Homeಮುಖಪುಟಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

ಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

- Advertisement -
- Advertisement -

ಉಬರ್ ಆಪ್ ಬಳಸಿಕೊಂಡು 800ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಎಂಬಾತ ಫೆಬ್ರವರಿಯಲ್ಲಿ ತನ್ನ ತಪ್ಪು ಒಪ್ಪಿಕೊಂಡಿದ್ದನು.ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ ಎಂದು ಹಂಗಾಮಿ ಅಟಾರ್ನಿ ಟೆಸ್ಸಾ ಎಂ ಗಾರ್ಮನ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ನಿವಾಸಿಯಾಗಿರುವ ಸಿಂಗ್‌ಗೆ ಅಮೆರಿಕ ಜಿಲ್ಲಾ ನ್ಯಾಯಾಲಯವೊಂದು ಲಾಭಕ್ಕಾಗಿ ಹಾಗೂ ಅಕ್ರಮ ಹಣ ವರ್ಗಾವಣೆ ಎಸಗುವ ಸಂಚಿಗಾಗಿ 45 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

”ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜಿಂದರ್ ಪಾಲ್ ಸಿಂಗ್ 800ಕ್ಕೂ ಅಧಿಕ ಜನರನ್ನು ಅಮೆರಿಕದ ಉತ್ತರ ಗಡಿಯೊಳಗೆ ಹಾಗೂ ವಾಷಿಂಗ್ಟನ್‌ ಒಳಗೆ ಕಳ್ಳಸಾಗಣೆ ಮಾಡಿದ್ದಾನೆ” ಎಂದು ಗಾರ್ಮನ್ ಹೇಳಿದ್ದಾರೆ.

”ಸಿಂಗ್ ಎಸಗಿದ ಕೃತ್ಯವು ಅಮೆರಿಕಕ್ಕೆ ಭದ್ರತಾ ಅಪಾಯ ಉಂಟು ಮಾಡಿರುವುದು ಮಾತ್ರವಲ್ಲದೆ, ಭಾರತದಿಂದ ಅಮೆರಿಕಕ್ಕೆ ಹಲವು ವಾರಗಳ ಕಳ್ಳಸಾಗಣೆ ಮಾರ್ಗದಲ್ಲಿ ಬರುವವರ ಭದ್ರತೆ ಹಾಗೂ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

”ಅಮೆರಿಕದಲ್ಲಿ ಉತ್ತಮ ಜೀವನ ಕಂಡುಕೊಳ್ಳುವ ಆಶಯವಿರುವ ಭಾರತದ ಪ್ರಜೆಗಳ ಮೇಲೆ ಸಂಚು ನಡೆಸಿ ಅವರಿಂದ ಸುಮಾರು 70,000 ಅಮೆರಿಕನ್ ಡಾಲರ್ ವಸೂಲಿ ಮಾಡಿಕೊಂಡು ಕಳ್ಳಸಾಗಣೆ ಮಾಡುವುದರಲ್ಲಿ ಸಿಂಗ್ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ.

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದನು. ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ತಂಡಗಳ ಅಂದಾಜಿನ ಪ್ರಕಾರ, 2018ರ ಜುಲೈನಿಂದ 2022ರ ಏಪ್ರಿಲ್‌ ನಡುವೆ ಈ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾದ 17 ಉಬರ್ ಖಾತೆಗಳು 80,000 ಡಾಲರ್‌ಗೂ ಅಧಿಕ ಹಣ ವಸೂಲಿ ಮಾಡಿವೆ.  ರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಉಬರ್ ವಾಹನದ ಮೂಲಕ ಸಾಗಣೆ

ಸಿಂಗ್‌ನ ಹಿಂಬಾಲಕರು ಕೆನಡಾ ಮೂಲಕ ಕಳ್ಳಮಾರ್ಗದಿಂದ ಅಮೆರಿಕ ಗಡಿಯೊಳಗೆ ಬಂದ ಭಾರತೀಯ ಪ್ರಜೆಗಳನ್ನು ಗಡಿಯಿಂದ ವಾಷಿಂಗ್ಟನ್ ಹೊರಗೆ ಸಾಗಿಸಲು ಒನ್ ವೇ ಪ್ರಯಾಣಕ್ಕಾಗಿ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಈ ಚಟುವಟಿಕೆಗಳು ಗಡಿ ಭಾಗದಲ್ಲಿ ನಸುಕಿನಲ್ಲಿ ಶುರುವಾಗುತ್ತಿತ್ತು. ಕಳ್ಳಸಾಗಣೆಯನ್ನು ಎರಡು ವಿಭಿನ್ನ ಪ್ರಯಾಣಗಳ ಮೂಲಕ ನಡೆಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ, ದೊಡ್ಡ ವ್ಯಕ್ತಿಗಳ ಸೋಗಿನಲ್ಲಿ ಆತನ ಸಹಚರರು ಕಳ್ಳಸಾಗಣೆ ಕೃತ್ಯ ನಡೆಸುತ್ತಿದ್ದರು. ಸಿಂಗ್ ಬಳಿ 45,000 ಡಾಲರ್ ನಗದು ಹಾಗೂ ನಕಲಿ ಗುರುತು ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...