Homeಮುಖಪುಟಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

- Advertisement -
- Advertisement -

ಜನವರಿ 26 ರಂದು ಗಣರಾಜ್ಯೋತ್ಸವ ದಿನ ನಡೆದ ಟ್ರ್ಯಾಕ್ಟರ್‌ ರ್‍ಯಾಲಿ ವೇಳೆ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಅನೇಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್‌ ರ್‍ಯಾಲಿಯ ಸಂದರ್ಭದಲ್ಲಿ ಮೃತಪಟ್ಟಿದ್ದ ಯುವಕನೊಬ್ಬನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿದ್ದ ಸಂಸದ ಶಶಿ ತರೂರ್‌ ಸೇರಿದಂತೆ ಹಲವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕಾಂಗ್ರೆಸ್‌ ನಾಯಕ ಶಶಿ ತರೂರ್‌, ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ, ನ್ಯಾಷನಲ್‌ ಹೆರಾಲ್ಡ್‌ನ ಮ್ರಿನಾಲ್‌ ಪಾಂಡೆ, ಕೌಮಿ ಆವಾಜ್‌ನ ಜಾಫರ್ ಆಘಾ, ದಿ ಕ್ಯಾರವನ್‌ ಸುದ್ದಿ ಸಮೂಹದ ಅನಂತ್‌ ನಾಥ್‌ ಮತ್ತು ವಿನೋದ್‌ ಜೋಶ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿವೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಭಾರತೀಯ ದಂಡಸಂಹಿತೆಯ ಸೆಕ್ಷನ್ 124 ಎ (ದೇಶದ್ರೋಹ), 153-ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಕೃತ್ಯ), ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಸೆಕ್ಷನ್ 120ಬಿ (ಮರಣದಂಡನೆ ಶಿಕ್ಷೆ ವಿಧಿಸುವ ಅಪರಾಧಕ್ಕೆ ಅಪರಾಧ ಸಂಚು) ಸೇರಿದಂತೆ 11 ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಪಟೇಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ರ್‍ಯಾಲಿ ವೇಳೆ ಟ್ರ್ಯಾಕ್ಟರ್‌ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟಿದ್ದ. ಈ ಸುದ್ದಿಯನ್ನು ಪೊಲೀಸರ ಗುಂಡೇಟಿಗೆ ಯುವಕ ಮೃತಪಟ್ಟಿದ್ದಾನೆಂದು ಕೆಲ ಮಾಧ್ಯಮಗಳು ವರದಿ ಮಾಡಿದವು. ಆ ವರದಿಗಳನ್ನು ಶಶಿ ತರೂರ್‌ ಸೇರಿದಂತೆ ಹಲವು ಪತ್ರಕರ್ತರು ಟ್ವೀಟ್‌ ಮಾಡಿದ್ದರು. ಆದರೆ, ಯುವಕನು ಪೊಲೀಸರ ಗುಂಡೇಟಿಗೆ ಬಲಿಯಾಗಿರಲಿಲ್ಲ ಎಂಬುದು ಪೋಸ್ಟ್‌ಮಾರ್ಟಂ ವರದಿ ಬಂದ ನಂತರ ತಿಳಿದಿದೆ ಎಂದು ಹೇಳಲಾಗುತ್ತಿದೆ.

ಯುವಕನ ಸಾವಿನ ಬಗೆಗಿನ ವರದಿಯನ್ನು ತಿರುಚಲಾಗಿದೆ. ಇದು ಪೂರ್ವಾಗ್ರಹ ಪೀಡಿತವಾಗಿದೆ. ಇವರು “ರಾಷ್ಟ್ರೀಯ ಸುರಕ್ಷತೆ ಮತ್ತು ಜನರ ಜೀವನವನ್ನು ಅಪಾಯಕ್ಕೆ ದೂಡಿದ್ದಾರೆ” ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...