ಜನವರಿ 26 ರಂದು ನಡೆಯಲಿರುವ ರೈತರ ಟ್ರ್ಯಾಕ್ಟರ್ ರ್ಯಾಲಿಯ ಪ್ರಯುಕ್ತ ಜನವರಿ 7 ರಂದು ಅದರ ಟ್ರೈಲರ್ ಅನ್ನು ಹಮ್ಮಿಕೊಂಡಿರುವುದಾಗಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಹೇಳಿದ್ದಾರೆ.
ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು ಎಂದು ರೈತ ಮುಖಂಡ ದರ್ಶನ್ ಪಾಲ್ ಹೇಳಿದ್ದರು.
“ಜನವರಿ 7 ರಂದು ನಾವು ಪೂರ್ವ ಮತ್ತು ಪಶ್ಚಿಮ ದೆಹಲಿಯ ನಾಲ್ಕು ಗಡಿಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ನಿರ್ಧರಿಸಿದ್ದೇವೆ. ಜನವರಿ 26 ರಂದು ನಡೆಯಲಿರುವ ಟ್ರ್ಯಾಕ್ಟರ್ ರ್ಯಾಲಿಯ ಟ್ರೈಲರ್ ಇದು” ಎಂದು ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಹೇಳಿದ್ದಾಗಿ ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ: ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’
We have decided that on January 7, we will take out tractor march at four borders of Delhi including Eastern and Western peripheral. This will be a trailer for what lies ahead on January 26: Yogendra Yadav, Swaraj India pic.twitter.com/qvFVDyDeOg
— ANI (@ANI) January 5, 2021
ಇದನ್ನೂ ಓದಿ: ಹೋರಾಟ ತೀವ್ರಗೊಳಿಸಲು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್ಯಾಲಿ: ರೈತರ ಘೋಷಣೆ
ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದು, ಈಗ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಸಲುವಾಗಿ ಈ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
ಇದುವರೆಗೂ ಕೇಂದ್ರ ಮತ್ತು ರೈತರ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲಾ ವಿಫಲವಾಗಿವೆ. ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆದಿತ್ತು. ಆದರೆ ಇಲ್ಲಿಯೂ ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಹಾಗಾಗಿ ಜನವರಿ 8 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಇಲ್ಲಿಯೂ ಒಪ್ಪದಿದ್ದರೆ ದೇಶದಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ತಾಜ್ ಮಹಲ್ ಆವರಣದಲ್ಲಿ ಕೇಸರಿ ಬಾವುಟ ಹಾರಿಸಿದ ಹಿಂದೂ ಜಾಗರಣ್ ಮಂಚ್ ಕಾರ್ಯಕರ್ತರು: ಬಂಧನ