Homeಕರ್ನಾಟಕಬಳ್ಳಾರಿ ರಸ್ತೆಯಲ್ಲಿ ಅವ್ಯವಸ್ಥೆ; 'ಮಾಲ್ ಆಫ್ ಏಷ್ಯಾ'ಗೆ 15 ದಿನ ಬೀಗ!

ಬಳ್ಳಾರಿ ರಸ್ತೆಯಲ್ಲಿ ಅವ್ಯವಸ್ಥೆ; ‘ಮಾಲ್ ಆಫ್ ಏಷ್ಯಾ’ಗೆ 15 ದಿನ ಬೀಗ!

- Advertisement -
- Advertisement -

ಏಷ್ಯಾದಲ್ಲೇ ಅತಿ ದೊಡ್ಡ ಶಾಪಿಂಗ್ ಮಾಲ್ ಎಂದು ಹೇಳಿಕೊಂಡು, ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಳ್ಳುವ ಮುನ್ನವೇ ಆರಂಭಗೊಂಡ ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಾರ್ವಜನಿಕರ ಪ್ರವೇಶವನ್ನು ಬೆಂಗಳೂರು ಪೊಲೀಸರು 15 ದಿನಗಳ ಕಾಲ ನಿರ್ಭಂದ ಹೇರಿದ್ದಾರೆ.

ಪಾರ್ಕಿಂಗ್ ಸಮಸ್ಯೆ, ಕನ್ನಡ ನಾಮಫಲಕ ವಿವಾದ, ಮಾಲ್ ಪ್ರವೇಶಕ್ಕೆ ಶುಲ್ಕ ಹಾಗೂ ವಿಮಾನ ನಿಲ್ದಾಣ ರಸ್ತೆಯಲ್ಲಿ ಉಂಟಾಗುತ್ತಿದ್ದ ಅತಿಯಾದ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ಕಿರಿಕಿರಿಗೆ ಒಳಗಾಗುತ್ತಿದ್ದರು. ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು, ಡಿಸೆಂಬರ್ 30 ರಂದು ಆದೇಶ ಹೊರಡಿಸಿದ್ದು, ಡಿಸೆಂಬರ್ 31 ರಿಂದ ಜನವರಿ 15 ರವರೆಗೆ ಉತ್ತರ ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆಗೆ ಒಂದು ದಿನ ಮುಂಚಿತವಾಗಿ ಈ ಆದೇಶ ಬಂದಿದೆ.

ಡಿ. 31 ಬೆಳಿಗ್ಗೆಯಿಂದ 2024ರ ಜನವರಿ 15ರ ರಾತ್ರಿ 11:59 ರವರೆಗೆ ಫೀನಿಕ್ಸ್ ಮಾಲ್ ಆಫ್ ಏಷ್ಯಾ, ಬಳ್ಳಾರಿ ರಸ್ತೆ, ಬ್ಯಾಟರಾಯನಪುರ ಹಾಗೂ ಯಲಹಂಕ ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 (1) ಮತ್ತು 144 (2) ರ ಅಡಿ ನಿಷೇಧಾಜ್ಷೆ ಜಾರಿಗೊಳಿಸಿದ್ದಾರೆ. ‘ಸಾರ್ವಜನಿಕ ನೆಮ್ಮದಿಗೆ ಕಿರಿಕಿರಿ ಮತ್ತು ಅಡಚಣೆಯನ್ನು ತಡೆಗಟ್ಟಲು, ಸುಗಮ ಸಂಚಾರ ಮತ್ತು ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಲು’ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರ ಸೂಚನೆ ಮೇರೆಗೆ ಶನಿವಾರ ಆದೇಶ ಹೊರಡಿಸಲಾಗಿದೆ.

