Homeಚಳವಳಿಟ್ರಾಕ್ಟರ್‌ ರ್‍ಯಾಲಿ ದೇಶಕ್ಕೆ ಮುಜುಗರ: ತಡೆಯಾಜ್ಞೆ ಕೋರಿದ ದೆಹಲಿ ಪೊಲೀಸರು

ಟ್ರಾಕ್ಟರ್‌ ರ್‍ಯಾಲಿ ದೇಶಕ್ಕೆ ಮುಜುಗರ: ತಡೆಯಾಜ್ಞೆ ಕೋರಿದ ದೆಹಲಿ ಪೊಲೀಸರು

- Advertisement -
- Advertisement -

ಗಣರಾಜ್ಯೋತ್ಸವ ದಿನ ರೈತರು ನಡೆಸಲು ಉದ್ದೇಶಿಸಿರುವ ಟ್ರಾಕ್ಟರ್‌ ರ್‍ಯಾಲಿಯ ವಿರುದ್ಧ ತಡೆಯಾಜ್ಞೆ ಕೋರಿ ದೆಹಲಿ ಪೊಲೀಸರು ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ದೆಹಲಿಯ ಗಡಿಗಳಲ್ಲಿ ಕೇಂದ್ರ ಜಾರಿಗೆ ತಂದಿರುವ ಕರಾಳ ಕೃಷಿ ಕಾನೂನಿನ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರು ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ಗಳ ಮೂಲಕ ಮುತ್ತಿಗೆ ಹಾಕುತ್ತಿರುವುದಾಗಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: No appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

ದೆಹಲಿ ಪೊಲೀಸರು, “ಗಣರಾಜ್ಯೋತ್ಸವ ದಿನದಂದು ಪ್ರತಿಭಟನಾಕಾರರು ಮತ್ತು ಸಂಘಟನೆಗಳ ಒಂದು ಸಣ್ಣ ಗುಂಪು ಟ್ರಾಕ್ಟರ್, ಟ್ರಾಲಿ ಹಾಗೂ ವಾಹನಗಲ್ಲಿ ರ್‍ಯಾಲಿ ನಡೆಸಲು ಯೋಜಿಸಿದೆ. ಈ ರ್‍ಯಾಲಿಯು ಗಣರಾಜ್ಯೋತ್ಸವದ ಪರೇಡ್‌ಗೆ ತೊಂದರೆ ಉಂಟು ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಭದ್ರತಾ ಸಂಸ್ಥೆಗಳ ಅರಿವಿಗೆ ಬಂದಿದೆ. ರ್‍ಯಾಲಿಯು ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸುತ್ತದೆ, ಇದರಿಂದಾಗಿ ರಾಷ್ಟ್ರಕ್ಕೆ ಮುಜುಗರವಾಗುತ್ತದೆ” ಎಂದು ಅರ್ಜಿಯಲ್ಲಿ ಬರೆದಿದ್ದಾರೆ.

ಪ್ರತಿಭಟಿಸುವ ಹಕ್ಕನ್ನು ಎತ್ತಿ ಹಿಡಿಯುವುದು ಸಾರ್ವಜನಿಕ ಆದೇಶ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಒಳಪಟ್ಟಿರುತ್ತದೆ. ಆದರೆ ಜಾಗತಿಕವಾಗಿ ರಾಷ್ಟ್ರದ ಹೆಸರನ್ನು ಕೆಡಿಸುವಂತಿರಬಾರದು ಎಂದು ಅರ್ಜಿ ಹೇಳಿದೆ. ಆದ್ದರಿಂದ, ರಾಷ್ಟ್ರೀಯ ರಾಜಧಾನಿಗೆ ಟ್ರಾಕ್ಟರ್, ಟ್ರಾಲಿ, ವಾಹನ ಮಾರ್ಚ್ ಅಥವಾ ಇನ್ನಾವುದೇ ಮಾದರಿಯ ರೂಪದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸುವುದಕ್ಕೆ ತಡೆ ನೀಡಬೇಕು ಎಂದು ಅರ್ಜಿಯು ಸುಪ್ರೀಂಕೊರ್ಟ್‌ಗೆ ವಿನಂತಿಸಿದೆ.

ದೆಹಲಿ ಪೊಲೀಸರ ಅರ್ಜಿಯ ಹಿನ್ನಲೆಯಲ್ಲಿ ಟ್ರಾಕ್ಟರ್‌ ರ್‍ಯಾಲಿಯ ವಿವರಗಳನ್ನು ಕೇಳಿ ರೈತ ಸಂಘಟನೆಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ದೆಹಲಿ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಪೂರ್ಣ ಪಾಠಕ್ಕೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ನೇಮಿಸುವ ಸಮಿತಿಯಲ್ಲಿ ಭಾಗವಹಿಸುವುದಿಲ್ಲ: ರೈತ ಮುಖಂಡರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...