Homeಚಳವಳಿವಿದೇಶದಿಂದ ಹಾಲು ಆಮದಿಗೆ ಕೃಷಿ ಕಾಯ್ದೆಗಳನ್ನು ತರಲಾಗಿದೆ: ಕೋಡಿಹಳ್ಳಿ ಚಂದ್ರಶೇಖರ್‌

ವಿದೇಶದಿಂದ ಹಾಲು ಆಮದಿಗೆ ಕೃಷಿ ಕಾಯ್ದೆಗಳನ್ನು ತರಲಾಗಿದೆ: ಕೋಡಿಹಳ್ಳಿ ಚಂದ್ರಶೇಖರ್‌

ಜ.26ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್: ಬೆಂಗಳೂರಿನಲ್ಲೂ ಬೃಹತ್ ಪ್ರತಿಭಟನೆ ನಡೆಸುತ್ತೇವೆ

- Advertisement -
- Advertisement -

ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಪ್ರಧಾನಿ ಭಾಷಣಕ್ಕೆ ಅಡ್ಡಿಪಡಿಸದೇ ದೆಹಲಿಯಲ್ಲಿ ಟ್ರ್ಯಾಕ್ಟರ್ ಗಳೊಂದಿಗೆ ರೈತರು ಪರೇಡ್ ನಡೆಸಲಿದ್ದಾರೆ. ಅಂದು ಬೆಂಗಳೂರಿನಲ್ಲಿ ಕೂಡ ಪ್ರತಿಭಟನೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೃಷಿ ಮಾರುಕಟ್ಟೆ ಮುಚ್ಚಲ್ಲ ಎಂದು ಹೇಳಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರದೆ ಎಪಿಎಂಸಿ ಕಾಯ್ದೆಯನ್ನೇ ಬೈಪಾಸ್ ಮಾಡಿದೆ. ಇದರಿಂದ ಈ ಕಾಯ್ದೆಯನ್ನು ತಿದ್ದುವುದು, ಬರೆಯುವುದಕ್ಕೆ ಬರುವುದಿಲ್ಲ. ರೈತರಿಗೆ ಸಬ್ಸಿಡಿ ಕೊಡುತ್ತೇವೆ ಎಂದು ಕೇಂದ್ರ ಹೇಳುತ್ತದೆ. ಆದರೆ ಈ ಅಂಶ ಕಾನೂನಿನಲ್ಲಿ ಒಳಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದಂತೆ ರಾಜ್ಯ ಸರ್ಕಾರವೂ ರೈತರಿಗೆ ಸುಳ್ಳು ಹೇಳುತ್ತಿದೆ. ತಾನು ರೂಪಿಸಿದ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ಸುಳ್ಳಿನ ಕೋಟೆಯನ್ನು ಕಟ್ಟುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕಾನೂನು ಸಚಿವರನ್ನೇ ಹೊರಗಿಟ್ಟು ಕಾಯ್ದೆಯನ್ನು ರೂಪಿಸಲಾಗಿದೆ. ಕಾಯ್ದೆಯ ಬಗ್ಗೆ ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ವಿದೇಶದಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಉದ್ದೇಶದಿಂದ ಕಾನೂನು ರೂಪಿಸಲಾಗುತ್ತಿದೆ. ಗ್ರಾಮೀಣ ಭಾಗದ ಹೈನುಗಾರಿಕೆಗೆ ಕೊನೆ ಹಾಡಲು ಸರ್ಕಾರಗಳು ಪ್ರಯತ್ನಿಸುತ್ತಿವೆ. ಗ್ರಾಮೀಣ ಮಹಿಳೆಯರು ಹೈನುಗಾರಿಕೆ ನಂಬಿ ಜೀವನ ಸಾಗಿಸುತ್ತಿದ್ದಾರೆ. ನಾಲ್ಕೈದು ಹಸುಗಳನ್ನು ಸಾಕಿ ಹಾಲು ಮಾರಾಟದಿಂದ ಮನೆ ನಿರ್ವಹಣೆ ಮಾಡಲಾಗುತ್ತಿದೆ. ಮಕ್ಕಳ ಹೊಟ್ಟೆ ಬಟ್ಟೆಗೆ, ಶಿಕ್ಷಣಕ್ಕೆ ಇದೇ ಹಣವನ್ನು ಬಳುಸುತ್ತಿದ್ದಾರೆ. ಹೈನುಗಾರಿಕೆಯನ್ನು ಕೃಷಿಯಿಂದ ಹೊರಗಿಡುವ ಕೆಲಸ ನಡೆಯುತ್ತಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ಬೃಹತ್ ಬಂಡವಾಳಿಗರಿಗೆ, ಕಾರ್ಪೋರೇಟ್ ಕುಳಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಬಂಡವಾಳಿಗರು ಕೃಷಿಯಲ್ಲಿ ಬಂಡವಾಳ ತೊಡಗಿಸಿ ಕೃಷಿಯಿಂದ ರೈತರನ್ನು ದೂರ ಮಾಡುವ ಮತ್ತು ಕಾರ್ಪೋರೇಟ್ ಕಂಪನಿಗಳು ಕೃಷಿ ಉತ್ಪನ್ನ ಮಾರಾಟ ದಿಂದ ಲಾಭ ಪಡೆಯುವುದಕ್ಕೆ ಪ್ರೋತ್ಸಾಹ ನೀಡುವಂತಹ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರು ಗೋಹತ್ಯೆ ನಿಷೇಧ ಕಾಯ್ದೆಗೆ ಅಂಕಿತ ಹಾಕುವ ಮೊದಲು ಯೋಚಿಸಬೇಕಿತ್ತು. ಗೋಹತ್ಯೆ ನಿಷೇಧ ಕಾಯ್ದೆ ವಿಧಾನಪರಿಷತ್ ನಲ್ಲಿ ಅಂಗೀಕಾರಗೊಳ್ಳದಿದ್ದರೂ ರಾಜ್ಯಪಾಲರು ಅದಕ್ಕೆ ಅಂಕಿತ ಹಾಕಿದ್ದಾರೆ. ಇದು ಅವರ ಅಲ್ಪಮತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದಪಟೇಲ್ ಮೊದಲಾದವರು ಇದ್ದರು.


ಇದನ್ನೂ ಓದಿ; ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...