Homeಚಳವಳಿಜ.26 ರ ಟ್ರಾಕ್ಟರ್‌ ಪರೇಡ್: ’ರೂಟ್ ಮ್ಯಾಪ್’ ನೀಡಿದ ದೆಹಲಿ ಪೊಲೀಸರು

ಜ.26 ರ ಟ್ರಾಕ್ಟರ್‌ ಪರೇಡ್: ’ರೂಟ್ ಮ್ಯಾಪ್’ ನೀಡಿದ ದೆಹಲಿ ಪೊಲೀಸರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನನ್ನು ವಿರೋಧಿಸಿ ಗಣರಾಜ್ಯೋತ್ಸವದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರಾಕ್ಟರ್ ರ್‍ಯಾಲಿಗೆ ದೆಹಲಿ ಪೊಲೀಸರು ಭಾನುವಾರ ಗಾಜಿಪುರ, ಸಿಂಗು, ಚಿಲ್ಲಾ ಮತ್ತು ಟಿಕ್ರಿ ಗಡಿಯಿಂದ ನಾಲ್ಕು ಮಾರ್ಗಗಗಳನ್ನು ಸೂಚಿಸಿದ್ದಾರೆ.

ಶನಿವಾರ, ರಾಜ್‌ಪಾತ್‌ನಲ್ಲಿ ಅಧಿಕೃತ ಮೆರವಣಿಗೆ ಮುಗಿದ ನಂತರವೇ ರೈತರ ಟ್ರಾಕ್ಟರ್‌ ರ್‍ಯಾಲಿ ಪ್ರಾರಂಭವಾಗಬೇಕು ಎಂಬ ಷರತ್ತಿನ ಮೇರೆಗೆ ದೆಹಲಿ ಪೊಲೀಸರು ಜನವರಿ 26 ರಂದು ರಾಜಧಾನಿಯೊಳಗೆ ಟ್ರಾಕ್ಟರ್ ಪೆರೇಡ್ ನಡೆಸಲು ರೈತರಿಗೆ ಅನುಮತಿ ನೀಡಿದ್ದರು ಎನ್ನಲಾಗಿತ್ತು. ಆದರೆ ಇಂದು ರೈತರು ದೆಹಲಿ ಪೊಲೀಸರಿಂದ ಲಿಖಿತ ಅನುಮತಿ ನೀಡುವಂತೆ ಕೋರಿದ್ದರು.

ರ್‍ಯಾಲಿಯಲ್ಲಿ ಭಾಗವಹಿಸಲು ಲಕ್ಷಾಂತರ ಟ್ರಾಕ್ಟರುಗಳು ದೆಹಲಿಗೆ ತೆರಳುತ್ತವೆ. “ರ್‍ಯಾಲಿಯು ಸಂಪೂರ್ಣ ಶಾಂತಿಯುತವಾಗಿರುತ್ತದೆ. ಸುಮಾರು 3 ಲಕ್ಷ ಟ್ರಾಕ್ಟರುಗಳು ರ್‍ಯಾಲಿಯಲ್ಲಿ ಭಾಗವಹಿಸಲಿದೆ” ಪಂಜಾಬ್ ಜಮ್ಹೂರಿ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಹೇಳಿದ್ದಾರೆ.

ಗಣರಾಜ್ಯೋತ್ಸವದ ದೃಷ್ಟಿಯಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದರೂ ಸಹ, ದೆಹಲಿ ಪೊಲೀಸರು ರ್‍ಯಾಲಿಯನ್ನು ರದ್ದುಗೊಳಿಸುವಂತೆ ರೈತರನ್ನು ಪ್ರಯತ್ನಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

“ರೈತರಿಗೆ ಲಿಖಿತ ಅರ್ಜಿಯನ್ನು ಕಳುಹಿಸಲು ತಿಳಿಸಲಾಗಿದೆ, ಅವರ ಉದ್ದೇಶಿತ ಮಾರ್ಗಗಳು, ಟ್ರಾಕ್ಟರುಗಳು ಮತ್ತು ಮೆರವಣಿಗೆಯಲ್ಲಿ ಭಾಗವಹಿಸುವ ರೈತರ ಸಂಖ್ಯೆ ಮತ್ತು ಸಮಯಗಳನ್ನು ನಿರ್ದಿಷ್ಟಪಡಿಸಲಾಗಿದೆ. ನಾಳೆ ಅವರೊಂದಿಗೆ ಚರ್ಚಿಸುತ್ತೇವೆ. ಆದರೆ ಅವರು ಪ್ರತಿಭಟನೆ ನಡೆಸುತ್ತಿರುವ ಗಡಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾತ್ರ ಟ್ರ್ಯಾಕ್ಟರ್ ಪೆರೇಡ್ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ಮೆರವಣಿಗೆಯಲ್ಲಿ ಅವರಿಗೆ ವೈದ್ಯಕೀಯ ನೆರವು ಮತ್ತು ಭದ್ರತೆ ಭರವಸೆ ನೀಡಲಾಗಿದೆ” ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಣರಾಜ್ಯೋತ್ಸವದ ಆಚರಣೆಯ ದೃಷ್ಟಿಯಿಂದ ದೆಹಲಿ ಪೊಲೀಸರು ನಗರ ಮತ್ತು ಸುತ್ತಮುತ್ತ ಐದು ಪದರಗಳ ಭದ್ರತೆಯನ್ನು ನಿಯೋಜಿಸಿದ್ದಾರೆ. ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ 40,000 ಕ್ಕೂ ಹೆಚ್ಚು ಪೊಲೀಸರು, ಐಟಿಬಿಪಿ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...