Homeಚಳವಳಿಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ರೈತರು ದೆಹಲಿಯ ಪ್ರಮುಖ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26 ಗಣರಾಜ್ಯೋತ್ಸವದಂದು ಟ್ರಾಕ್ಟರ್‌ ರ್‍ಯಾಲಿ ನಡೆಸಲು ಉದ್ದೇಶಿಸಿರುವ ರೈತರು, ಅದನ್ನು ಶಾಂತಿಯುತವಾಗಿಯೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

“ರೈತರು ಗಣರಾಜ್ಯೋತ್ಸವವನ್ನು ಭಾರಿ ಸಂಭ್ರನದಿಂದ ಆಚರಿಸಲಿದ್ದಾರೆ. ಟ್ರ್ಯಾಕ್ಟರ್ ಪೆರೇಡ್ ಔಟರ್ ರಿಂಗ್ ರಸ್ತೆಯ ವೃತ್ತದಲ್ಲಿ ಚಲಿಸಲಿದ್ದು, ಇದು ಜನಕ್ಪುರಿ, ಮುನೀರ್ಕಾ, ನೆಹರು ಪ್ಲೇಸ್, ಟಿಕ್ರಿ ಮುಂತಾದ ಪ್ರದೇಶಗಳ ಸುತ್ತಲೂ ಹೋಗುತ್ತದೆ. ದೆಹಲಿ ಮತ್ತು ಹರಿಯಾಣ ಪೊಲೀಸರು ನಮಗೆ ಯಾವುದೇ ತೊಂದರೆ ಅಥವಾ ನಿರ್ಬಂಧಗಳನ್ನು ಉಂಟುಮಾಡುವುದಿಲ್ಲ ಎಂದು ನಾವು ಭಾವಿಸುತ್ತೇವೆ. ನಮ್ಮ ಅತಿದೊಡ್ಡ ಅಸ್ತ್ರ ಅಹಿಂಸೆ ಯಾಕೆಂದರೆ ಇದು ಬಹಳ ಶಾಂತಿಯುತ ಪ್ರತಿಭಟನೆಯಾಗಿದೆ” ಎಂದು ಸಂಯುಕ್ತ್‌ ಕಿಸಾನ್ ಮೋರ್ಚಾದ ನಾಯಕ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ಪ್ರತಿಭಟನಾಕಾರರು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವುದಿಲ್ಲ, ಧ್ವೇಷ ಭಾಷಣಗಳಲ್ಲಿ ಅಥವಾ ಹಿಂಸಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ. ರ್‍ಯಾಲಿಯ ಸಮಯದಲ್ಲಿ ಯಾವುದೇ ಸರ್ಕಾರಿ ಕಟ್ಟಡ ಹಾಗೂ ಪ್ರದೇಶವನ್ನು ವಶಪಡಿಸುವುದಾಗಲಿ, ದಾಳಿ ಮಾಡುವುದಾಗಲಿ ಮಾಡುವುದಿಲ್ಲ. ರ್‍ಯಾಲಿಯು ದೆಹಲಿ ಒಂದು ಗಡಿಯಿಂದ ಪ್ರಾರಂಭವಾಗಿ ಅದೇ ಗಡಿಗಳಿಗೆ ಬಂದು ತಲುಪುತ್ತದೆ ಎಂದು ಅವರು ಹೇಳಿದ್ದಾರೆ.

“ರಾಜ್‌ಪತ್‌ನಲ್ಲಿ ನಡೆಯುವ ರಿಪಬ್ಲಿಕ್-ಡೇ ಮೆರವಣಿಗೆಗೆ ಯಾವುದೇ ಅಡಚಣೆ ಉಂಟಾಗುವುದಿಲ್ಲ. ಅವು ರಾಷ್ಟ್ರೀಯ ಗೌರವದ ಸಂಕೇತಗಳಾಗಿವೆ. ಅವುಗಳಿಗೆ ನಾವು ಹಾನಿ ಮಾಡುವುದಿಲ್ಲ. ನಮ್ಮ ರ್‍ಯಾಲಿಯಲ್ಲಿ ಪ್ರತಿಯೊಂದು ವಾಹನವು ರಾಷ್ಟ್ರಧ್ವಜವನ್ನು ಹೊಂದಿರುತ್ತದೆಯೆ ಹೊರತು ಯಾವುದೇ ರಾಜಕೀಯ ಪಕ್ಷದ ಧ್ವಜಗಳನ್ನು ಇರುವುದಿಲ್ಲ” ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ.

ತಮ್ಮ ಮುಂದಿನ ನಡೆಯನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಆದೇಶದ ನಂತರ ರೈತರು ಸೋಮವಾರ ಸಭೆ ನಡೆಸಲಿದ್ದಾರೆ. ಜನವರಿ 19 ರಂದು ಸರ್ಕಾರದೊಂದಿಗೆ ಹತ್ತನೇ ಸುತ್ತಿನ ಮಾತುಕತೆಯಲ್ಲಿ ಭಾಗವಹಿಸಲು ರೈತ ಒಕ್ಕೂಟಗಳು ಸಿದ್ಧರಿದ್ದು, ಅಲ್ಲಿ ಅವರು ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...