Homeಮುಖಪುಟಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

ಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

- Advertisement -
- Advertisement -

ಮೂರು ಶೇಕಡಾ ವಿಚ್ಛೇದನ ಮುಂಬೈ ನಗರದ ಟ್ರಾಫಿಕ್‌ನಿಂದಾಗಿಯೆ ನಡೆಯುತ್ತದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಶನಿವಾರ ಹೇಳಿದ್ದಾರೆ. ರಾಜ್ಯದ ರಾಜಧಾನಿಯಲ್ಲಿನ ರಸ್ತೆಗಳ ಸ್ಥಿತಿ ಮತ್ತು ಟ್ರಾಫಿಕ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಚಿತ್ರವಾದ ಹೇಳಿಕೆಯನ್ನು ನೀಡಿದ್ದಾರೆ.

ಅಮೃತಾ ಅವರ ಹೇಳಿಕೆಯನ್ನು ಪರೋಕ್ಷವಾಗಿ ಟೀಕಿಸಿರುವ ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ, “ಇದು ದಿನದ ಅತ್ಯುತ್ತಮ ತರ್ಕ” ಎಂದು ವ್ಯಂಗ್ಯವಾಡಿದ್ದಾರೆ. ಅಮೃತಾ ಅವರ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳು ಪ್ರಾರಂಭವಾಗಿದೆ.

ಇದನ್ನೂ ಓದಿ: ನಮ್ಮನ್ನು ಮೊದಲು ಸಂಪರ್ಕಿಸಿದ್ದು ಅಜಿತ್‌ ಪವಾರ್‌, ಅವರೇಳಿದ ಅರ್ಧ ಸತ್ಯವನ್ನು ನಂಬಿದ್ದೆವು: ಫಡ್ನವಿಸ್‌

“ಮುಂಬೈನಲ್ಲಿ ಮೂರು ಪ್ರತಿಶತದಷ್ಟು ವಿಚ್ಛೇದನಗಳು ಟ್ರಾಫಿಕ್ ಜಾಮ್‌ನಿಂದ ಉಂಟಾಗುತ್ತವೆ ಎಂದು ನಿಮಗೆ ತಿಳಿದಿದೆಯೇ?. ಯಾಕೆಂದರೆ ಜನರು ತಮ್ಮ ಕುಟುಂಬದೊಂದಿಗೆ ಸಮಯವನ್ನು ವಿನಿಯೋಗಿಸಲು ಸಾಧ್ಯವಾಗುತ್ತಿಲ್ಲ” ಎಂದು ಅಮೃತಾ ಫಡ್ನವಿಸ್‌ ಹೇಳಿದ್ದಾರೆ.

ರಸ್ತೆಗಳಲ್ಲಿನ ಗುಂಡಿಗಳಿಂದ ಮತ್ತು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿರುವುದರಿಂದ ವೈಯಕ್ತಿಕವಾಗಿ ತೊಂದರೆಗೊಳಗಾಗಿದ್ದೇನೆ ಎಂದು ಫಡ್ನವಿಸ್ ಹೇಳಿದ್ದಾರೆ.

“ನಾನು ದೇವೇಂದ್ರ ಫಡ್ನವೀಸ್ ಅವರ ಪತ್ನಿ ಎಂಬುದನ್ನು ಮರೆತುಬಿಡಿ. ನಾನು ಮಹಿಳೆಯಾಗಿ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ರಸ್ತೆಗಳ ಹೊಂಡಗಳು ಮತ್ತು ಟ್ರಾಫಿಕ್ ನಮಗೆ ಎಷ್ಟೊಂದು ತೊಂದರೆ ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 40,000 ಕೋಟಿ ರೂ ಉಳಿಸಲು ಫಡ್ನವಿಸ್‌ ಸಿಎಂ ಆದರು ಎಂದ ಅನಂತ್‌ ಕುಮಾರ್ ಹೆಗಡೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ಮಾಜಿ ಮುಖ್ಯಮಂತ್ರಿ ಅವರ ಪತ್ನಿಯ ಹೆಸರನ್ನು ಬಳಸದೆ ಲೇವಡಿ ಮಾಡಿದ್ದಾರೆ. ಇವರ ಪ್ರತಿಪಾದನೆಯನ್ನು ಬೆಂಗಳೂರಿನ ಕುಟುಂಬಗಳು ಓದಬೇಡಿ ಎಂದು ಅವರು ಹೇಳಿದ್ದಾರೆ.

‘“ಈ ದಿನದ ಅತ್ಯುತ್ತಮ ‘ಇಲ್ಲಾಜಿಕ್’ ಪ್ರಶಸ್ತಿಯು 3% ಮುಂಬೈ ಜನತೆ ರಸ್ತೆಗಳಲ್ಲಿನ ಟ್ರಾಫಿಕ್‌ನಿಂದಾಗಿ ವಿಚ್ಛೇದನ ಪಡೆಯುತ್ತಿದ್ದಾರೆ ಎಂದು ಹೇಳುವ ಮಹಿಳೆಗೆ ಸಲ್ಲುತ್ತದೆ. ದಯವಿಟ್ಟು ಮನಸ್ಸಿಗೆ ತೊಂದರೆ ತೆಗೆದುಕೊಳ್ಳುವುದಕ್ಕಿಂತ ರಜೆಯ ವಿರಾಮ ತೆಗೆದುಕೊಳ್ಳಿ. ದಯವಿಟ್ಟು ಇವರ ಪ್ರತಿಪಾದನೆಯನ್ನು ಬೆಂಗಳೂರಿನ ಕುಟುಂಬಗಳು ಓಡಬೇಡಿ, ಇದು ನಿಮ್ಮ ಮದುವೆಗೆ ಮಾರಕವಾಗಬಹುದು” ಎಂದು ಪ್ರಿಕಾಂ ಚತುರ್ವೇದಿ ಅವರು ನಗುವ ಎಮೋಜಿಯೊಂದಿಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...