ಬ್ಯಾಟರಾಯನಪುರದಲ್ಲಿರುವ ಫೀನಿಕ್ಸ್ ಮಾಲ್ ಆಫ್ ಏಷ್ಯಾ ಮತ್ತು ವೈಟ್‌ಫೀಲ್ಟ್‌ನಲ್ಲಿರುವ ಫೀನಿಕ್ಸ್ ಮಾರ್ಕೆಟ್‌ ಸಿಟಿಯಲ್ಲಿರುವ ಮಾಲ್ ಆಡಳಿತದ ವಿರುದ್ಧ ಕನ್ನಡ ಪರ ಹೋರಾಟಗಾರರು, ಕನ್ನಡ ಸೈನ್‌ಬೋರ್ಟ್‌ಗಳಿಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಿಂದಾಗಿ ಡಿಸೆಂಬರ್ 27 ರಂದು ಮಾಲ್ ಮುಚ್ಚಬೇಕಾಯಿತು.

ಕ್ರಿಸ್ಮಸ್ ಹಬ್ಬ ಹಾಗೂ ಅದರ ಹಿಂದಿನ ದಿನವಾದ ಭಾನುವಾರದಂದು ನಿರೀಕ್ಷೆಗೂ ಮೀರಿ ಮಾಲ್‌ಗೆ ಜನರು ತಮ್ಮ ವಾಹನಗಳ ಮೂಲಕ ಬಂದಿದ್ದರಿಂದಾಗಿ ಬಳ್ಳಾರಿ ರಸ್ತೆಯಲ್ಲಿ (ವಿಮಾನ ನಿಲ್ದಾಣ ರಸ್ತೆ) ಸಂಚಾರ ದಟ್ಟಣೆ ಉಂಟಾಗಿ, ಅಸ್ತವ್ಯಸ್ತವಾಗಿತ್ತು. ಇದರಿಂದ ಸ್ವಲ್ಪ ದಿನಗಳ ಕಾಲ ಮಾಲ್ ಮುಚ್ಚುವಂತೆ ಸಂಚಾರಿ ಪೊಲೀಸರು ಸಲಹೆ ನೀಡಬೇಕಾಯಿತು. ಮಾಲ್‌ಗೆ ಜನರ ಪ್ರವೇಶಕ್ಕೆ ₹200 ಮತ್ತು ಕಾರುಗಳಿಗೆ ₹150 ಶುಲ್ಕವನ್ನು ವಿಧಿಸಿದ್ದರಿಂದ ಜನ ಮಾಲ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಪೊಲೀಸ್ ಆಯುಕ್ತ ದಯಾನಂದ ಅವರು ಹೊರಡಿಸಿರುವ ಆದೇಶದಲ್ಲಿ, ‘ನಾಳೆ (ಡಿಸೆಂಬರ್ 31) ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕಿರಿಕಿರಿ, ಅಡಚಣೆ, ಅಪರಾಧಗಳು ಮತ್ತು ಸಾರ್ವಜನಿಕ ನೆಮ್ಮದಿಗೆ ಭಂಗವನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ತುರ್ತು ಕ್ರಮವು ತಕ್ಷಣದ ಅಗತ್ಯವಿದೆ; ಅನುಸರಿಸಿ’ ಎಂದು ಹೇಳಿದ್ದಾರೆ.

‘ಮಾಲ್ ಹಾಗೂ ಅದರ ಸುತ್ತಮುತ್ತ ಪ್ರತಿದಿನ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಘಟನೆಗಳು ನಡೆಯುತ್ತಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ತೊಂದರೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ, ವ್ಯತ್ಯಯ, ಶಬ್ದ ಮಾಲಿನ್ಯ, ಸಾರ್ವಜನಿಕರಿಗೆ ತೊಂದರೆ, ಶಾಂತಿ ಕದಡುವ ಸಾಧ್ಯತೆ ಹೆಚ್ಚಳವಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದು ವಿಶೇಷವಾಗಿ ಡಿಸೆಂಬರ್ 31 ರಂದು ಹೊಸ ವರ್ಷದ ಆಚರಣೆಯ ಸಂದರ್ಭಗಳಿಗೆ ಅನ್ವಯಿಸುತ್ತದೆ. ಜನವರಿ 13, 2024 ರಂದು ಎರಡನೇ ಶನಿವಾರ ಮತ್ತು ಜನವರಿ 14, 2024 ರಂದು ಭಾನುವಾರದಂದು ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಸಮಯದಲ್ಲಿ ಮಾಲ್‌ಗೆ ಹೆಚ್ಚಿನ ಜನರು ಭೇಟಿ ನೀಡುತ್ತಾರೆ. ಸಾರ್ವಜನಿಕರಿಗೆ ಮೊದಲಿಗಿಂತ ಹೆಚ್ಚಿನ ಅನಾನುಕೂಲತೆ ಮತ್ತು ತೊಂದರೆಗೆ ಕಾರಣವಾಗುತ್ತದೆ’ ಎಂದು ದಯಾನಂದ್ ಹೇಳಿದ್ದಾರೆ.

ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ವರದಿ ಪ್ರಕಾರ, ‘ಫೀನಿಕ್ಸ್ ಮಾಲ್ ಆಫ್ ಏಷ್ಯಾ’ ಕಟ್ಟಡದಲ್ಲಿ ಕನಿಷ್ಠ 10,000 ಕಾರುಗಳು ಮತ್ತು 10,000 ದ್ವಿಚಕ್ರ ವಾಹನಗಳಿಗೆ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸುವ ಅಗತ್ಯವಿದೆ. ಭೇಟಿ ನೀಡುವ ಸಾರ್ವಜನಿಕರಿಗೆ ಸಾಕಷ್ಟು ಪಾರ್ಕಿಂಗ್ ಸ್ಥಳಗಳನ್ನು ಒದಗಿಸಲು ಮಾಲ್ ಆಡಳಿತ ಮಂಡಳಿ ಅಸಮರ್ಥವಾಗಿದೆ. ಇದರಿಂದ ಸ್ಥಳೀಯ ನಿವಾಸಿಗಳು, ಪ್ರಯಾಣಿಕರು, ಸಾರ್ವಜನಿಕರು ಮತ್ತು ರೋಗಿಗಳು ತೊಂದರೆ ಅನುಭವಿಸುವಂತಾಗಿದೆ’ ಎಂದು ಹೇಳಿದ್ದಾರೆ.

‘ಈ ವಿಷಯಗಳನ್ನು ನಿರ್ಲಕ್ಷಿಸಿದರೆ, ಸಾರ್ವಜನಿಕರಲ್ಲಿ ಗಲಾಟೆಗಳು ಮತ್ತು ಆಗಾಗ್ಗೆ ವಾಗ್ವಾದಗಳು ಉಂಟಾಗುತ್ತವೆ. ಮಾಲ್‌ಗೆ ಸಾರ್ವಜನಿಕ ಪ್ರವೇಶವನ್ನು ಸೂಕ್ತವಾಗಿ ನಿರ್ಬಂಧಿಸುವುದು ಮತ್ತು ವಾಹನ ನಿಲುಗಡೆಗೆ ಸ್ಥಳಾವಕಾಶದ ಕೊರತೆಯಿಂದ ಉಂಟಾಗುವ ಅಡಚಣೆ ಮತ್ತು ಸಂಚಾರ ದಟ್ಟಣೆಯನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ’ ಎಂದಿದ್ದಾರೆ.

‘ಒಸಿ’ ಹಿಂಪಡೆಯಲು ಬಿಬಿಎಂಪಿಗೆ ಪೊಲೀಸರ ಒತ್ತಾಯ:

