Homeಚಳವಳಿಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ನೆನಪಿಡಿ, ನಮ್ಮ ಗುರಿ ದೆಹಲಿಯನ್ನು ವಶಪಡಿಸಿಕೊಳ್ಳುವುದಲ್ಲ, ಈ ದೇಶದ ಜನರ ಹೃದಯವನ್ನು ಗೆಲ್ಲುವುದು.

- Advertisement -
- Advertisement -

ಮೂರು ಕರಾಳ ಕೃಷಿ ಕಾನೂನಿನ ವಿರುದ್ದ ಪ್ರತಿಭಟಿಸುತ್ತಿರುವ ರೈತರು ಜನವರಿ 26 ರ ಗಣರಾಜ್ಯೋತ್ಸವದಂದು ಟ್ರಾಕ್ಟರ್ ರ್‍ಯಾಲಿ ನಡೆಸಲಿದ್ದಾರೆ. ಈ ಐತಿಹಾಸಿಕ ರೈತರ ಗಣರಾಜ್ಯೋತ್ಸವಕ್ಕೆ ರೈತರು ತಮಗೆ ತಾವೇ ಮಾರ್ಗಸೂಚಿಗಳನ್ನು ಅಳವಡಿಕೊಂಡಿದ್ದಾರೆ. ಅವು ಹೀಗಿದೆ… 

ಸ್ನೇಹಿತರೇ, ನಾವು ಇತಿಹಾಸವನ್ನು ನಿರ್ಮಿಸಲಿದ್ದೇವೆ. ಇತಿಹಾಸದಲ್ಲಿ ಹಿಂದೆಂದೂ ಈ ಗಣರಾಜ್ಯದ ಜನರು ಗಣರಾಜ್ಯೋತ್ಸವದಂದು ಈ ರೀತಿಯ ಮೆರವಣಿಗೆಯ ಭಾಗವಾಗಿಲ್ಲ. ಈ ಮೆರವಣಿಗೆಯ ಮೂಲಕ ನಾವು ದೇಶ ಮತ್ತು ಜಗತ್ತಿಗೆ ನಮ್ಮ ಬಗ್ಗೆ ಹೇಳಬೇಕಾಗಿದೆ.

ನಾವು ಮೂರು ರೈತ ವಿರೋಧಿ ಕಾನೂನುಗಳ ಬಗ್ಗೆ ಸತ್ಯವನ್ನು ತಿಳಿಸಬೇಕಾಗಿದೆ. ಈ ಐತಿಹಾಸಿಕ ಮೆರವಣಿಗೆ ಯಾವುದೇ ಕಿರಿಕಿರಿಗೆ ಕಾರಣವಾಗದಂತೆ ನಾವು ಕಾಳಜಿ ವಹಿಸಬೇಕು. ಮೆರವಣಿಗೆಯನ್ನು ಅತ್ಯಂತ ಶಾಂತಿಯುತವಾಗಿ ಕರೆದೊಯ್ಯುವಲ್ಲಿ ನಮ್ಮ ಗೆಲುವು ಇರುತ್ತದೆ; ಯಾವುದೇ ಅನಗತ್ಯ ಘಟನೆಗಳು ನಡೆಯಕೂಡದು. ನೆನಪಿಡಿ, ನಮ್ಮ ಗುರಿ ದೆಹಲಿಯನ್ನು ವಶಪಡಿಸಿಕೊಳ್ಳುವುದಲ್ಲ, ಈ ದೇಶದ ಜನರ ಹೃದಯವನ್ನು ಗೆಲ್ಲುವುದು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ ಜ. 26ರಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ ಪರೇಡ್‌; ರಾಜಧಾನಿಯತ್ತ 5000 ವಾಹನಗಳು!

