್ನು ರಚಿಸಲಾಗಿದೆ… ಯಾವುದೇ ಸಂಘಟನೆಯು ಸಂಯುಕ್ತ ಮೋರ್ಚಾವನ್ನು ಸೇರಲು ಬಯಸಿದರೆ, ಅದು ಸಮಿತಿಯೊಂದಿಗೆ ಸಂವಾದ ನಡೆಸಬಹುದು’ ಎಂದು ಅವರು ಹೇಳಿದರು.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಟಿಕಾಯತ್ ಮತ್ತು ಬಿಕೆಯು ಲೋಕಶಕ್ತಿಯೊಂದಿಗೆ ಸಂಯೋಜಿತವಾಗಿರುವ ರೈತರು ಟ್ರ್ಯಾಕ್ಟರ್ ಮೆರವಣಿಗೆಯನ್ನು ನಡೆಸುತ್ತಿದ್ದಾರೆ.

‘ನಮಗೆ (ರೈತರಿಗೆ) ಇನ್ನೂ (ಸರ್ಕಾರದಿಂದ) ಸಂದೇಶ ಬಂದಿಲ್ಲ. ಸಂವಾದದ ಹಾದಿ ಯಾವಾಗಲೂ ತೆರೆದಿರುತ್ತದೆ. ಮಾತುಕತೆ ನಡೆಸಲು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದ್ದರಿಂದ, ಸಭೆ ಕರೆದಾಗಲೆಲ್ಲಾ ನಾವು ಸಭೆಯಲ್ಲಿ ಭಾಗವಹಿಸುತ್ತೇವೆ’ ಎಂದು ರೈತ ಮುಖಂಡರೊಬ್ಬರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ದೆಹಲಿ-ನೋಯ್ಡಾ ಗಡಿಯಲ್ಲಿ ಸಂಚಾರಕ್ಕೆ ತೊಂದರೆ: 

ರಾಷ್ಟ್ರ ರಾಜಧಾನಿಗೆ ರೈತರ ಉದ್ದೇಶಿತ ಟ್ರ್ಯಾಕ್ಟರ್ ಮೆರವಣಿಗೆಯ ದೃಷ್ಟಿಯಿಂದ ಸೋಮವಾರ ದೆಹಲಿ-ನೋಯ್ಡಾ ಗಡಿಯಲ್ಲಿ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈತರು ಯಮುನಾ ಎಕ್ಸ್‌ಪ್ರೆಸ್‌ವೇ, ಲುಹರ್ಲಿ ಟೋಲ್ ಪ್ಲಾಜಾ ಮತ್ತು ಮಹಾಮಾಯಾ ಮೇಲ್ಸೇತುವೆ ಮೂಲಕ ಟ್ರ್ಯಾಕ್ಟರ್‌ಗಳಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಯೋಜಿಸಿದ್ದಾರೆ.

ದೆಹಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಗಡಿಯಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ತಪಾಸಣೆಯಿಂದಾಗಿ ದೆಹಲಿಯಿಂದ ನೋಯ್ಡಾ ಕಡೆಗೆ ಚಿಲ್ಲಾ ಗಡಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು.

ಗೌತಮ್ ಬುದ್ಧ ನಗರ ಪೊಲೀಸರ ಪ್ರಕಾರ, ರಾಷ್ಟ್ರ ರಾಜಧಾನಿ ಮತ್ತು ನೋಯ್ಡಾ ನಡುವಿನ ಎಲ್ಲ ಗಡಿ ಬಿಂದುಗಳಲ್ಲಿ ತಡೆಗೋಡೆಗಳನ್ನು ಅಳವಡಿಸಿ ದೆಹಲಿ ಪೊಲೀಸರು ಮತ್ತು ಜಿಲ್ಲಾ ಪೊಲೀಸರಿಂದ ತೀವ್ರ ತಪಾಸಣೆ ನಡೆಸಲಾಗುವುದು, ಪರಿಸ್ಥಿತಿಗೆ ಅನುಗುಣವಾಗಿ ಸಂಚಾರವನ್ನು ಬದಲಾಯಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಕಾನೂನಾತ್ಮಕ ಖಾತರಿ, ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಈ ಆಂದೋಲನ ನಡೆಯುತ್ತಿದೆ.

ಫೆಬ್ರವರಿ 13 ರಿಂದ ಪಂಜಾಬ್‌ನ ಹರಿಯಾಣದ ಗಡಿಯ ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲಿ ರೈತರು ಮೊಕ್ಕಾಂ ಹೂಡಿದ್ದಾರೆ, ಅವರ ಮೆರವಣಿಗೆಯನ್ನು ಭದ್ರತಾ ಸಿಬ್ಬಂದಿ ತಡೆದರು. ಮುಂದಿನ ಕ್ರಮವನ್ನು ನಿರ್ಧರಿಸುವ ಫೆಬ್ರವರಿ 29ರವರೆಗೆ ರೈತರು ಎರಡು ಗಡಿ ಬಿಂದುಗಳಲ್ಲಿ ಇರುವುದನ್ನು ಮುಂದುವರಿಸುತ್ತಾರೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಖಾನೌರಿಯಲ್ಲಿ ನಡೆದ ಘರ್ಷಣೆಯಲ್ಲಿ ಪ್ರತಿಭಟನಾಕಾರರೊಬ್ಬರು ಸಾವನ್ನಪ್ಪಿದ ಮತ್ತು ಸುಮಾರು 12 ಜನ ಪೊಲೀಸ್ ಸಿಬ್ಬಂದಿ ಗಾಯಗೊಂಡ ನಂತರ ರೈತ ಮುಖಂಡರು ಬುಧವಾರ ಎರಡು ದಿನಗಳ ಕಾಲ ‘ದೆಹಲಿ ಚಲೋ’ ಮೆರವಣಿಗೆಗೆ ವಿರಾಮ ನೀಡಿದ್ದರು.

ಇದನ್ನೂ ಓದಿ; ದೆಹಲಿ ಚಲೋ: ಇಂದು ರೈತರಿಂದ ಟ್ರ್ಯಾಕ್ಟರ್ ಮೆರವಣಿಗೆ, ದೆಹಲಿ-ನೋಯ್ಡಾ ಗಡಿಯಲ್ಲಿ ಭಾರಿ ಟ್ರಾಫಿಕ್ ಜಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...