Homeಚಳವಳಿಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ...

ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

ರೈತರು ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಜನವರಿ 26 ರ ಗಣರಾಜ್ಯೋತ್ಸವ ದಿನದಂದು ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದರು. ಇದರ ಟ್ರೈಲರ್ ಅನ್ನು ಈ ಹಿಂದೆಯೇ ತೋರಿಸಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿರುವ ರೈತರು, ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ತೀರ್ಮಾನಿಸಿದ್ದಾರೆ. ರೈತರ ಈ ನಿರ್ಧಾರಕ್ಕೆ ಬೆದರಿದ ಕೇಂದ್ರ ಸರ್ಕಾರ, ಈ ರ್‍ಯಾಲಿಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದೆ.

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಇವುಗಳನ್ನು ರದ್ದುಪಡಿಸಬೇಕೆಂಬ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಜನವರಿ 26 ರ ಗಣರಾಜ್ಯೋತ್ಸವ ದಿನದಂದು ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸುವುದಾಗಿ ಘೋಷಿಸಿದ್ದರು. ಇದರ ಟ್ರೈಲರ್ ಅನ್ನು ಈ ಹಿಂದೆಯೇ ತೋರಿಸಿದ್ದರು.

ಇದನ್ನೂ ಓದಿ: ಕೃಷಿ ಕಾಯ್ದೆಗಳನ್ನು ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ಹರಿಯಾಣದ ರೈತರು ಕೂಡಾ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಭಾಗವಹಿಸಲು ನಿರ್ಧರಿಸಿದ್ದು, ಪ್ರತಿ ಗ್ರಾಮದಿಂದ ಒಂದು ಟ್ರ್ಯಾಕ್ಟರ್ ಈ ರ್‍ಯಾಲಿಯಲ್ಲಿ ಭಾಗವಹಿಸಲಿದೆ. ಸುಮಾರು 20 ಸಾವಿರ ಟ್ರ್ಯಾಕ್ಟರ್‌ಗಳು ರ್‍ಯಾಲಿಯಲ್ಲಿ ಭಾಗವಹಿಸಲಿವೆ ಎಂದು ರೈತರು ಆಂದಾಜಿಸಿದ್ದಾರೆ.

ಸರ್ಕಾರದ ಪರ ವಕೀಲ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, “ಗಣರಾಜ್ಯೋತ್ಸವ ದಿನದ ಸಾಂವಿಧಾನಿಕ ಮತ್ತು ಐತಿಹಾಸಿಕ ಮಹತ್ವದ ಹಿನ್ನೆಲೆಯಲ್ಲಿ ಈ ರ್‍ಯಾಲಿಗೆ ತಡೆಯೊಡ್ಡುವ ಈ ಕ್ರಮ ಕೈಗೊಳ್ಳಬೇಕು” ಎಂದು ಕೋರಿದ್ದಾರೆ.

ಇದನ್ನೂ ಓದಿ: ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಜನವರಿ 23 ರಂದು ನಡೆಯುವ ತಾಲೀಮು, ಜನವರಿ 28 ರಂದು ನಡೆಯುವ ಎನ್‌ಸಿಸಿ ರ್‍ಯಾಲಿ, 29 ರಂದು ನಡೆಯುವ ಬೀಟಿಂಗ್ ದ ರಿಟ್ರೀಟ್ ಹಾಗೂ ಜನವರಿ 30ರಂದು ನಡೆಯುವ ಹುತಾತ್ಮರ ದಿನದ ಸಮಾರಂಭಗಳನ್ನು ಸರ್ಕಾರ ಅಫಿಡವಿಟ್ಟಿನಲ್ಲಿ ಉಲ್ಲೇಖಿಸಿದ್ದು, “ಇವುಗಳಿಗೆ ಯಾವುದೇ ತಡೆ ಉಂಟಾದಲ್ಲಿ ಅದು ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯಾಗುವುದು ಮಾತ್ರವಲ್ಲದೇ, ಇದು ದೇಶಕ್ಕೆ ದೊಡ್ಡ ಮುಜುಗರವಾಗಲಿದೆ” ಎಂದು ಹೇಳಿದೆ.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರ ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಸುಪ್ರೀಂ, ಪ್ರತಿಭಟನೆ ಮೂಲಭೂತ ಹಕ್ಕು, ಕೋರ್ಟ್ ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿತ್ತು. ಜೊತೆಗೆ, ಸಧ್ಯಕ್ಕೆ ಈ ಕಾಯ್ದೆಗಳನ್ನು ಅಮಾನತ್ತಿನಲ್ಲಿಡುವಂತೆ ಕೇಂದ್ರಕ್ಕೆ ಸೂಚನೆ ನೀಡಿತ್ತು.


ಇದನ್ನೂ ಓದಿ: ಪಿಎಂ ಕಿಸಾನ್ ಸನ್ಮಾನ್ ಯೋಜನೆ: 20.48 ಲಕ್ಷ ಅನರ್ಹ ಫಲನುಭವಿಗಳಿಗೆ 1,364 ಕೋಟಿ ಪಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...