ಇದನ್ನು ಗಮನದಲ್ಲಿಟ್ಟುಕೊಂಡು, ’ಸಂಯುಕ್ತ್ ಕಿಸಾನ್ ಮೋರ್ಚ’ ಮೆರವಣಿಗೆಗೆ ಸರ್ವಾನುಮತದಿಂದ ಒಪ್ಪಿದ ಕೆಲವು ಸೂಚನೆಗಳನ್ನು ಪ್ರಸ್ತುತಪಡಿಸುತ್ತಿದೆ. ದಯವಿಟ್ಟು ಅದನ್ನು ಸಾಧ್ಯವಾದಷ್ಟು ಜನರೊಂದಿಗೆ ಹಂಚಿಕೊಳ್ಳಿ ಮತ್ತು ಯಾವುದೇ ಗೊಂದಲಗಳಿದ್ದಲ್ಲಿ, ನಿಮ್ಮ ಆಯಾ ಸಂಸ್ಥೆಗಳ ಮುಖಂಡರನ್ನು ಸಂಪರ್ಕಿಸಿ ಅಥವಾ ಸಹಾಯವಾಣಿ ಸಂಖ್ಯೆ 7428384230 ಗೆ ಕರೆ ಮಾಡಿ.

ಮೆರವಣಿಗೆಗೆ ಮುಂಚಿತವಾಗಿ ಸಿದ್ಧತೆಗಳು

  • ಮೆರವಣಿಗೆಯಲ್ಲಿ ಟ್ರಾಲಿಗಳನ್ನು ಅನುಮತಿಸಲಾಗುವುದಿಲ್ಲ. ಟ್ರ್ಯಾಕ್ಟರ್‌ಗಳು ಮತ್ತು ಇತರ ವಾಹನಗಳನ್ನು ಮಾತ್ರ ಅನುಮತಿಸಲಾಗುವುದು. ವಿಶೇಷ ಟ್ಯಾಬ್ಲೋ ಹೊಂದಿರುವ ಟ್ರಾಲಿಗಳಿಗೆ ವಿನಾಯಿತಿ ನೀಡಬಹುದು. ದಯವಿಟ್ಟು ಟ್ರಾಲಿಯ ಸುರಕ್ಷತೆಗಾಗಿ ವ್ಯವಸ್ಥೆ ಮಾಡಿ.
  • ನಿಮ್ಮೊಂದಿಗೆ 24 ಗಂಟೆಗಳಿಗೆ ಬೇಕಾಗುವಷ್ಟು ಪಡಿತರ ಮತ್ತು ನೀರನ್ನು ಪ್ಯಾಕ್ ಮಾಡಿ. ಚಳಿಯಿಂದ ರಕ್ಷಣೆ ಹೊಂದಲು ನೀವು ಸರಿಯಾದ ವ್ಯವಸ್ಥೆಗಳನ್ನು ಹೊಂದಿರುವಿರಾ ಎಂದು ಖಚಿತಪಡಿಸಿಕೊಳ್ಳಿ. ನೀವು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡಿದ್ದರೆ ಅದು ಅಗತ್ಯವಾಗಬಹುದು.
  • ಪ್ರತಿ ಟ್ರ್ಯಾಕ್ಟರ್ ಅಥವಾ ಚಕ್ಕಡಿಯನ್ನು ರೈತರ ಸಂಘಟನೆಗಳ ಧ್ವಜ ಮತ್ತು ರಾಷ್ಟ್ರೀಯ ಧ್ವಜದೊಂದಿಗೆ ಅಳವಡಿಸಬೇಕೆಂದು ಸಂಯುಕ್ತ್ ಕಿಸಾನ್ ಮೋರ್ಚಾ ಮನವಿ ಮಾಡುತ್ತದೆ ಯಾವುದೇ ರಾಜಕೀಯ ಪಕ್ಷದ ಧ್ವಜ ಹಾಕಕೂಡದು.
  • ಯಾವುದೇ ಶಸ್ತ್ರಾಸ್ತ್ರವನ್ನು ನಿಮ್ಮೊಂದಿಗೆ ಕೊಂಡೊಯ್ಯಬೇಡಿ, ಕೋಲುಗಳನ್ನು ಸಹ ತರಬೇಡಿ. ಯಾವುದೇ ಪ್ರಚೋದನಕಾರಿ ಅಥವಾ ನಕಾರಾತ್ಮಕ ಘೋಷಣೆಗಳಿರುವ ಬ್ಯಾನರ್‌ಗಳನ್ನು ಬಳಸಬೇಡಿ.
  • ಮೆರವಣಿಗೆಯಲ್ಲಿ ನೀವು ಭಾಗವಹಿಸುವುದರ ಬಗ್ಗೆ ತಿಳಿಸಲು ನೀವು ಬಯಸಿದರೆ, 8448385556 ಗೆ ಮಿಸ್ಡ್ ಕಾಲ್ ನೀಡಿ.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ಪೆರೇಡ್ ಸಮಯದಲ್ಲಿ ಅನುಸರಿಸಬೇಕಾದ ಸೂಚನೆಗಳು

