Homeಮುಖಪುಟಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

ಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

- Advertisement -
- Advertisement -

ಉಬರ್ ಆಪ್ ಬಳಸಿಕೊಂಡು 800ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಎಂಬಾತ ಫೆಬ್ರವರಿಯಲ್ಲಿ ತನ್ನ ತಪ್ಪು ಒಪ್ಪಿಕೊಂಡಿದ್ದನು.ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ ಎಂದು ಹಂಗಾಮಿ ಅಟಾರ್ನಿ ಟೆಸ್ಸಾ ಎಂ ಗಾರ್ಮನ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ನಿವಾಸಿಯಾಗಿರುವ ಸಿಂಗ್‌ಗೆ ಅಮೆರಿಕ ಜಿಲ್ಲಾ ನ್ಯಾಯಾಲಯವೊಂದು ಲಾಭಕ್ಕಾಗಿ ಹಾಗೂ ಅಕ್ರಮ ಹಣ ವರ್ಗಾವಣೆ ಎಸಗುವ ಸಂಚಿಗಾಗಿ 45 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

”ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜಿಂದರ್ ಪಾಲ್ ಸಿಂಗ್ 800ಕ್ಕೂ ಅಧಿಕ ಜನರನ್ನು ಅಮೆರಿಕದ ಉತ್ತರ ಗಡಿಯೊಳಗೆ ಹಾಗೂ ವಾಷಿಂಗ್ಟನ್‌ ಒಳಗೆ ಕಳ್ಳಸಾಗಣೆ ಮಾಡಿದ್ದಾನೆ” ಎಂದು ಗಾರ್ಮನ್ ಹೇಳಿದ್ದಾರೆ.

”ಸಿಂಗ್ ಎಸಗಿದ ಕೃತ್ಯವು ಅಮೆರಿಕಕ್ಕೆ ಭದ್ರತಾ ಅಪಾಯ ಉಂಟು ಮಾಡಿರುವುದು ಮಾತ್ರವಲ್ಲದೆ, ಭಾರತದಿಂದ ಅಮೆರಿಕಕ್ಕೆ ಹಲವು ವಾರಗಳ ಕಳ್ಳಸಾಗಣೆ ಮಾರ್ಗದಲ್ಲಿ ಬರುವವರ ಭದ್ರತೆ ಹಾಗೂ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

”ಅಮೆರಿಕದಲ್ಲಿ ಉತ್ತಮ ಜೀವನ ಕಂಡುಕೊಳ್ಳುವ ಆಶಯವಿರುವ ಭಾರತದ ಪ್ರಜೆಗಳ ಮೇಲೆ ಸಂಚು ನಡೆಸಿ ಅವರಿಂದ ಸುಮಾರು 70,000 ಅಮೆರಿಕನ್ ಡಾಲರ್ ವಸೂಲಿ ಮಾಡಿಕೊಂಡು ಕಳ್ಳಸಾಗಣೆ ಮಾಡುವುದರಲ್ಲಿ ಸಿಂಗ್ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ.

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದನು. ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ತಂಡಗಳ ಅಂದಾಜಿನ ಪ್ರಕಾರ, 2018ರ ಜುಲೈನಿಂದ 2022ರ ಏಪ್ರಿಲ್‌ ನಡುವೆ ಈ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾದ 17 ಉಬರ್ ಖಾತೆಗಳು 80,000 ಡಾಲರ್‌ಗೂ ಅಧಿಕ ಹಣ ವಸೂಲಿ ಮಾಡಿವೆ.  ರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಉಬರ್ ವಾಹನದ ಮೂಲಕ ಸಾಗಣೆ

ಸಿಂಗ್‌ನ ಹಿಂಬಾಲಕರು ಕೆನಡಾ ಮೂಲಕ ಕಳ್ಳಮಾರ್ಗದಿಂದ ಅಮೆರಿಕ ಗಡಿಯೊಳಗೆ ಬಂದ ಭಾರತೀಯ ಪ್ರಜೆಗಳನ್ನು ಗಡಿಯಿಂದ ವಾಷಿಂಗ್ಟನ್ ಹೊರಗೆ ಸಾಗಿಸಲು ಒನ್ ವೇ ಪ್ರಯಾಣಕ್ಕಾಗಿ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಈ ಚಟುವಟಿಕೆಗಳು ಗಡಿ ಭಾಗದಲ್ಲಿ ನಸುಕಿನಲ್ಲಿ ಶುರುವಾಗುತ್ತಿತ್ತು. ಕಳ್ಳಸಾಗಣೆಯನ್ನು ಎರಡು ವಿಭಿನ್ನ ಪ್ರಯಾಣಗಳ ಮೂಲಕ ನಡೆಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ, ದೊಡ್ಡ ವ್ಯಕ್ತಿಗಳ ಸೋಗಿನಲ್ಲಿ ಆತನ ಸಹಚರರು ಕಳ್ಳಸಾಗಣೆ ಕೃತ್ಯ ನಡೆಸುತ್ತಿದ್ದರು. ಸಿಂಗ್ ಬಳಿ 45,000 ಡಾಲರ್ ನಗದು ಹಾಗೂ ನಕಲಿ ಗುರುತು ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...