Homeಮುಖಪುಟಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

ಉಬರ್ ಆಪ್ ಬಳಸಿ 800ಕ್ಕೂ ಅಧಿಕ ಜನರ ಕಳ್ಳಸಾಗಣೆ: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಶಿಕ್ಷೆ

- Advertisement -
- Advertisement -

ಉಬರ್ ಆಪ್ ಬಳಸಿಕೊಂಡು 800ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ರಾಜಿಂದರ್ ಪಾಲ್ ಸಿಂಗ್ ಎಂಬಾತನಿಗೆ ಅಮೆರಿಕ ಜಿಲ್ಲಾ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರಾಜಿಂದರ್ ಪಾಲ್ ಸಿಂಗ್ ಅಲಿಯಾಸ್ ಜಸ್ಪಾಲ್ ಗಿಲ್ ಎಂಬಾತ ಫೆಬ್ರವರಿಯಲ್ಲಿ ತನ್ನ ತಪ್ಪು ಒಪ್ಪಿಕೊಂಡಿದ್ದನು.ಅವರು ನೂರಾರು ಭಾರತೀಯ ಪ್ರಜೆಗಳಿಗೆ ಕೆನಡಾದಿಂದ ಗಡಿ ದಾಟಲು ಸಹಾಯ ಮಾಡಿದ್ದ, ಈ ಸಮಯದಲ್ಲಿ ನಾಗರಿಕರಿಂದ 500,000 ಯುಎಸ್​ ಡಾಲರ್​ಗಿಂತ ಹೆಚ್ಚು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಭಾರತದಿಂದ ಅಮೇರಿಕಾಕ್ಕೆ ಸಾಗುವ ಕಳ್ಳಸಾಗಾಣಿಕೆ ಮಾರ್ಗದ ಮೂಲಕ ದೇಶಕ್ಕೆ ಮಾತ್ರವಲ್ಲದೆ ಜನರ ಸುರಕ್ಷತೆಗೂ ಅಪಾಯವಿದೆ ಎಂದು ಹಂಗಾಮಿ ಅಟಾರ್ನಿ ಟೆಸ್ಸಾ ಎಂ ಗಾರ್ಮನ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ನಿವಾಸಿಯಾಗಿರುವ ಸಿಂಗ್‌ಗೆ ಅಮೆರಿಕ ಜಿಲ್ಲಾ ನ್ಯಾಯಾಲಯವೊಂದು ಲಾಭಕ್ಕಾಗಿ ಹಾಗೂ ಅಕ್ರಮ ಹಣ ವರ್ಗಾವಣೆ ಎಸಗುವ ಸಂಚಿಗಾಗಿ 45 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

”ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ರಾಜಿಂದರ್ ಪಾಲ್ ಸಿಂಗ್ 800ಕ್ಕೂ ಅಧಿಕ ಜನರನ್ನು ಅಮೆರಿಕದ ಉತ್ತರ ಗಡಿಯೊಳಗೆ ಹಾಗೂ ವಾಷಿಂಗ್ಟನ್‌ ಒಳಗೆ ಕಳ್ಳಸಾಗಣೆ ಮಾಡಿದ್ದಾನೆ” ಎಂದು ಗಾರ್ಮನ್ ಹೇಳಿದ್ದಾರೆ.

”ಸಿಂಗ್ ಎಸಗಿದ ಕೃತ್ಯವು ಅಮೆರಿಕಕ್ಕೆ ಭದ್ರತಾ ಅಪಾಯ ಉಂಟು ಮಾಡಿರುವುದು ಮಾತ್ರವಲ್ಲದೆ, ಭಾರತದಿಂದ ಅಮೆರಿಕಕ್ಕೆ ಹಲವು ವಾರಗಳ ಕಳ್ಳಸಾಗಣೆ ಮಾರ್ಗದಲ್ಲಿ ಬರುವವರ ಭದ್ರತೆ ಹಾಗೂ ಸುರಕ್ಷತೆಗೆ ಕೂಡ ಅಪಾಯಕಾರಿಯಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

