Homeಕರ್ನಾಟಕಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

ಟ್ರ್ಯಾಕ್ಟರ್‌ ರ್ಯಾಲಿ ನಡೆದೇ ನಡೆಯುತ್ತದೆ; ಮುಂದಿನದು ಪೊಲೀಸರಿಗೆ ಬಿಟ್ಟಿದ್ದು: ನೂರ್‌ ಶ್ರೀಧರ್

- Advertisement -
- Advertisement -

ಜನವರಿ 26ರ ಗಣರಾಜ್ಯೋತ್ಸವದಂದು ದೇಶಾದ್ಯಂತ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ದೆಹಲಿ ಗಡಿಯಲ್ಲಿರುವ ಹೋರಾಟ ನಿರತ ರೈತರು ಕರೆಕೊಟ್ಟಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರ್ಯಾಲಿಗೆ ಭರ್ಜರಿ ಸಿದ್ದತೆ ನಡೆದಿದೆ. ಅದರೆ, ರೈತರ ಟ್ರಾಕ್ಟರ್‌ಗಳನ್ನು ಮಾರ್ಗ ಮಧ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ. ಏನೇ ಆಗಲೀ ನಾಳೆ ಬೆಂಗಳೂರಿಗೆ ಟ್ರಾಕ್ಟರ್‌ಗಳು ಬಂದೇ ಬರುತ್ತವೆ. ರ್ಯಾಲಿ ನಡೆದೇ ನಡೆಯುತ್ತದೆ ಎಂದು ಹೋರಾಟಗಾರ ನೂರ್‌ ಶ್ರೀಧರ್‌ ಹೇಳಿದ್ದಾರೆ.

ಪ್ರತಿಭಟನೆಯ ವಿಚಾರವಾಗಿ ಉನ್ನತ ಪೊಲೀಸ್‌ ಅಧಿಕಾರಿಗಳ ಜೊತೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಪ್ರತಿಭಟನೆಗೆ ಪೊಲೀಸರು ಒಪ್ಪಿದ್ದಾರೆ. ಸರ್ಕಾರಿ ಪರೇಡ್‌ ನಡೆದ ನಂತರ ರೈತರ ಪರೇಡ್‌ ನಡೆಯುತ್ತಿರುವುದರಿಂದಾಗಿ ತಮಗೆ ಯಾವುದೇ ಅಡಚಣೆಯಾಗುವುದಿಲ್ಲ. ರೈತರ ಪ್ರತಿಭಟನೆಗೆ ಹಳ್ಳಿಗಳಲ್ಲೂ-ಮಾರ್ಗ ಮಧ್ಯದಲ್ಲೂ- ಬೆಂಗಳೂರಿನಲ್ಲೂ ತೊಂದರೆ ಕೊಡುವುದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿರುವುದಾಗಿ ಹೇಳಿದ್ದಾರೆ.

ಆದರೆ, ಸರ್ಕಾರವೂ ಕೂಡ ಟ್ರಾಕ್ಟರ್‌ಗಳಿಗೆ ಅನುಮತಿ ನೀಡಬಾರದು ಎಂದು ಹೇಳಿದೆ. ಬೆಂಗಳೂರಿಗೆ ಟ್ರಾಕ್ಟರ್‌ಗಳನ್ನು ತರಲು ಅನುಮತಿ ಇಲ್ಲ. ಬೆಂಗಳೂರಿನಲ್ಲಿ ಟ್ರಾಕ್ಟರ್‌ ಸಂಚಾರವನ್ನು ಬ್ಯಾನ್‌ ಮಾಡಲಾಗಿದೆ. ಹಾಗಾಗಿ ಟ್ರಾಕ್ಟರ್‌ಗಳನ್ನು ತರಬಾರದು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ಈ ವಾದದಲ್ಲಿ ಲಾಜಿಕಲ್‌ ಪಾಯಿಂಟ್‌ ಇಲ್ಲ. ಯಾಕೆಂದರೆ, ಟ್ರಾಕ್ಟರ್‌ಗಳನ್ನು ಸಾಮಾನ್ಯ ಸಂಚಾರ, ಸರಕು ಸಾಗಾಣಿಕೆಗೆ ನಗರದಲ್ಲಿ ಬಳಸಬಾರದು ಎಂಬುದನ್ನು ನಾವೂ ಒಪ್ಪುತ್ತೇವೆ. ಅದರೆ, ಟ್ರಾಕ್ಟರ್‌ಗಳು ರೈತ ಸಂಕೇತಗಳು. ವಿಶೇಷ ಉದ್ದೇಶಕ್ಕಾಗಿ ಟ್ರಾಕ್ಟರ್‌ಗಳನ್ನು ತರಲಾಗುತ್ತಿದೆ. ಹೋರಾಟಕ್ಕೆ ಟ್ರಾಕ್ಟರ್‌ ತರಬಾರದು ಎಂಬುದನ್ನು ಒಪ್ಪಲು ಸಾಧ್ಯವೇ ಇಲ್ಲ. ಆದರೂ, ನಾವು ಟ್ರಾಲಿಗಳನ್ನು ತರುತ್ತಿಲ್ಲ. ಎಂಜಿನ್‌ಗಳನ್ನು ಮಾತ್ರ ತರುತ್ತಿದ್ದು, ಇದನ್ನು ಪೊಲೀಸರು ತಡೆಯುವಂತಿಲ್ಲ ಎಂದು ನೂರ್‌ ಶ್ರೀಧರ್‌ ಹೇಳಿದ್ದಾರೆ.

ಅಲ್ಲದೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೇ ರೈತರ ಟ್ರಾಕ್ಟರ್‌ ಪರೇಡ್‌ಗೆ ದೆಲ್ಲಿ ಪೊಲೀಸರು ಅವಕಾಶ ಕೊಟ್ಟಿದ್ದಾರೆ. ಅದಕ್ಕಾಗಿ ಪೊಲೀಸರೇ ರೂಟ್‌ ಮ್ಯಾಪ್ ಕೂಡ‌ ಹಾಕಿಕೊಟ್ಟಿದ್ದಾರೆ. ಕೇಂದ್ರ ಸರ್ಕಾರವೇ ಒಪ್ಪಿದೆ. ಹೀಗಿರುವಾಗ ರಾಜ್ಯದಲ್ಲಿ ಅನುಮತಿ ಇಲ್ಲ ಎನ್ನುವುದನ್ನು ನಾವು ಒಪ್ಪುವುದಿಲ್ಲ. ನಾಳೆ ಟ್ರಾಕ್ಟರ್‌ಗಳು ಬಂದೇ ಬರುತ್ತವೆ. ಪರೇಡ್‌ ನಡೆದೇ ನಡೆಯುತ್ತೆ. ಮುಂದಿನದು ಪೊಲೀಸರಿಗೆ ಬಿಟ್ಟಿದ್ದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...