Homeಮುಖಪುಟಕೇರಳ ಚಿನ್ನ ಕಳ್ಳ ಸಾಗಾಣಿಕೆ; ಪ್ರಕರಣವನ್ನು ’ಎನ್‌ಐಎ’ಗೆ ವಹಿಸಿದ ಕೇಂದ್ರ ಸರ್ಕಾರ

ಕೇರಳ ಚಿನ್ನ ಕಳ್ಳ ಸಾಗಾಣಿಕೆ; ಪ್ರಕರಣವನ್ನು ’ಎನ್‌ಐಎ’ಗೆ ವಹಿಸಿದ ಕೇಂದ್ರ ಸರ್ಕಾರ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಬುಧವಾರ ಪತ್ರ ಬರೆದು ಈ ಪ್ರಕರಣದ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುವಂತೆ ಕೋರಿದ್ದರು.

- Advertisement -
- Advertisement -

ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ವಿಚಾರಣೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಗುರುವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಅನುಮತಿ ನೀಡಿದೆ ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಸಂಘಟಿತ ಕಳ್ಳಸಾಗಣೆ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು ಎಂದಿರುವ ಸಚಿವಾಲಯವು, ಅದಕ್ಕಾಗಿ ಪ್ರಕರಣದ ತನಿಖೆ ನಡೆಸಲು ಅವಕಾಶ ಎನ್‌ಐಎಗೆ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಬುಧವಾರ ಪತ್ರ ಬರೆದು ಈ ಪ್ರಕರಣದ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುವಂತೆ ಕೋರಿದ್ದಾರೆ. ಅಲ್ಲದೆ ಕೇರಳದ ಕಾಂಗ್ರೆಸ್ ಘಟಕ ಕೂಡಾ ಬುಧವಾದ  ಪತ್ರ ಬರೆದಿದ್ದು ಕೇಂದ್ರ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುವಂತೆ ಕೋರಿತ್ತು.

ಜುಲೈ 5 ರಂದು ತಿರುವನಂತನಪುರಂ ವಿಮಾನ ನಿಲ್ಧಾಣದ ಕಸ್ಟಮ್ ಅಧಿಕಾರಿಗಳು 30 ಕೆಜಿ ಬಂಗಾರವನ್ನು ಯುಎಇ ರಾಜತಾಂತ್ರಿಕ ಬ್ಯಾಗ್‌ನಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದರು.

ಈ ಕಳ್ಳ ಸಾಗಾಣಿಕೆಯಲ್ಲಿ ರಾಯಭಾರಿ ಕಚೇರಿಯ ಮಾಜಿ ಉದ್ಯೋಗಿಗಳಾದ ಸ್ವಪ್ನಾ ಸುರೇಶ್ ಹಾಗೂ ಸರಿತ್‌ ನಾಯರ್‌ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಇಬ್ಬರೂ ಆರು ತಿಂಗಳ ಹಿಂದಿನವರೆಗೂ ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡಿದ್ದರು ಎನ್ನಲಾಗಿದೆ.

ಅಧಿಕಾರಿಗಳು ಚಿನ್ನದ ಮೌಲ್ಯವನ್ನು 15  ಕೋಟಿ ಎಂದು ಹೇಳಿದ್ದಾರೆ. ಸರಿತ್ ನಾಯರ್‌ ಕಸ್ಟಮ್ಸ್ ವಿಭಾಗದ ವಶದಲ್ಲಿದ್ದರೆ, ಸ್ವಪ್ನಾ ಸುರೇಶ್ ಪರಾರಿಯಾಗಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರು ಸ್ವಪ್ನಾ ಸುರೇಶ್ ಅವರೊಂದಿಗೆ ಸಂಬಂಧ ಹೊಂದಿದ್ದಾರೆಂದು ಆರೋಪಗಳೆದ್ದಾಗ, ಕೇರಳ ಸರ್ಕಾರ ಶಿವಶಂಕರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ.

“ಈ ಪ್ರಕರಣವನ್ನಿಟ್ಟುಕೊಂಡು ರಾಜ್ಯದ ಕಮ್ಯೂನಿಸ್ಟ್ ಸರ್ಕಾರವನ್ನು ಗುರಿಯಾಗಿಸುತ್ತಿದ್ದಾರೆ, ಆದರೆ ನಮಗೆ ಮರೆಮಾಡಲು ಏನೂ ಇಲ್ಲ. ಯಾವುದೇ ತನಿಖೆಗೆ ರಾಜ್ಯ ಸಿದ್ಧ ಎಂದು ಮುಖ್ಯಮಂತ್ರಿ ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಆದರೆ ತನಿಖೆಯನ್ನು ವಿಳಂಬ ಮಾಡಿ ಸರ್ಕಾರವನ್ನು ಮುಜುಗರಕ್ಕೀಡಾಗುವ ಹಾಗೆ ಮಾಡುತ್ತಿದ್ದಾರೆ ಎಂದು ಅನುಮಾನ ಬರುತ್ತಿದೆ” ಎಂದು ಎಡ ಪ್ರಜಾಸತ್ತಾತ್ಮಕ ಒಕ್ಕೂಟದ ಕನ್ವೀನರ್ ವಿ.ಎಸ್.ವಿಜಯರಾಘವನ್ ಅಭಿಪ್ರಾಯಪಟ್ಟಿದ್ದಾರೆ.


ಓದಿ: ಕೇರಳದಲ್ಲಿ ಮತ್ತೆ ಎಡರಂಗ: ಸಿಎಂ ಪಿಣರಾಯಿ ಪರ ಒಲವು ಎಂದ ಏಷ್ಯಾನೆಟ್ ಸಮೀಕ್ಷೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...