Homeಮುಖಪುಟರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ಕಳೆದ 59 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟ ಹಾಗೂ ಜ. 26ರ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ಬೆಂಗಳೂರಿನಲ್ಲಿ ಬೃಹತ್‌ ಟ್ರ್ಯಾಕರ್‌ ಪರೇಡ್‌ ಮತ್ತು ರೈತ ಸಮಾವೇಶ ನಡೆಯಲಿದೆ.

ಸಂಯುಕ್ತ ಹೋರಾಟ – ಕರ್ನಾಟಕ ವೇದಿಕೆ ಆಯೋಜಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ನಾಲ್ಕೂ ದಿಕ್ಕುಗಳು ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಲಿದ್ದಾರೆ ಎಂದು ಹೋರಾಟದ ಮುಖಂಡ ಹಾಗೂ ರೈತ ಸಂಘದ ಹಿರಿಯ ನಾಯಕರಾದ ಬಡಗಲಪುರ ನಾಗೇಂದ್ರರವರು ತಿಳಿಸಿದ್ದಾರೆ.

ಇದು ರೈತ, ಕಾರ್ಮಿಕರ ಹೋರಾಟ. ರಾಜ್ಯದ ಮುಂಬೈ ಕರ್ನಾಟಕ, ಹೈದರಾಬಾದ್‌ ಕರ್ನಾಟಕ, ಮಡಿಕೇರಿ-ಮೈಸೂರು ಭಾಗಗಳಿಂದ ರೈತರು, ಕಾರ್ಮಿಕರು ಹಾಗೂ ಈ ಹೋರಾಟದ ಬೆಂಬಲಿಗರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 25,000 ಮಂದಿ ಹೊರ ಜಿಲ್ಲೆಗಳಿಂದ ಆಗಮಿಸುತ್ತಿದ್ದಾರೆ. ಹತ್ತಿರದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳು ಆಗಮಿಸುತ್ತಿವೆ. ದ್ವಿಚಕ್ರವಾಹನಗಳು, ಅಲ್ಲದೆ ಇತರೆ ವಾಹನಗಳು ಆಗಮಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಮಡಿಕೇರಿಯ ಕುಟ್ಟಾದಿಂದ ಜ. 25ರಂದು ಟ್ರ್ಯಾಕ್ಟರ್‌ ರ್ಯಾಲಿ ಹೊರಡುತ್ತಿದೆ. ಪೊನ್ನಂಪೇಟೆ, ಬಿ ಮಂಗಲ, ಗೋಣಿಕೊಪ್ಪ, ತಿಥಿಮಥಿ, ಹುಣಸೂರು ಮೂಲಕ ಮೈಸೂರಿಗೆ ಆಗಮಿಸುತ್ತಿದೆ. ಅಲ್ಲಿಂದ ಪಾಂಡವಪುರ, ಮಂಡ್ಯ ಮಾರ್ಗವಾಗಿ ಬರುವ ಈ ರ್ಯಾಲಿ, ಬಿಡದಿ ಸೇರುವುದು.
ಬೆಳಗಾವಿ, ಹುಬ್ಬಳಿಕಡೆಯಿಂದ ಬರುವ ವಾಹನಗಳು ಚಿತ್ರದುರ್ಗದಲ್ಲಿ ತಂಗಲಿವೆ. ರಾಯಚೂರು, ಬಳ್ಳಾರಿ ಕಡೆಯಿಂದ ಬರುವ ವಾಹನಗಳು ತುಮಕೂರಿನ ಮಠದಲ್ಲಿ ತಂಗಲಿವೆ. ಚಿಕ್ಕಬಳ್ಳಾಪುರ, ಕೋಲಾರ ಕಡೆಯಿಂದಲೂ ವಾಹನಗಳು ಆಗಮಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದಂದು ನಗರದ ಎಲ್ಲ ದಿಕ್ಕುಗಳಿಂದ ಬರುವ ವಾಹನಗಳು 11 ಗಂಟೆ ಹೊತ್ತಿಗೆ ಬೆಂಗಳೂರು ನಗರದ ಹೊರ ವಲಯದಲ್ಲಿ ನೆರೆಯಲಿದ್ದು, 12ಗಂಟೆಗೆ ಸರಿಯಾಗಿ ನಗರವನ್ನು ಪ್ರವೇಶಿಸುತ್ತವೆ. ಜ. 26ರಂದು ಬೆಳಗ್ಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಗಳು ಧ್ವಜಾರೋಹಣ ಮಾಡಿ, ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಲಾಗುವುದು ಎಂದು ಬಡಗಲಪುರ ನಾಗೇಂದ್ರರವರು ತಿಳಿಸಿದ್ದಾರೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಕ, ಮಹಿಳಾ ಸಂಘಟನೆಗಳ ಸಂಯುಕ್ತ ಹೋರಾಟವಾಗಿದ್ದು 25000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

  • ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ಇದನ್ನೂ ಓದಿ: ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಹೇಳಿ: ಮೋದಿ ತಾಯಿಗೆ ಪತ್ರ ಬರೆದ ಪಂಜಾಬ್ ರೈತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...