Homeಮುಖಪುಟಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

- Advertisement -
- Advertisement -

ಜನವರಿ 26 ರಂದು ಗಣರಾಜ್ಯೋತ್ಸವ ದಿನ ನಡೆದ ಟ್ರ್ಯಾಕ್ಟರ್‌ ರ್‍ಯಾಲಿ ವೇಳೆ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಅನೇಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್‌ ರ್‍ಯಾಲಿಯ ಸಂದರ್ಭದಲ್ಲಿ ಮೃತಪಟ್ಟಿದ್ದ ಯುವಕನೊಬ್ಬನ ಸಾವಿಗೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿದ್ದ ಸಂಸದ ಶಶಿ ತರೂರ್‌ ಸೇರಿದಂತೆ ಹಲವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಕಾಂಗ್ರೆಸ್‌ ನಾಯಕ ಶಶಿ ತರೂರ್‌, ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ, ನ್ಯಾಷನಲ್‌ ಹೆರಾಲ್ಡ್‌ನ ಮ್ರಿನಾಲ್‌ ಪಾಂಡೆ, ಕೌಮಿ ಆವಾಜ್‌ನ ಜಾಫರ್ ಆಘಾ, ದಿ ಕ್ಯಾರವನ್‌ ಸುದ್ದಿ ಸಮೂಹದ ಅನಂತ್‌ ನಾಥ್‌ ಮತ್ತು ವಿನೋದ್‌ ಜೋಶ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿವೆ.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಭಾರತೀಯ ದಂಡಸಂಹಿತೆಯ ಸೆಕ್ಷನ್ 124 ಎ (ದೇಶದ್ರೋಹ), 153-ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಕೃತ್ಯ), ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಸೆಕ್ಷನ್ 120ಬಿ (ಮರಣದಂಡನೆ ಶಿಕ್ಷೆ ವಿಧಿಸುವ ಅಪರಾಧಕ್ಕೆ ಅಪರಾಧ ಸಂಚು) ಸೇರಿದಂತೆ 11 ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಪಟೇಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ರ್‍ಯಾಲಿ ವೇಳೆ ಟ್ರ್ಯಾಕ್ಟರ್‌ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟಿದ್ದ. ಈ ಸುದ್ದಿಯನ್ನು ಪೊಲೀಸರ ಗುಂಡೇಟಿಗೆ ಯುವಕ ಮೃತಪಟ್ಟಿದ್ದಾನೆಂದು ಕೆಲ ಮಾಧ್ಯಮಗಳು ವರದಿ ಮಾಡಿದವು. ಆ ವರದಿಗಳನ್ನು ಶಶಿ ತರೂರ್‌ ಸೇರಿದಂತೆ ಹಲವು ಪತ್ರಕರ್ತರು ಟ್ವೀಟ್‌ ಮಾಡಿದ್ದರು. ಆದರೆ, ಯುವಕನು ಪೊಲೀಸರ ಗುಂಡೇಟಿಗೆ ಬಲಿಯಾಗಿರಲಿಲ್ಲ ಎಂಬುದು ಪೋಸ್ಟ್‌ಮಾರ್ಟಂ ವರದಿ ಬಂದ ನಂತರ ತಿಳಿದಿದೆ ಎಂದು ಹೇಳಲಾಗುತ್ತಿದೆ.

ಯುವಕನ ಸಾವಿನ ಬಗೆಗಿನ ವರದಿಯನ್ನು ತಿರುಚಲಾಗಿದೆ. ಇದು ಪೂರ್ವಾಗ್ರಹ ಪೀಡಿತವಾಗಿದೆ. ಇವರು “ರಾಷ್ಟ್ರೀಯ ಸುರಕ್ಷತೆ ಮತ್ತು ಜನರ ಜೀವನವನ್ನು ಅಪಾಯಕ್ಕೆ ದೂಡಿದ್ದಾರೆ” ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...