  • ಮೆರವಣಿಗೆಯನ್ನು ರೈತ ಮುಖಂಡರೊಂದಿಗೆ ಕಾರುಗಳ ಮೂಂಚೂಣಿಯಲ್ಲಿ ನಡೆಸಲಾಗುತ್ತದೆ. ಯಾವುದೇ ಕಾರು / ಟ್ರಾಕ್ಟರ್ ಆ ಕಾರನ್ನು ಹಿಂದಿಕ್ಕಬಾರದು. ಹಸಿರು ಜಾಕೆಟ್ ಧರಿಸಿದ ನಮ್ಮ ಸ್ವಯಂಸೇವಕರ ನಿರ್ದೇಶನಗಳನ್ನು ದಯವಿಟ್ಟು ಅನುಸರಿಸಿ.
  • ಮೆರವಣಿಗೆಗಾಗಿ ಮಾರ್ಗವನ್ನು ಮೊದಲೇ ನಿರ್ಧರಿಸಲಾಗಿದೆ ಮತ್ತು ಗುರುತಿಸಲಾಗಿದೆ. ಪೊಲೀಸ್ ಮತ್ತು ಸಂಚಾರ ಸ್ವಯಂಸೇವಕರು ನಿಮಗೆ ಮಾರ್ಗದರ್ಶನ ನೀಡುತ್ತಾರೆ. ಮಾರ್ಗದಿಂದ ವಿಚಲನಗೊಂಡ ಯಾವುದೇ ಕಾರು / ಟ್ರಾಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
  • ಯಾವುದೇ ಕಾರು / ಟ್ರಾಕ್ಟರ್ ಅನ್ನು ಯಾವುದೇ ಕಾರಣವಿಲ್ಲದೆ ಒಂದು ಜಾಗದಲ್ಲಿ ನಿಲ್ಲಿಸಿದರೆ ಆಕ್ರಮಿಸಿಕೊಂಡರೆ, ಆ ಕಾರು / ಟ್ರಾಕ್ಟರ್ ಅನ್ನು ಸ್ವಯಂಸೇವಕರು ತೆಗೆದುಹಾಕುತ್ತಾರೆ ಎಂದು ಎಸ್‌ಕೆಎಂ ನಿರ್ಧರಿಸಿದೆ. ಪೆರೇಡ್‌ನಲ್ಲಿರುವ ಎಲ್ಲಾ ಕಾರು/ಟ್ರಾಕ್ಟರ್‌ಗಳು ಮೆರವಣಿಗೆಯನ್ನು ಪೂರ್ಣಗೊಳಿಸಿದ ನಂತರ ಆರಂಭಿಕ ಹಂತಕ್ಕೆ ಮರಳಬೇಕು.
  • ಚಾಲಕ ಸೇರಿದಂತೆ ಗರಿಷ್ಠ 5 ಜನರು ಒಂದು ಟ್ರ್ಯಾಕ್ಟರ್‌ನಲ್ಲಿ ಸವಾರಿ ಮಾಡಬಹುದು. ಟ್ರಾಕ್ಟರುಗಳ ಬಾನೆಟ್, ಬಂಪರ್ ಅಥವಾ ಟ್ರ್ಯಾಕ್ಟರ್ ಮೇಲ್ಭಾಗದಲ್ಲಿ ಕೂಳಿತುಕೊಳ್ಳಬಾರದು.
