Homeಮುಖಪುಟರೈಲು ಅಪಘಾತ | 'ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?': ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ರೈಲು ಅಪಘಾತ | ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

- Advertisement -
- Advertisement -

ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡಿದ್ದರೂ, ಯಾವುದೇ ಪಾಠ ಕಲಿತಿಲ್ಲ. ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಜವಾಬ್ದಾರಿಯು ಮೇಲ್ಭಾಗದಿಂದ (ಕೇಂದ್ರದಿಂದ) ಪ್ರಾರಂಭವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದು, ರೈಲು ಅಪಘಾತಗಳು ಸಂಭವಿಸಿದಾಗ ಅದನ್ನು ಕೆಳ ಹಂತದ ಸಿಬ್ಬಂದಿಯ ತಲೆಗೆ ಕಟ್ಟಬೇಡಿ ಎಂದಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಹುಲ್ ಗಾಂಧಿ, “ಮೈಸೂರು-ದರ್ಭಾಂಗ ರೈಲು ಅಪಘಾತವು ಭೀಕರವಾದ ಬಾಲಸೋರ್ ಅಪಘಾತವನ್ನು ಪ್ರತಿಬಿಂಬಿಸುತ್ತದೆ. ಒಂದು ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹಲವಾರು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ, ಕೇಂದ್ರ ಸರ್ಕಾರ ಯಾವುದೇ ಪಾಠಗಳನ್ನು ಕಲಿತಿಲ್ಲ. ಉತ್ತರದಾಯಿತ್ವವು ಮೇಲ್ಭಾಗದಿಂದ ಪ್ರಾರಂಭವಾಗುತ್ತದೆ. ಈ ಸರ್ಕಾರವು ಎಚ್ಚೆತ್ತುಕೊಳ್ಳುವ ಮೊದಲು ಇನ್ನೂ ಎಷ್ಟು ಕುಟುಂಬಗಳು ಬಲಿಯಾಗಬೇಕು? ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ರೈಲು ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ. ಒಂದರ ನಂತರ ಒಂದರಂತೆ ಸಂಭವಿಸುತ್ತಿದ್ದರೂ, ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ” ಎಂದು ಅವರು ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

“ಸುರಕ್ಷಿತ ರೈಲು ಪ್ರಯಾಣದ ಹೊಣೆಗಾರಿಕೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಳ್ಳದ ಕಾರಣ, ದೇಶದ ಕೋಟಿಗಟ್ಟಲೆ ಜನ ಸಾಮಾನ್ಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭಯ ಮತ್ತು ಅವ್ಯವಸ್ಥೆಯ ಚಕ್ರಗಳ ಮೇಲೆ ಓಡುವ ರೈಲುಗಳಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಮತ್ತೊಮ್ಮೆ, ತಮಿಳುನಾಡಿನಲ್ಲಿ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಲಸೋರ್‌ನಂತಹ ಅಪಘಾತ ಸಂಭವಿಸಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.

ನಿನ್ನೆ(ಅ.11) ರಾತ್ರಿ 8:30ರ ಸುಮಾರಿಗೆ ಚೆನ್ನೈ-ಗುಡೂರು ವಿಭಾಗದ ಪೊನ್ನೇರಿ ಮತ್ತು ಕವರೈಪ್ಪೆಟ್ಟೈ ನಡುವೆ ಸಂಭವಿಸಿದ ಈ ಅಪಘಾತದಲ್ಲಿ ಪ್ಯಾಸೆಂಜರ್ ರೈಲಿನ 12 ರಿಂದ 13 ಬೋಗಿಗಳು ಹಳಿ ತಪ್ಪಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ತಪ್ಪಾಗಿ ಪ್ರವೇಶಿಸಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್‌ ರೈಲಿನಲ್ಲಿದ್ದ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ : ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...