Homeಮುಖಪುಟಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನಾವು ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸುತ್ತೇವೆ. ನಾವು ನಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುತ್ತೇವೆ. ಜೊತೆಗೆ ನಾವು ಖಂಡಿತವಾಗಿಯೂ ದೆಹಲಿಗೆ ಪ್ರವೇಶಿಸಲಿದ್ದೇವೆ- ರೈತ ಮುಖಂಡರು

- Advertisement -
- Advertisement -

“ರೈತರ ಹೋರಾಟದ ಭಾಗವಾಗಿ ಗಣರಾಜ್ಯೋತ್ಸವ ದಿನದಂದು ನಡೆಯಲಿರುವ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸುವುದು ನಮ್ಮ ಸಾಂವಿಧಾನಿಕ ಹಕ್ಕು” ಎಂದು ರೈತ ನಾಯಕರು ಹೇಳಿದ್ದು, ಜನವರಿ 26 ರಂದು ನಡೆಯುವ ಈ ಬೃಹತ್ ರ್‍ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರ್‍ಯಾಲಿ ನಡೆಸಬಹುದೇ ಬೇಡವೇ? ಎಂಬುದನ್ನು ದೆಹಲಿ ಪೊಲೀಸರೇ ನಿರ್ಧರಿಸಲಿ ಎಂದು ಸೋಮವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ರೈತರ ಹೇಳಿಕೆ ಸುಪ್ರೀಂ ಕೋರ್ಟ್‌ಗೆ ನೀಡಿದ ಉತ್ತರದಂತಿದೆ.

ಭಾರತೀಯ ಕಿಸಾನ್ ಯೂನಿಯನ್‌ನ (ಲಖೋವಾಲ್) ಪಂಜಾಬ್ ಪ್ರಧಾನ ಕಾರ್ಯದರ್ಶಿ ಪರಮಜಿತ್ ಸಿಂಗ್ ಮಾತನಾಡಿ, “ನಾವು ರ್‍ಯಾಲಿಯನ್ನು ರಾಜ್‌ಪತ್ ಅಥವಾ ಇನ್ನಿತರ ಭದ್ರತಾ ಸೂಕ್ಷ್ಮ ಪ್ರದೇಶಗಳಲ್ಲಿ ನಡೆಸುವುದಿಲ್ಲ. ದೆಹಲಿಯ ಹೊರ ವರ್ತುಲ (Outer RingRoad) ರಸ್ತೆಯಲ್ಲಿ ಮಾತ್ರ ಈ ರ್‍ಯಾಲಿಯನ್ನು ನಡೆಸುತ್ತೇವೆ. ಜೊತೆಗೆ ಗಣರಾಜ್ಯೋತ್ಸವದ ಮೆರವಣಿಗೆಗೆ ಯಾವುದೇ ಅಡ್ಡಿಪಡಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

“ನಾವು ದೆಹಲಿ ಗಡಿಯಲ್ಲಿ ಸಿಕ್ಕಿಕೊಂಡಿದ್ದೇವೆ. ಇಲ್ಲಿ ಕುಳಿತುಕೊಳ್ಳಲು ನಾವು ನಿರ್ಧರಿಸಿಲ್ಲ. ಬದಲಿಗೆ ನಾವು ದೆಹಲಿಗೆ ಪ್ರವೇಶಿಸುವುದನ್ನು ತಡೆಯಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನಾವು ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸುತ್ತೇವೆ. ನಾವು ನಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುತ್ತೇವೆ. ಜೊತೆಗೆ ನಾವು ಖಂಡಿತವಾಗಿಯೂ ದೆಹಲಿಗೆ ಪ್ರವೇಶಿಸಲಿದ್ದೇವೆ” ಎಂದು ಪರಮಜಿತ್ ಸಿಂಗ್ ತಿಳಿಸಿದ್ದಾರೆ.

ಸ್ವರಾಜ್ ಇಂಡಿಯಾದ ಮುಖಂಡ ಯೋಗೇಂದ್ರ ಯಾದವ್ ಮಾತನಾಡಿ, “ಗಣರಾಜ್ಯೋತ್ಸವದಂದ ನಡೆಯಲಿರುವ ಶಾಂತಿಯುತ ರ್‍ಯಾಲಿಯಲ್ಲಿ ಪ್ರತಿಯೊಂದು ಟ್ರ್ಯಾಕ್ಟರ್‌ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ಇನ್ನು ಪ್ರತಿಭಟನೆ ಮಾಡುತ್ತಿರುವ ಎಲ್ಲಾ ರೈತ ಸಂಘಟನೆಗಳೂ ಸಹ ಇದೇ ಹೇಳಿಕೆಯನ್ನು ನೀಡುತ್ತಿದ್ದು, ರ್‍ಯಾಲಿ ಮಾಡುವುದು ನಮ್ಮ ಸಾಂವಿಧಾನಿಕ ಹಕ್ಕು ಎಂದು ಹೇಳುತ್ತಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ ನಡುವೆ 9 ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿವೆ. ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೆಕು ಎಂದು ರೈತರು ಒತ್ತಾಯಿಸುತ್ತಿದ್ದರೆ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿಲ್ಲ.

ಹಾಗಾಗಿ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಲೇ ಇದ್ದಾರೆ. ಇದರ ಭಾಗವಾಗಿಯೇ ಈ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...