”ಅಮೆರಿಕದಲ್ಲಿ ಉತ್ತಮ ಜೀವನ ಕಂಡುಕೊಳ್ಳುವ ಆಶಯವಿರುವ ಭಾರತದ ಪ್ರಜೆಗಳ ಮೇಲೆ ಸಂಚು ನಡೆಸಿ ಅವರಿಂದ ಸುಮಾರು 70,000 ಅಮೆರಿಕನ್ ಡಾಲರ್ ವಸೂಲಿ ಮಾಡಿಕೊಂಡು ಕಳ್ಳಸಾಗಣೆ ಮಾಡುವುದರಲ್ಲಿ ಸಿಂಗ್ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ.

ಸಿಯಾಟಲ್ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ದಾಟುವ ಜನರಿಗೆ ಉಬರ್ ಬಳಸಲಾಗಿದೆ. 2018 ಮತ್ತು 2022 ರ ನಡುವೆ, ಸಿಂಗ್ 600 ಜನರನ್ನು ಕಳ್ಳಸಾಗಣೆ ಮಾಡಿದ್ದನು. ಆರೋಪಿಯ ನಿವಾಸದಿಂದ USD 45,000 ಮತ್ತು ಕೆಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖಾ ತಂಡಗಳ ಅಂದಾಜಿನ ಪ್ರಕಾರ, 2018ರ ಜುಲೈನಿಂದ 2022ರ ಏಪ್ರಿಲ್‌ ನಡುವೆ ಈ ಕಳ್ಳಸಾಗಣೆ ಕೃತ್ಯದಲ್ಲಿ ಭಾಗಿಯಾದ 17 ಉಬರ್ ಖಾತೆಗಳು 80,000 ಡಾಲರ್‌ಗೂ ಅಧಿಕ ಹಣ ವಸೂಲಿ ಮಾಡಿವೆ.  ರಾಜಿಂದರ್ ಸಿಂಗ್ ಕೂಡ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದು, ಜೈಲು ಶಿಕ್ಷೆ ಮುಗಿದ ಬಳಿಕ ಅವರನ್ನು ಗಡಿಪಾರು ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಉಬರ್ ವಾಹನದ ಮೂಲಕ ಸಾಗಣೆ

ಸಿಂಗ್‌ನ ಹಿಂಬಾಲಕರು ಕೆನಡಾ ಮೂಲಕ ಕಳ್ಳಮಾರ್ಗದಿಂದ ಅಮೆರಿಕ ಗಡಿಯೊಳಗೆ ಬಂದ ಭಾರತೀಯ ಪ್ರಜೆಗಳನ್ನು ಗಡಿಯಿಂದ ವಾಷಿಂಗ್ಟನ್ ಹೊರಗೆ ಸಾಗಿಸಲು ಒನ್ ವೇ ಪ್ರಯಾಣಕ್ಕಾಗಿ ವಾಹನಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಈ ಚಟುವಟಿಕೆಗಳು ಗಡಿ ಭಾಗದಲ್ಲಿ ನಸುಕಿನಲ್ಲಿ ಶುರುವಾಗುತ್ತಿತ್ತು. ಕಳ್ಳಸಾಗಣೆಯನ್ನು ಎರಡು ವಿಭಿನ್ನ ಪ್ರಯಾಣಗಳ ಮೂಲಕ ನಡೆಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ, ದೊಡ್ಡ ವ್ಯಕ್ತಿಗಳ ಸೋಗಿನಲ್ಲಿ ಆತನ ಸಹಚರರು ಕಳ್ಳಸಾಗಣೆ ಕೃತ್ಯ ನಡೆಸುತ್ತಿದ್ದರು. ಸಿಂಗ್ ಬಳಿ 45,000 ಡಾಲರ್ ನಗದು ಹಾಗೂ ನಕಲಿ ಗುರುತು ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...