Homeಚಳವಳಿಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ರೈತರು ದೆಹಲಿಯ ಪ್ರಮುಖ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26 ಗಣರಾಜ್ಯೋತ್ಸವದಂದು ಟ್ರಾಕ್ಟರ್‌ ರ್‍ಯಾಲಿ ನಡೆಸಲು ಉದ್ದೇಶಿಸಿರುವ ರೈತರು, ಅದನ್ನು ಶಾಂತಿಯುತವಾಗಿಯೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

“ರೈತರು ಗಣರಾಜ್ಯೋತ್ಸವವನ್ನು ಭಾರಿ ಸಂಭ್ರನದಿಂದ ಆಚರಿಸಲಿದ್ದಾರೆ. ಟ್ರ್ಯಾಕ್ಟರ್ ಪೆರೇಡ್ ಔಟರ್ ರಿಂಗ್ ರಸ್ತೆಯ ವೃತ್ತದಲ್ಲಿ ಚಲಿಸಲಿದ್ದು, ಇದು ಜನಕ್ಪುರಿ, ಮುನೀರ್ಕಾ, ನೆಹರು ಪ್ಲೇಸ್, ಟಿಕ್ರಿ ಮುಂತಾದ ಪ್ರದೇಶಗಳ ಸುತ್ತಲೂ ಹೋಗುತ್ತದೆ. ದೆಹಲಿ ಮತ್ತು ಹರಿಯಾಣ ಪೊಲೀಸರು ನಮಗೆ ಯಾವುದೇ ತೊಂದರೆ ಅಥವಾ ನಿರ್ಬಂಧಗಳನ್ನು ಉಂಟುಮಾಡುವುದಿಲ್ಲ ಎಂದು ನಾವು ಭಾವಿಸುತ್ತೇವೆ. ನಮ್ಮ ಅತಿದೊಡ್ಡ ಅಸ್ತ್ರ ಅಹಿಂಸೆ ಯಾಕೆಂದರೆ ಇದು ಬಹಳ ಶಾಂತಿಯುತ ಪ್ರತಿಭಟನೆಯಾಗಿದೆ” ಎಂದು ಸಂಯುಕ್ತ್‌ ಕಿಸಾನ್ ಮೋರ್ಚಾದ ನಾಯಕ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ಪ್ರತಿಭಟನಾಕಾರರು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವುದಿಲ್ಲ, ಧ್ವೇಷ ಭಾಷಣಗಳಲ್ಲಿ ಅಥವಾ ಹಿಂಸಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ. ರ್‍ಯಾಲಿಯ ಸಮಯದಲ್ಲಿ ಯಾವುದೇ ಸರ್ಕಾರಿ ಕಟ್ಟಡ ಹಾಗೂ ಪ್ರದೇಶವನ್ನು ವಶಪಡಿಸುವುದಾಗಲಿ, ದಾಳಿ ಮಾಡುವುದಾಗಲಿ ಮಾಡುವುದಿಲ್ಲ. ರ್‍ಯಾಲಿಯು ದೆಹಲಿ ಒಂದು ಗಡಿಯಿಂದ ಪ್ರಾರಂಭವಾಗಿ ಅದೇ ಗಡಿಗಳಿಗೆ ಬಂದು ತಲುಪುತ್ತದೆ ಎಂದು ಅವರು ಹೇಳಿದ್ದಾರೆ.

“ರಾಜ್‌ಪತ್‌ನಲ್ಲಿ ನಡೆಯುವ ರಿಪಬ್ಲಿಕ್-ಡೇ ಮೆರವಣಿಗೆಗೆ ಯಾವುದೇ ಅಡಚಣೆ ಉಂಟಾಗುವುದಿಲ್ಲ. ಅವು ರಾಷ್ಟ್ರೀಯ ಗೌರವದ ಸಂಕೇತಗಳಾಗಿವೆ. ಅವುಗಳಿಗೆ ನಾವು ಹಾನಿ ಮಾಡುವುದಿಲ್ಲ. ನಮ್ಮ ರ್‍ಯಾಲಿಯಲ್ಲಿ ಪ್ರತಿಯೊಂದು ವಾಹನವು ರಾಷ್ಟ್ರಧ್ವಜವನ್ನು ಹೊಂದಿರುತ್ತದೆಯೆ ಹೊರತು ಯಾವುದೇ ರಾಜಕೀಯ ಪಕ್ಷದ ಧ್ವಜಗಳನ್ನು ಇರುವುದಿಲ್ಲ” ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ.

ತಮ್ಮ ಮುಂದಿನ ನಡೆಯನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಆದೇಶದ ನಂತರ ರೈತರು ಸೋಮವಾರ ಸಭೆ ನಡೆಸಲಿದ್ದಾರೆ. ಜನವರಿ 19 ರಂದು ಸರ್ಕಾರದೊಂದಿಗೆ ಹತ್ತನೇ ಸುತ್ತಿನ ಮಾತುಕತೆಯಲ್ಲಿ ಭಾಗವಹಿಸಲು ರೈತ ಒಕ್ಕೂಟಗಳು ಸಿದ್ಧರಿದ್ದು, ಅಲ್ಲಿ ಅವರು ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...