ಮಾಲ್‌ ಆರಂಭಕ್ಕೆ ನೀಡಲಾದ ‘ಭಾಗಶಃ ಆಕ್ಯುಪೆನ್ಸಿ ಸರ್ಟಿಫಿಕೇಟ್’ (ಒಸಿ) ಹಿಂಪಡೆಯಬೇಕು ಅಥವಾ ರದ್ದು ಮಾಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳೊಂದಿಗೆ ಬೆಂಗಳೂರು ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿ ನೀಡಿರುವ ಭಾಗಶಃ ಒಸಿ ಪ್ರಕಾರ, ಮಾಲ್ 12 ಅಂತಸ್ತಿನ ಕಟ್ಟಡವಾಗಿದೆ (2 ನೆಲಮಾಳಿಗೆಯ ಮಹಡಿಗಳನ್ನು ಒಳಗೊಂಡಂತೆ). ನೆಲ ಮಹಡಿಯಿಂದ ಮೂರನೇ ಮಹಡಿಯವರೆಗೆ ಒಟ್ಟು 86,421 ಚದರ ಮೀಟರ್ ವಿಸ್ತೀರ್ಣವಿದೆ. ಆದಾಗ್ಯೂ, ಮಾಲ್ 2,324 ಕಾರುಗಳು ಮತ್ತು ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಕೇವಲ ಎರಡು ನೆಲಮಾಳಿಗೆಗಳನ್ನು ಹೊಂದಿದೆ. ‘ಈ ಮಾಲ್‌ನಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶವಿಲ್ಲದೇ ಇರುವುದರಿಂದ ಇಲ್ಲಿಗೆ ಬರುವ ಸಾರ್ವಜನಿಕರ ವಾಹನಗಳು ಒಳಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಪ್ರವೇಶ ದ್ವಾರದಲ್ಲೇ ಕಾರುಗಳು ಸರತಿ ಸಾಲಿನಲ್ಲಿ ನಿಂತಿದ್ದು, ಮುಖ್ಯರಸ್ತೆಯ ಪಕ್ಕದಲ್ಲಿರುವ ಸರ್ವಿಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಹೆದ್ದಾರಿಯ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳ ಸಂಚಾರ ದೀರ್ಘಕಾಲದವರೆಗೆ ಸ್ಥಗಿತಗೊಳ್ಳಲು ಕಾರಣವಾಗುತ್ತದೆ’ ಎಂದು ಪೊಲೀಸ್ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಮಾಲ್ ಆವರಣದಲ್ಲಿ ಸಾಕಷ್ಟು ಪಾರ್ಕಿಂಗ್ ಸ್ಥಳವಿಲ್ಲ, ಸುಮಾರು 2,000 ಕಾರುಗಳು ಮತ್ತು 10,000 ದ್ವಿಚಕ್ರ ವಾಹನಗಳನ್ನು ಮಾಲ್‌ನ ಹೊರಗಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗಿತ್ತು. ಪರಿಣಾಮವಾಗಿ, ಸರ್ವೀಸ್ ರಸ್ತೆ ಮತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ತೀವ್ರವಾಗಿ ಅಸ್ತವ್ಯಸ್ತಗೊಂಡಿದ್ದು, ಇದು ಸ್ಥಳೀಯರು ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಯನ್ನು ಉಂಟುಮಾಡಿದೆ.

ವಿಪರೀತ ಶಬ್ದ ಮಾಲಿನ್ಯ:

ಮಾಲ್‌ನ ಎಕ್ಸಾಸ್ಟ್ ಬ್ಲೋವರ್‌ಗಳು ಹೆಚ್ಚಿನ ಮಟ್ಟದ ಶಬ್ದ ಮಾಲಿನ್ಯವನ್ನು ಉಂಟುಮಾಡುತ್ತಿದ್ದು, ಇದು ರಾತ್ರಿಯಲ್ಲಿ ಮಲಗಲು ತೊಂದರೆ ಉಂಟು ಮಾಡುತ್ತಿದೆ ಎಂದು ಸ್ಥಳೀಯ ನಿವಾಸಿಗಳಿಂದ ಹಲವಾರು ದೂರುಗಳು ಬಂದಿವೆ. ಇದರಿಂದ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡುವುದು ಸವಾಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ವರದಿಯ ಪ್ರಕಾರ, ಶಬ್ದ ಮಾಲಿನ್ಯವು ನಿಗದಿತ ಮಿತಿಯನ್ನು ಮೀರಿದೆ. ಯಲಹಂಕ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಶಬ್ದ ಮಾಲಿನ್ಯವನ್ನು ತಕ್ಷಣವೇ ನಿಲ್ಲಿಸುವಂತೆ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಮಾಲ್ ವ್ಯವಸ್ಥಾಪಕರ ಸಮಜಾಯಿಷಿ ಪ್ರಕಾರ, ‘ಮಾಲ್‌ನಲ್ಲಿ ದೊಡ್ಡ ಸಭೆ ಮತ್ತು ನೆಲಮಾಳಿಗೆಯ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳು ಇದ್ದಾಗ, ಬ್ಲೋವರ್‌ಗಳು ಅನಿವಾರ್ಯವಾಗಿ ಹೆಚ್ಚಿನ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತವೆ’ ಎಂದು ಹೇಳಿದ್ದಾರೆ.

