Homeಕರ್ನಾಟಕಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

- Advertisement -
- Advertisement -

ಜನವರಿ 26ರ ಗಣರಾಜ್ಯೋತ್ಸವದಂದು ದೇಶಾದ್ಯಂತ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ದೆಹಲಿ ಗಡಿಯಲ್ಲಿರುವ ಹೋರಾಟ ನಿರತ ರೈತರು ಕರೆಕೊಟ್ಟಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರ್ಯಾಲಿಗೆ ಭರ್ಜರಿ ಸಿದ್ದತೆ ನಡೆದಿದೆ. ಅದರೆ, ರೈತರ ಟ್ರಾಕ್ಟರ್‌ಗಳನ್ನು ಮಾರ್ಗ ಮಧ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ. ಏನೇ ಆಗಲೀ ನಾಳೆ ಬೆಂಗಳೂರಿಗೆ ಟ್ರಾಕ್ಟರ್‌ಗಳು ಬಂದೇ ಬರುತ್ತವೆ. ರ್ಯಾಲಿ ನಡೆದೇ ನಡೆಯುತ್ತದೆ ಎಂದು ಹೋರಾಟಗಾರ ನೂರ್‌ ಶ್ರೀಧರ್‌ ಹೇಳಿದ್ದಾರೆ.

ಪ್ರತಿಭಟನೆಯ ವಿಚಾರವಾಗಿ ಉನ್ನತ ಪೊಲೀಸ್‌ ಅಧಿಕಾರಿಗಳ ಜೊತೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಪ್ರತಿಭಟನೆಗೆ ಪೊಲೀಸರು ಒಪ್ಪಿದ್ದಾರೆ. ಸರ್ಕಾರಿ ಪರೇಡ್‌ ನಡೆದ ನಂತರ ರೈತರ ಪರೇಡ್‌ ನಡೆಯುತ್ತಿರುವುದರಿಂದಾಗಿ ತಮಗೆ ಯಾವುದೇ ಅಡಚಣೆಯಾಗುವುದಿಲ್ಲ. ರೈತರ ಪ್ರತಿಭಟನೆಗೆ ಹಳ್ಳಿಗಳಲ್ಲೂ-ಮಾರ್ಗ ಮಧ್ಯದಲ್ಲೂ- ಬೆಂಗಳೂರಿನಲ್ಲೂ ತೊಂದರೆ ಕೊಡುವುದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿರುವುದಾಗಿ ಹೇಳಿದ್ದಾರೆ.

ಆದರೆ, ಸರ್ಕಾರವೂ ಕೂಡ ಟ್ರಾಕ್ಟರ್‌ಗಳಿಗೆ ಅನುಮತಿ ನೀಡಬಾರದು ಎಂದು ಹೇಳಿದೆ. ಬೆಂಗಳೂರಿಗೆ ಟ್ರಾಕ್ಟರ್‌ಗಳನ್ನು ತರಲು ಅನುಮತಿ ಇಲ್ಲ. ಬೆಂಗಳೂರಿನಲ್ಲಿ ಟ್ರಾಕ್ಟರ್‌ ಸಂಚಾರವನ್ನು ಬ್ಯಾನ್‌ ಮಾಡಲಾಗಿದೆ. ಹಾಗಾಗಿ ಟ್ರಾಕ್ಟರ್‌ಗಳನ್ನು ತರಬಾರದು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಈ ವಾದದಲ್ಲಿ ಲಾಜಿಕಲ್‌ ಪಾಯಿಂಟ್‌ ಇಲ್ಲ. ಯಾಕೆಂದರೆ, ಟ್ರಾಕ್ಟರ್‌ಗಳನ್ನು ಸಾಮಾನ್ಯ ಸಂಚಾರ, ಸರಕು ಸಾಗಾಣಿಕೆಗೆ ನಗರದಲ್ಲಿ ಬಳಸಬಾರದು ಎಂಬುದನ್ನು ನಾವೂ ಒಪ್ಪುತ್ತೇವೆ. ಅದರೆ, ಟ್ರಾಕ್ಟರ್‌ಗಳು ರೈತ ಸಂಕೇತಗಳು. ವಿಶೇಷ ಉದ್ದೇಶಕ್ಕಾಗಿ ಟ್ರಾಕ್ಟರ್‌ಗಳನ್ನು ತರಲಾಗುತ್ತಿದೆ. ಹೋರಾಟಕ್ಕೆ ಟ್ರಾಕ್ಟರ್‌ ತರಬಾರದು ಎಂಬುದನ್ನು ಒಪ್ಪಲು ಸಾಧ್ಯವೇ ಇಲ್ಲ. ಆದರೂ, ನಾವು ಟ್ರಾಲಿಗಳನ್ನು ತರುತ್ತಿಲ್ಲ. ಎಂಜಿನ್‌ಗಳನ್ನು ಮಾತ್ರ ತರುತ್ತಿದ್ದು, ಇದನ್ನು ಪೊಲೀಸರು ತಡೆಯುವಂತಿಲ್ಲ ಎಂದು ನೂರ್‌ ಶ್ರೀಧರ್‌ ಹೇಳಿದ್ದಾರೆ.

ಅಲ್ಲದೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೇ ರೈತರ ಟ್ರಾಕ್ಟರ್‌ ಪರೇಡ್‌ಗೆ ದೆಲ್ಲಿ ಪೊಲೀಸರು ಅವಕಾಶ ಕೊಟ್ಟಿದ್ದಾರೆ. ಅದಕ್ಕಾಗಿ ಪೊಲೀಸರೇ ರೂಟ್‌ ಮ್ಯಾಪ್ ಕೂಡ‌ ಹಾಕಿಕೊಟ್ಟಿದ್ದಾರೆ. ಕೇಂದ್ರ ಸರ್ಕಾರವೇ ಒಪ್ಪಿದೆ. ಹೀಗಿರುವಾಗ ರಾಜ್ಯದಲ್ಲಿ ಅನುಮತಿ ಇಲ್ಲ ಎನ್ನುವುದನ್ನು ನಾವು ಒಪ್ಪುವುದಿಲ್ಲ. ನಾಳೆ ಟ್ರಾಕ್ಟರ್‌ಗಳು ಬಂದೇ ಬರುತ್ತವೆ. ಪರೇಡ್‌ ನಡೆದೇ ನಡೆಯುತ್ತೆ. ಮುಂದಿನದು ಪೊಲೀಸರಿಗೆ ಬಿಟ್ಟಿದ್ದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...