Homeಮುಖಪುಟರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ಕಳೆದ 59 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟ ಹಾಗೂ ಜ. 26ರ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ಬೆಂಗಳೂರಿನಲ್ಲಿ ಬೃಹತ್‌ ಟ್ರ್ಯಾಕರ್‌ ಪರೇಡ್‌ ಮತ್ತು ರೈತ ಸಮಾವೇಶ ನಡೆಯಲಿದೆ.

ಸಂಯುಕ್ತ ಹೋರಾಟ – ಕರ್ನಾಟಕ ವೇದಿಕೆ ಆಯೋಜಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ನಾಲ್ಕೂ ದಿಕ್ಕುಗಳು ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಆಗಮಿಸಲಿದ್ದಾರೆ ಎಂದು ಹೋರಾಟದ ಮುಖಂಡ ಹಾಗೂ ರೈತ ಸಂಘದ ಹಿರಿಯ ನಾಯಕರಾದ ಬಡಗಲಪುರ ನಾಗೇಂದ್ರರವರು ತಿಳಿಸಿದ್ದಾರೆ.

ಇದು ರೈತ, ಕಾರ್ಮಿಕರ ಹೋರಾಟ. ರಾಜ್ಯದ ಮುಂಬೈ ಕರ್ನಾಟಕ, ಹೈದರಾಬಾದ್‌ ಕರ್ನಾಟಕ, ಮಡಿಕೇರಿ-ಮೈಸೂರು ಭಾಗಗಳಿಂದ ರೈತರು, ಕಾರ್ಮಿಕರು ಹಾಗೂ ಈ ಹೋರಾಟದ ಬೆಂಬಲಿಗರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 25,000 ಮಂದಿ ಹೊರ ಜಿಲ್ಲೆಗಳಿಂದ ಆಗಮಿಸುತ್ತಿದ್ದಾರೆ. ಹತ್ತಿರದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳು ಆಗಮಿಸುತ್ತಿವೆ. ದ್ವಿಚಕ್ರವಾಹನಗಳು, ಅಲ್ಲದೆ ಇತರೆ ವಾಹನಗಳು ಆಗಮಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಮಡಿಕೇರಿಯ ಕುಟ್ಟಾದಿಂದ ಜ. 25ರಂದು ಟ್ರ್ಯಾಕ್ಟರ್‌ ರ್ಯಾಲಿ ಹೊರಡುತ್ತಿದೆ. ಪೊನ್ನಂಪೇಟೆ, ಬಿ ಮಂಗಲ, ಗೋಣಿಕೊಪ್ಪ, ತಿಥಿಮಥಿ, ಹುಣಸೂರು ಮೂಲಕ ಮೈಸೂರಿಗೆ ಆಗಮಿಸುತ್ತಿದೆ. ಅಲ್ಲಿಂದ ಪಾಂಡವಪುರ, ಮಂಡ್ಯ ಮಾರ್ಗವಾಗಿ ಬರುವ ಈ ರ್ಯಾಲಿ, ಬಿಡದಿ ಸೇರುವುದು.
ಬೆಳಗಾವಿ, ಹುಬ್ಬಳಿಕಡೆಯಿಂದ ಬರುವ ವಾಹನಗಳು ಚಿತ್ರದುರ್ಗದಲ್ಲಿ ತಂಗಲಿವೆ. ರಾಯಚೂರು, ಬಳ್ಳಾರಿ ಕಡೆಯಿಂದ ಬರುವ ವಾಹನಗಳು ತುಮಕೂರಿನ ಮಠದಲ್ಲಿ ತಂಗಲಿವೆ. ಚಿಕ್ಕಬಳ್ಳಾಪುರ, ಕೋಲಾರ ಕಡೆಯಿಂದಲೂ ವಾಹನಗಳು ಆಗಮಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದಂದು ನಗರದ ಎಲ್ಲ ದಿಕ್ಕುಗಳಿಂದ ಬರುವ ವಾಹನಗಳು 11 ಗಂಟೆ ಹೊತ್ತಿಗೆ ಬೆಂಗಳೂರು ನಗರದ ಹೊರ ವಲಯದಲ್ಲಿ ನೆರೆಯಲಿದ್ದು, 12ಗಂಟೆಗೆ ಸರಿಯಾಗಿ ನಗರವನ್ನು ಪ್ರವೇಶಿಸುತ್ತವೆ. ಜ. 26ರಂದು ಬೆಳಗ್ಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಗಳು ಧ್ವಜಾರೋಹಣ ಮಾಡಿ, ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಲಾಗುವುದು ಎಂದು ಬಡಗಲಪುರ ನಾಗೇಂದ್ರರವರು ತಿಳಿಸಿದ್ದಾರೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಕ, ಮಹಿಳಾ ಸಂಘಟನೆಗಳ ಸಂಯುಕ್ತ ಹೋರಾಟವಾಗಿದ್ದು 25000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

  • ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

ಇದನ್ನೂ ಓದಿ: ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಹೇಳಿ: ಮೋದಿ ತಾಯಿಗೆ ಪತ್ರ ಬರೆದ ಪಂಜಾಬ್ ರೈತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...