Homeಮುಖಪುಟಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

ಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

- Advertisement -
- Advertisement -

ಉಬರ್ ಆಪ್ ಬಳಸಿಕೊಂಡು 800ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಎಂಬಾತ ಫೆಬ್ರವರಿಯಲ್ಲಿ ತನ್ನ ತಪ್ಪು ಒಪ್ಪಿಕೊಂಡಿದ್ದನು.ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ ಎಂದು ಹಂಗಾಮಿ ಅಟಾರ್ನಿ ಟೆಸ್ಸಾ ಎಂ ಗಾರ್ಮನ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ನಿವಾಸಿಯಾಗಿರುವ ಸಿಂಗ್‌ಗೆ ಅಮೆರಿಕ ಜಿಲ್ಲಾ ನ್ಯಾಯಾಲಯವೊಂದು ಲಾಭಕ್ಕಾಗಿ ಹಾಗೂ ಅಕ್ರಮ ಹಣ ವರ್ಗಾವಣೆ ಎಸಗುವ ಸಂಚಿಗಾಗಿ 45 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

”ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜಿಂದರ್ ಪಾಲ್ ಸಿಂಗ್ 800ಕ್ಕೂ ಅಧಿಕ ಜನರನ್ನು ಅಮೆರಿಕದ ಉತ್ತರ ಗಡಿಯೊಳಗೆ ಹಾಗೂ ವಾಷಿಂಗ್ಟನ್‌ ಒಳಗೆ ಕಳ್ಳಸಾಗಣೆ ಮಾಡಿದ್ದಾನೆ” ಎಂದು ಗಾರ್ಮನ್ ಹೇಳಿದ್ದಾರೆ.

”ಸಿಂಗ್ ಎಸಗಿದ ಕೃತ್ಯವು ಅಮೆರಿಕಕ್ಕೆ ಭದ್ರತಾ ಅಪಾಯ ಉಂಟು ಮಾಡಿರುವುದು ಮಾತ್ರವಲ್ಲದೆ, ಭಾರತದಿಂದ ಅಮೆರಿಕಕ್ಕೆ ಹಲವು ವಾರಗಳ ಕಳ್ಳಸಾಗಣೆ ಮಾರ್ಗದಲ್ಲಿ ಬರುವವರ ಭದ್ರತೆ ಹಾಗೂ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

”ಅಮೆರಿಕದಲ್ಲಿ ಉತ್ತಮ ಜೀವನ ಕಂಡುಕೊಳ್ಳುವ ಆಶಯವಿರುವ ಭಾರತದ ಪ್ರಜೆಗಳ ಮೇಲೆ ಸಂಚು ನಡೆಸಿ ಅವರಿಂದ ಸುಮಾರು 70,000 ಅಮೆರಿಕನ್ ಡಾಲರ್ ವಸೂಲಿ ಮಾಡಿಕೊಂಡು ಕಳ್ಳಸಾಗಣೆ ಮಾಡುವುದರಲ್ಲಿ ಸಿಂಗ್ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ.

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದನು. ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ತಂಡಗಳ ಅಂದಾಜಿನ ಪ್ರಕಾರ, 2018ರ ಜುಲೈನಿಂದ 2022ರ ಏಪ್ರಿಲ್‌ ನಡುವೆ ಈ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾದ 17 ಉಬರ್ ಖಾತೆಗಳು 80,000 ಡಾಲರ್‌ಗೂ ಅಧಿಕ ಹಣ ವಸೂಲಿ ಮಾಡಿವೆ.  ರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಉಬರ್ ವಾಹನದ ಮೂಲಕ ಸಾಗಣೆ

ಸಿಂಗ್‌ನ ಹಿಂಬಾಲಕರು ಕೆನಡಾ ಮೂಲಕ ಕಳ್ಳಮಾರ್ಗದಿಂದ ಅಮೆರಿಕ ಗಡಿಯೊಳಗೆ ಬಂದ ಭಾರತೀಯ ಪ್ರಜೆಗಳನ್ನು ಗಡಿಯಿಂದ ವಾಷಿಂಗ್ಟನ್ ಹೊರಗೆ ಸಾಗಿಸಲು ಒನ್ ವೇ ಪ್ರಯಾಣಕ್ಕಾಗಿ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಈ ಚಟುವಟಿಕೆಗಳು ಗಡಿ ಭಾಗದಲ್ಲಿ ನಸುಕಿನಲ್ಲಿ ಶುರುವಾಗುತ್ತಿತ್ತು. ಕಳ್ಳಸಾಗಣೆಯನ್ನು ಎರಡು ವಿಭಿನ್ನ ಪ್ರಯಾಣಗಳ ಮೂಲಕ ನಡೆಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ, ದೊಡ್ಡ ವ್ಯಕ್ತಿಗಳ ಸೋಗಿನಲ್ಲಿ ಆತನ ಸಹಚರರು ಕಳ್ಳಸಾಗಣೆ ಕೃತ್ಯ ನಡೆಸುತ್ತಿದ್ದರು. ಸಿಂಗ್ ಬಳಿ 45,000 ಡಾಲರ್ ನಗದು ಹಾಗೂ ನಕಲಿ ಗುರುತು ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...