ಈ ಹೆದ್ದಾರಿಯು ಬ್ಯಾಟರಾಯನಪುರ, ಸಹಕಾರ ನಗರ, ನ್ಯಾಯಾಂಗ ಬಡಾವಣೆ, ಜಕ್ಕೂರು ಪ್ರದೇಶ, ಎನ್‌ಟಿಐ ಲೇಔಟ್ ಮತ್ತು ಉತ್ತರ ಬೆಂಗಳೂರಿನ ಇತರ ಜನನಿಬಿಡ ಪ್ರದೇಶಗಳನ್ನು ಹೆಬ್ಬಾಳದ ಮೂಲಕ ನಗರದ ವಿವಿಧ ಭಾಗಗಳಿಗೆ ಸಂಪರ್ಕಿಸುತ್ತದೆ. ಹೆಚ್ಚುವರಿಯಾಗಿ, ಪ್ರಮುಖ ಆಸ್ಪತ್ರೆಗಳು ಮತ್ತು ಕಚೇರಿ ಸ್ಥಳಗಳು ಈ ಹೆದ್ದಾರಿಯ ಪಕ್ಕದಲ್ಲಿ ಕಾರ್ಯನಿರ್ವಹಿಸುತ್ತವೆ, ಇದು ಬೆಂಗಳೂರಿನ ಉತ್ತರ ಪ್ರದೇಶಗಳಿಗೆ ಪ್ರಮುಖ ಜೀವನಾಡಿಯಾಗಿದೆ.

ಮಾಲ್‌ನಿಂದ ಉಂಟಾಗುತ್ತಿರುವ ದಟ್ಟಣೆಯಿಂದಾಗಿ, ಸುತ್ತಮುತ್ತಲಿನ ಸ್ಥಳೀಯ ಜನರ ದೈನಂದಿನ ಜೀವನದ ಮೇಲೆ ಹೆಚ್ಚು ದುಷ್ಪರಿಣಾಮ ಬೀರುತ್ತದೆ. ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರಯಾಣದ ಸಮಯದಲ್ಲಿ ತೊಂದರೆ ಉಂಟಾಗುತ್ತಿದೆ. ವಿವಿಧ ಸ್ಥಳೀಯ ಸಂಸ್ಥೆಗಳು, ಶಾಲೆಗಳು ಮತ್ತು ಕಾಲೇಜುಗಳು ಈ ಬಗ್ಗೆ ದೂರುಗಳನ್ನು ಸಲ್ಲಿಸಿವೆ. ಮಾಲ್‌ನಿಂದ ಉಂಟಾದ ಅವ್ಯವಸ್ಥೆಯ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಡಿಸೆಂಬರ್ 24ರಂದು ಮಾಲ್‌ನಿಂದ ಉಂಟಾದ ಅನಾನುಕೂಲತೆಯ ವಿರುದ್ಧ ಸ್ಥಳೀಯ ನಿವಾಸಿಗಳಿಂದ ಹಠಾತ್ ಪ್ರತಿಭಟನೆಯನ್ನೂ ನಡೆಸಬೇಕಾಯಿತು.

ಇದನ್ನೂ ಓದಿ; ಬಾಹ್ಯ ಏಜೆನ್ಸಿಗಳಿಗೆ ಪ್ರವೇಶವಿಲ್ಲ, ಇವಿಎಂ ಪ್ರೋಗ್ರಾಮಿಂಗ್ ಪ್ರಕ್ರಿಯೆಯು ದೃಢವಾಗಿದೆ: ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...