  • ಎಲ್ಲಾ ಟ್ರಾಕ್ಟರುಗಳು ಒಂದು ಸಾಲಿನಲ್ಲಿ ಮುಂದುವರಿಯಬೇಕು ಮತ್ತು ಪೆರೇಡ್‌ನಾದ್ಯಂತ ಯಾವುದೇ ಇತರ ವಾಹನವನ್ನು ಹಿಂದಿಕ್ಕುವಂತಿಲ್ಲ. ಮೆರವಣಿಗೆಯನ್ನು ಮುನ್ನಡೆಸುವ ರೈತ ಮುಖಂಡರ ವಾಹನಗಳನ್ನು ದಯವಿಟ್ಟು ಹಿಂದಿಕ್ಕಬೇಡಿ.
  • ದಯವಿಟ್ಟು ಟ್ರ್ಯಾಕ್ಟರ್‌ನಲ್ಲಿ ಸಂಗೀತ ನುಡಿಸಬೇಡಿ. ಮೆರವಣಿಗೆಯಲ್ಲಿರುವ ಎಲ್ಲ ಪ್ರಕಟಣೆಗಳು ಯಾವುದೇ ಅಡೆತಡೆಯಿಲ್ಲದೆ ಕೇಳಿಸಿಕೊಳ್ಳುವುದನ್ನು ಇದು ಖಚಿತಪಡಿಸುತ್ತದೆ.
  • ಮೆರವಣಿಗೆಗೆ ಮೊದಲು ಅಥವಾ ಮೆರವಣಿಗೆ ಸಮಯದಲ್ಲಿ ಯಾವುದೇ ಮಾದಕವಸ್ತು ಬಳಸುವುದನ್ನು ನಿಷೇಧಿಸಲಾಗಿದೆ. ಅಂತಹ ಪ್ರಕರಣಗಳನ್ನು ಸಂಚಾರ ಸ್ವಯಂಸೇವಕರಿಗೆ ವರದಿ ಮಾಡಲಾಗುತ್ತದೆ.
  • ಮೆರವಣಿಗೆಯನ್ನು ಮನೋಹರವಾಗಿ ನಡೆಸುವುದು ಮತ್ತು ನಮ್ಮ ಸಹವರ್ತಿ ನಾಗರಿಕರ ಹೃದಯಗಳನ್ನು ಗೆಲ್ಲುವುದು ನಮ್ಮ ಉದ್ದೇಶ ಎಂಬುದನ್ನು ದಯವಿಟ್ಟು ನೆನಪಿಡಿ. ಪೊಲೀಸರು ಕೂಡ ನಮ್ಮ ಭಾಗವಾಗಿದ್ದಾರೆ, ನಾವು ಯಾವುದೇ ಜಗಳಗಳಲ್ಲಿ ತೊಡಗಬಾರದು. ಎಲ್ಲಾ ಸುದ್ದಿ ಚಾನೆಲ್‌ಗಳ ಪ್ರತಿನಿಧಿಗಳನ್ನು ಗೌರವಿಸಬೇಕು.
  • ದಯವಿಟ್ಟು ಕಸವನ್ನು ರಸ್ತೆಗಳಲ್ಲಿ ಎಸೆಯುವ ಮೂಲಕ ಸುತ್ತಮುತ್ತಲಿನ ಪ್ರದೇಶಗಳನ್ನು ಕಲುಷಿತಗೊಳಿಸಬೇಡಿ. ತ್ಯಾಜ್ಯವನ್ನು ವಿಲೇವಾರಿ ಮಾಡಲು ಚೀಲವನ್ನು ಕೊಂಡೊಯ್ಯಬೇಕು ಎಂದು ನಮ್ರವಾಗಿ ಸೂಚಿಸುತ್ತೇವೆ.

