Homeಮುಖಪುಟಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

ಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

- Advertisement -
- Advertisement -

ಉಬರ್ ಆಪ್ ಬಳಸಿಕೊಂಡು 800ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಎಂಬಾತ ಫೆಬ್ರವರಿಯಲ್ಲಿ ತನ್ನ ತಪ್ಪು ಒಪ್ಪಿಕೊಂಡಿದ್ದನು.ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ ಎಂದು ಹಂಗಾಮಿ ಅಟಾರ್ನಿ ಟೆಸ್ಸಾ ಎಂ ಗಾರ್ಮನ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ನಿವಾಸಿಯಾಗಿರುವ ಸಿಂಗ್‌ಗೆ ಅಮೆರಿಕ ಜಿಲ್ಲಾ ನ್ಯಾಯಾಲಯವೊಂದು ಲಾಭಕ್ಕಾಗಿ ಹಾಗೂ ಅಕ್ರಮ ಹಣ ವರ್ಗಾವಣೆ ಎಸಗುವ ಸಂಚಿಗಾಗಿ 45 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

”ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜಿಂದರ್ ಪಾಲ್ ಸಿಂಗ್ 800ಕ್ಕೂ ಅಧಿಕ ಜನರನ್ನು ಅಮೆರಿಕದ ಉತ್ತರ ಗಡಿಯೊಳಗೆ ಹಾಗೂ ವಾಷಿಂಗ್ಟನ್‌ ಒಳಗೆ ಕಳ್ಳಸಾಗಣೆ ಮಾಡಿದ್ದಾನೆ” ಎಂದು ಗಾರ್ಮನ್ ಹೇಳಿದ್ದಾರೆ.

”ಸಿಂಗ್ ಎಸಗಿದ ಕೃತ್ಯವು ಅಮೆರಿಕಕ್ಕೆ ಭದ್ರತಾ ಅಪಾಯ ಉಂಟು ಮಾಡಿರುವುದು ಮಾತ್ರವಲ್ಲದೆ, ಭಾರತದಿಂದ ಅಮೆರಿಕಕ್ಕೆ ಹಲವು ವಾರಗಳ ಕಳ್ಳಸಾಗಣೆ ಮಾರ್ಗದಲ್ಲಿ ಬರುವವರ ಭದ್ರತೆ ಹಾಗೂ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

”ಅಮೆರಿಕದಲ್ಲಿ ಉತ್ತಮ ಜೀವನ ಕಂಡುಕೊಳ್ಳುವ ಆಶಯವಿರುವ ಭಾರತದ ಪ್ರಜೆಗಳ ಮೇಲೆ ಸಂಚು ನಡೆಸಿ ಅವರಿಂದ ಸುಮಾರು 70,000 ಅಮೆರಿಕನ್ ಡಾಲರ್ ವಸೂಲಿ ಮಾಡಿಕೊಂಡು ಕಳ್ಳಸಾಗಣೆ ಮಾಡುವುದರಲ್ಲಿ ಸಿಂಗ್ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ.

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದನು. ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ತಂಡಗಳ ಅಂದಾಜಿನ ಪ್ರಕಾರ, 2018ರ ಜುಲೈನಿಂದ 2022ರ ಏಪ್ರಿಲ್‌ ನಡುವೆ ಈ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾದ 17 ಉಬರ್ ಖಾತೆಗಳು 80,000 ಡಾಲರ್‌ಗೂ ಅಧಿಕ ಹಣ ವಸೂಲಿ ಮಾಡಿವೆ.  ರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಉಬರ್ ವಾಹನದ ಮೂಲಕ ಸಾಗಣೆ

ಸಿಂಗ್‌ನ ಹಿಂಬಾಲಕರು ಕೆನಡಾ ಮೂಲಕ ಕಳ್ಳಮಾರ್ಗದಿಂದ ಅಮೆರಿಕ ಗಡಿಯೊಳಗೆ ಬಂದ ಭಾರತೀಯ ಪ್ರಜೆಗಳನ್ನು ಗಡಿಯಿಂದ ವಾಷಿಂಗ್ಟನ್ ಹೊರಗೆ ಸಾಗಿಸಲು ಒನ್ ವೇ ಪ್ರಯಾಣಕ್ಕಾಗಿ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಈ ಚಟುವಟಿಕೆಗಳು ಗಡಿ ಭಾಗದಲ್ಲಿ ನಸುಕಿನಲ್ಲಿ ಶುರುವಾಗುತ್ತಿತ್ತು. ಕಳ್ಳಸಾಗಣೆಯನ್ನು ಎರಡು ವಿಭಿನ್ನ ಪ್ರಯಾಣಗಳ ಮೂಲಕ ನಡೆಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ, ದೊಡ್ಡ ವ್ಯಕ್ತಿಗಳ ಸೋಗಿನಲ್ಲಿ ಆತನ ಸಹಚರರು ಕಳ್ಳಸಾಗಣೆ ಕೃತ್ಯ ನಡೆಸುತ್ತಿದ್ದರು. ಸಿಂಗ್ ಬಳಿ 45,000 ಡಾಲರ್ ನಗದು ಹಾಗೂ ನಕಲಿ ಗುರುತು ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...