ಇದನ್ನೂ ಓದಿ: ಬಲವಂತವಾಗಿ ರೈತ ಜಾಥಾ ತಡೆದ ಪೊಲೀಸರು: ರೈತ ಮುಖಂಡರ ಆಕ್ಷೇಪ

ತುರ್ತು ಪರಿಸ್ಥಿತಿಗಾಗಿ ಮಾರ್ಗಸೂಚಿಗಳು

ಕಿಸಾನ್ ಏಕ್ತಾ ಮೋರ್ಚಾ ಪ್ರತಿಯೊಂದು ರೀತಿಯ ತುರ್ತು ಪರಿಸ್ಥಿತಿಗಾಗಿ ನಿಬಂಧನೆಗಳನ್ನು ರೂಪಿಸಿದೆ. ಆದ್ದರಿಂದ ಯಾವುದೇ ಸಮಸ್ಯೆ ಇದ್ದರೆ ಭಯಪಡಬೇಡಿ, ಈ ಸೂಚನೆಗಳನ್ನು ಅನುಸರಿಸಿ:

  • ಯಾವುದೇ ವದಂತಿಗಳನ್ನು ನಿರ್ಲಕ್ಷಿಸಿ. ನೀವು ಏನನ್ನಾದರೂ ಸ್ಪಷ್ಟಪಡಿಸಲು ಬಯಸಿದರೆ, ಸತ್ಯವನ್ನು ಪರಿಶೀಲಿಸಲು ಕಿಸಾನ್ ಏಕ್ತಾ ಮೋರ್ಚಾದ ಫೇಸ್‌ಬುಕ್ ಪುಟವನ್ನು ನೋಡಿ.
  • ಮೆರವಣಿಗೆಯಲ್ಲಿ ಆಂಬ್ಯುಲೆನ್ಸ್‌ಗಳು ಸುತ್ತಮುತ್ತಲ ಪ್ರದೇಶಗಳಲ್ಲಿರುತ್ತವೆ. ಆಸ್ಪತ್ರೆಗಳ ವ್ಯವಸ್ಥೆ ಮಾಡಲಾಗಿದೆ. ವೈದ್ಯಕೀಯ ತುರ್ತುಸ್ಥಿತಿ ಇದ್ದರೆ, ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಅಥವಾ ಹತ್ತಿರದ ಸ್ವಯಂಸೇವಕರಿಗೆ ತಿಳಿಸಿ.
  • ಟ್ರಾಕ್ಟರ್ ಅಥವಾ ಕಾರಿನೊಂದಿಗೆ ಯಾವುದೇ ಸಮಸ್ಯೆ ಇದ್ದಲ್ಲಿ, ಅದನ್ನು ಬದಿಯಲ್ಲಿ ಇರಿಸಿ ಮತ್ತು ಸ್ವಯಂಸೇವಕರನ್ನು ಸಂಪರ್ಕಿಸಿ ಅಥವಾ ಸಹಾಯವಾಣಿಗೆ ಕರೆ ಮಾಡಿ.
  • ಈ ಮೆರವಣಿಗೆಗಾಗಿ ಸಂಯುಕ್ತ್ ಕಿಸಾನ್ ಮೋರ್ಚಾದ ಸಹಾಯವಾಣಿ ಸಂಖ್ಯೆ 24 ಗಂಟೆಗಳ ಕಾಲ ತೆರೆದಿರುತ್ತದೆ. ನೀವು ಯಾವುದೇ ಪ್ರಶ್ನೆಯನ್ನು ಹೊಂದಿದ್ದರೆ ಅಥವಾ ಏನನ್ನಾದರೂ ತಿಳಿಸಲು ಬಯಸಿದರೆ, ದಯವಿಟ್ಟು ತಕ್ಷಣ ಕರೆ ಮಾಡಿ.
  • ಯಾವುದೇ ದುರದೃಷ್ಟಕರ ಘಟನೆ ನಡೆದರೆ, ನೀವು ಅದನ್ನು 112 ನೇ ಸಂಖ್ಯೆಯಲ್ಲಿರುವ ಪೊಲೀಸ್ ನಿಯಂತ್ರಣ ಕೊಠಡಿಗೆ ವರದಿ ಮಾಡಬಹುದು.

ಸಹಾಯವಾಣಿ ಸಂಖ್ಯೆ 7428384230

ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ
ಟ್ರಾಕ್ಟರ್‌ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...